AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020ರಿಂದ 466 ಎನ್‌ಜಿಒಗಳು ವಿದೇಶಿ ದೇಣಿಗೆ ಪರವಾನಗಿ ನವೀಕರಣವನ್ನು ನಿರಾಕರಿಸಿವೆ: ಕೇಂದ್ರ

ವಿದೇಶಿ ನಿಧಿಯನ್ನು ಸ್ವೀಕರಿಸಲು ಕಡ್ಡಾಯವಾಗಿರುವ ಪರವಾನಗಿಗಳ ನವೀಕರಣಕ್ಕಾಗಿ ಅರ್ಜಿ ಸಲ್ಲಿಸದ ಕಾರಣ ಕೇಂದ್ರವು 5,789 ಸಂಸ್ಥೆಗಳನ್ನು ಎಫ್​​ಸಿಆರ್​​ಎ ವ್ಯಾಪ್ತಿಯಿಂದ ತೆಗೆದುಹಾಕಿದೆ.

2020ರಿಂದ 466 ಎನ್‌ಜಿಒಗಳು ವಿದೇಶಿ ದೇಣಿಗೆ ಪರವಾನಗಿ ನವೀಕರಣವನ್ನು ನಿರಾಕರಿಸಿವೆ: ಕೇಂದ್ರ
ಸಂಸತ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 29, 2022 | 2:46 PM

ದೆಹಲಿ: 2020 ರಿಂದ 466 ಸರ್ಕಾರೇತರ ಸಂಸ್ಥೆಗಳ (NGO) ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆ (FCRA) ಅಡಿಯಲ್ಲಿ ಪರವಾನಗಿ ನವೀಕರಣವನ್ನು ನಿರಾಕರಿಸಿವೆ ಎಂದು ಕೇಂದ್ರ ಗೃಹ ಸಚಿವಾಲಯ (Union home ministry)ಮಂಗಳವಾರ ಸಂಸತ್​​ನಲ್ಲಿ ತಿಳಿಸಿದೆ. 2020 ರಲ್ಲಿ 100, 2021 ರಲ್ಲಿ 341 ಮತ್ತು ಈ ವರ್ಷ 25 ಎನ್​​ಜಿಒಗಳು ಪರವಾನಗಿ ನವೀಕರಣವನ್ನು ನಿರಾಕರಿಸಿವೆ ಎಂದು ಕೇಂದ್ರ ಹೇಳಿದೆ. ಎಫ್​​ಸಿಆರ್​​ಎ ಪರವಾನಗಿ ನವೀಕರಣಕ್ಕಾಗಿ ಆಕ್ಸ್‌ಫ್ಯಾಮ್ ಇಂಡಿಯಾದ ಅರ್ಜಿಯನ್ನು ಡಿಸೆಂಬರ್ 2021 ರಲ್ಲಿ ತಿರಸ್ಕರಿಸಲಾಗಿದೆ. ಯುನೈಟೆಡ್ ಕಿಂಗ್‌ಡಮ್ ಕೂಡಾ ನಿರಾಕರಣೆ ಬಗ್ಗೆ ದನಿಯೆತ್ತಿತ್ತು. ವಿದೇಶಿ ನಿಧಿಯನ್ನು ಸ್ವೀಕರಿಸಲು ಕಡ್ಡಾಯವಾಗಿರುವ ಪರವಾನಗಿಗಳ ನವೀಕರಣಕ್ಕಾಗಿ ಅರ್ಜಿ ಸಲ್ಲಿಸದ ಕಾರಣ ಕೇಂದ್ರವು 5,789 ಸಂಸ್ಥೆಗಳನ್ನು ಎಫ್​​ಸಿಆರ್​​ಎ ವ್ಯಾಪ್ತಿಯಿಂದ ತೆಗೆದುಹಾಕಿದೆ. ದಾಖಲೆಗಳ ಪರಿಶೀಲನೆಯ ನಂತರ ಕಾನೂನು ಉಲ್ಲಂಘಿಸಿದ 179 ಸಂಸ್ಥೆಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಈ ಸಂಸ್ಥೆಗಳಲ್ಲಿ ಹೆಚ್ಚಿನವರು ತಮ್ಮ ಪರವಾನಗಿಗಳ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಆದರೆ ನಿರ್ಧಾರಗಳು ಬಾಕಿ ಉಳಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅರ್ಜಿಗಳನ್ನು ನಿರ್ಧರಿಸಲು ಸರ್ಕಾರ ಕಳೆದ ವಾರ ಜೂನ್ 30 ರವರೆಗೆ ಗಡುವನ್ನು ವಿಸ್ತರಿಸಿದೆ.

2021 ರಲ್ಲಿ 341 ಪ್ರಕರಣಗಳಲ್ಲಿ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿರುವುದು 2020 ರಿಂದ ಅತ್ಯಧಿಕವಾಗಿದೆ. ಸುಮಾರು 6,000 ಸಂಸ್ಥೆಗಳು ಡಿಸೆಂಬರ್ 31 ರವರೆಗೆ ನವೀಕರಣಗಳನ್ನು ನಿರಾಕರಿಸಿವೆ. ಜೂನ್ 30ರ ನಂತರ ಅಂತಿಮ ನಿರಾಕರಣೆಗಳ ಸಂಖ್ಯೆ ತಿಳಿಯಲಿದೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದರು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಎಫ್‌ಸಿಆರ್‌ಎ ಎಂದರೇನು? 1976 ರಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ವಿದೇಶಿ ಶಕ್ತಿಗಳು ಸ್ವತಂತ್ರ ಸಂಸ್ಥೆಗಳ ಮೂಲಕ ಹಣವನ್ನು ನೀಡುವ ಮಾಡುವ ಮೂಲಕ ಭಾರತದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿವೆ ಎಂಬ ಆತಂಕದ ವಾತಾವರಣದಲ್ಲಿ ಎಫ್‌ಸಿಆರ್‌ಎ ಜಾರಿಗೊಳಿಸಲಾಯಿತು. ಈ ಕಳವಳಗಳು 1969ರಲ್ಲೇ ಸಂಸತ್ತಿನಲ್ಲಿ ವ್ಯಕ್ತವಾಗಿದ್ದವು.

ವಿದೇಶಿ ನಿಧಿಯ ಬಳಕೆಯ ಮೇಲೆ “ಕಾನೂನನ್ನು ಕ್ರೋಢೀಕರಿಸಲು” ಮತ್ತು “ರಾಷ್ಟ್ರೀಯ ಹಿತಾಸಕ್ತಿಗೆ ಹಾನಿಕಾರಕವಾದ ಯಾವುದೇ ಚಟುವಟಿಕೆಗಳಿಗೆ” ಅವುಗಳ ಬಳಕೆಯನ್ನು “ನಿಷೇಧಿಸಲು” 2010 ರಲ್ಲಿ ಯುಪಿಎ ಸರ್ಕಾರದ ಅಡಿಯಲ್ಲಿ ತಿದ್ದುಪಡಿ ಮಾಡಲಾದ ಎಫ್​​ಸಿಆರ್​​ಎ ಅನ್ನು ಜಾರಿಗೊಳಿಸಲಾಯಿತು.

2020 ರಲ್ಲಿ ಪ್ರಸ್ತುತ ಸರ್ಕಾರವು ಕಾನೂನನ್ನು ಮತ್ತೊಮ್ಮೆ ತಿದ್ದುಪಡಿ ಮಾಡಿತು, ಸರ್ಕಾರಕ್ಕೆ ಎನ್‌ಜಿಒಗಳು ವಿದೇಶಿ ನಿಧಿಯ ಸ್ವೀಕೃತಿ ಮತ್ತು ಬಳಕೆಯ ಮೇಲೆ ಬಿಗಿಯಾದ ನಿಯಂತ್ರಣ ಮತ್ತು ಪರಿಶೀಲನೆಯನ್ನು ನೀಡಿತು. FCRA ವಿದೇಶಿ ದೇಣಿಗೆಗಳನ್ನು ಸ್ವೀಕರಿಸಲು ಬಯಸುವ ಪ್ರತಿಯೊಬ್ಬ ವ್ಯಕ್ತಿ ಅಥವಾ NGO ಕಾಯಿದೆಯಡಿಯಲ್ಲಿ ನೋಂದಾಯಿಸಿಕೊಳ್ಳಬೇಕು, ದೆಹಲಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿದೇಶಿ ನಿಧಿಯ ಸ್ವೀಕೃತಿಗಾಗಿ ಬ್ಯಾಂಕ್ ಖಾತೆಯನ್ನು ತೆರೆಯಬೇಕು. ಆ ನಿಧಿಗಳನ್ನು ಯಾವ ಉದ್ದೇಶಕ್ಕಾಗಿ ಸ್ವೀಕರಿಸಲಾಗಿದೆಯೋ ಮತ್ತು ಕಾಯಿದೆಯಲ್ಲಿ ಸೂಚಿಸಿದಂತೆ ಮಾತ್ರ ಬಳಸಿಕೊಳ್ಳಬೇಕಿದೆ.

ಇದನ್ನೂ ಓದಿ: ವಿದೇಶಿ ದೇಣಿಗೆ ಸಂಗ್ರಹ: ಎನ್‌ಜಿಒಗಳ ರದ್ದಾದ ಎಫ್‌ಸಿಆರ್‌ಎ ಪರವಾನಗಿ ನವೀಕರಿಸುವ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ