AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020ರಲ್ಲಿ 47,221 ಪೋಕ್ಸೋ ಪ್ರಕರಣ ದಾಖಲು: ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಾಹಿತಿ

2020ರಲ್ಲಿ ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಅಂದರೆ 6,898 ಪ್ರಕರಣಗಳು ದಾಖಲಾಗಿದ್ದು ಮಹಾರಾಷ್ಚ್ರದಲ್ಲಿ 5,687 ಮತ್ತು ಮಧ್ಯಪ್ರದೇಶದಲ್ಲಿ 5,648 ಪ್ರಕರಣಗಳು ದಾಖಲಾಗಿವೆ.

2020ರಲ್ಲಿ 47,221 ಪೋಕ್ಸೋ ಪ್ರಕರಣ ದಾಖಲು: ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಾಹಿತಿ
ಸ್ಮೃತಿ ಇರಾನಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 29, 2022 | 8:34 PM

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ, 2012(Pocso) ಅಡಿಯಲ್ಲಿ 2020ರಲ್ಲಿ 47,221 ಪ್ರಕರಣಗಳು ದಾಖಲಾಗಿದ್ದು, ಶೇ 39.6 ರಷ್ಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸರ್ಕಾರಕ್ಕೆ ತಿಳಿಸಿದೆ. ಪೋಕ್ಸೋ ಕಾಯ್ದೆಯಡಿ ಎಷ್ಟು ಪ್ರಕರಣಗಳು ಬಾಕಿ ಇವೆ ಎಂದು ಸಿಪಿಐ(ಎಂ) ಸಂಸದ ಎಸ್ ವೆಂಕಟೇಶನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ರಾಷ್ಟ್ರೀಯ ಅಪರಾಧ ಬ್ಯೂರೋದಿಂದ ಸಂಗ್ರಹಿಸಿದ ರಾಜ್ಯವಾರು ಡೇಟಾಗಳನ್ನು ನೀಡಿದ್ದಾರೆ. 2020ರಲ್ಲಿ ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಅಂದರೆ 6,898 ಪ್ರಕರಣಗಳು ದಾಖಲಾಗಿದ್ದು ಮಹಾರಾಷ್ಚ್ರದಲ್ಲಿ 5,687 ಮತ್ತು ಮಧ್ಯಪ್ರದೇಶದಲ್ಲಿ 5,648 ಪ್ರಕರಣಗಳು ದಾಖಲಾಗಿವೆ. ಅಂಕಿ ಅಂಶಗಳ ಪ್ರಕಾರ ಉತ್ತರ ಪ್ರದೇಶದಲ್ಲಿ ಶೇ 70.7ರಷ್ಟು ಶಿಕ್ಷೆಯಾಗಿದ್ದು ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಅಂಕಿಅಂಶಗಳು ಕ್ರಮವಾಗಿ ಶೇ 30.9 ಮತ್ತು ಶೇ 37.2 ರಷ್ಟಿದೆ. ಮಣಿಪುರ ಸತತ ಮೂರು ವರ್ಷಗಳವರೆಗೆ ಶೇ 100 ಶಿಕ್ಷೆಯ ಪ್ರಮಾಣವನ್ನು ಹೊಂದಿರುವ ಏಕೈಕ ರಾಜ್ಯ/ಕೇಂದ್ರಾಡಳಿತ ಪ್ರದೇಶವಾಗಿದೆ.

2020ರ ಅಂತ್ಯದಲ್ಲಿ 170,000 ಕೇಸುಗಳ ವಿಚಾರಣೆಗೆ ಬಾಕಿ ಇದ್ದು ಅವು 2018ರಲ್ಲಿ ಇದ್ದದ್ದಕಿಂತ ಶೇ 57.4 ಆಗಿದೆ. 2020 ರಲ್ಲಿ ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್ ಮತ್ತು ಚಂಡೀಗಢದಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿವೆ. ರಾಜ್ಯಗಳ ಪೈಕಿ, ಗೋವಾ ಮತ್ತು ಹಿಮಾಚಲ ಪ್ರದೇಶದಲ್ಲಿ ಕಡಿಮೆ ಸಂಖ್ಯೆಯ ಪ್ರಕರಣಗಳು ಅಂದರೆ ತಲಾ ಐದು ಪ್ರಕರಣಗಳು ದಾಖಲಾಗಿವೆ.

ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ವಿಚಾರಣೆ ಮತ್ತು ವಿಲೇವಾರಿಗಾಗಿ 389 ವಿಶೇಷ ಪೋಕ್ಸೊ ನ್ಯಾಯಾಲಯಗಳು ಸೇರಿದಂತೆ 1,023 ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳನ್ನು (ಎಫ್‌ಟಿಎಸ್‌ಸಿ) ಸ್ಥಾಪಿಸಲು ನ್ಯಾಯ ಇಲಾಖೆ ಯೋಜನೆಯನ್ನು ಜಾರಿಗೊಳಿಸುತ್ತಿದೆ. 2022 ರಲ್ಲಿ 892 ಎಫ್‌ಟಿಎಸ್‌ಸಿಗಳು ಸಕ್ರಿಯವಾಗಿದ್ದರೆ, 2021 ರಲ್ಲಿ 898 ಇವೆ ಎಂದು ಕೇಂದ್ರ ಸಚಿವೆ ಇರಾನಿ ಹೇಳಿದರು.

ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್