AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌಂದರ್ಯ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್ ಮಾಡಿದ ಐವರು ಪೊಲೀಸರ ವರ್ಗಾವಣೆ

Tamil Nadu News: ಕಳೆದ ಭಾನುವಾರ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್‌ನಲ್ಲಿ ಖಾಸಗಿ ಸಂಸ್ಥೆಯೊಂದು ಸೌಂದರ್ಯ ಸ್ಪರ್ಧೆಯನ್ನು ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿಸಿದ್ದರ ಬಗ್ಗೆ ಸುದ್ದಿ ವೈರಲ್ ಆಗಿತ್ತು.

ಸೌಂದರ್ಯ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್ ಮಾಡಿದ ಐವರು ಪೊಲೀಸರ ವರ್ಗಾವಣೆ
ಪೊಲೀಸ್​
TV9 Web
| Edited By: |

Updated on:Aug 05, 2022 | 11:08 AM

Share

ಚೆನ್ನೈ: ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ಸ್ಪೆಷಲ್ ಅಸಿಸ್ಟೆಂಟ್ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಸೌಂದರ್ಯ ಸ್ಪರ್ಧೆಯಲ್ಲಿ (Beauty Pageant) ಸಿಬ್ಬಂದಿ ರ್ಯಾಂಪ್ ವಾಕ್ (Ramp Walk) ಮಾಡಿದ ನಂತರ ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿ ಈ ವರ್ಗಾವಣೆ ಆದೇಶವನ್ನು ನೀಡಿದ್ದಾರೆ.

ಕಳೆದ ಭಾನುವಾರ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್‌ನಲ್ಲಿ ಖಾಸಗಿ ಸಂಸ್ಥೆಯೊಂದು ಸೌಂದರ್ಯ ಸ್ಪರ್ಧೆಯನ್ನು ನಡೆಸಿತ್ತು. ಇದರಲ್ಲಿ ನಟಿ ಯಶಿಕಾ ಆನಂದ್ ವಿಶೇಷ ಅತಿಥಿಯಾಗಿ ಭಾಗವಹಿಸಿ ಸ್ಪರ್ಧೆಗಳನ್ನು ಉದ್ಘಾಟಿಸಿದ್ದರು. ಮರುದಿನ ಮಾಧ್ಯಮಗಳಲ್ಲಿ ಈ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿಸಿದ್ದರ ಬಗ್ಗೆ ಸುದ್ದಿ ವೈರಲ್ ಆಗಿತ್ತು.

ಈ ಹಿನ್ನೆಲೆಯಲ್ಲಿ ನಾಗಪಟ್ಟಣಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜವಗರ್ ಅವರು ಪ್ರಸ್ತುತ ಸೆಂಬನಾರ್ಕೋವಿಲ್ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸುಬ್ರಮಣ್ಯನ್ ಸೇರಿದಂತೆ ರೇಣುಕಾ, ಅಶ್ವಿನಿ, ನಿತ್ಯಶೀಲಾ ಮತ್ತು ಶ್ರೀನಿವಾಸನ್ ಎಂಬ ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Bengaluru Rain: ಸುರಿವ ಮಳೆಯನ್ನೂ ಲೆಕ್ಕಿಸದೆ ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ; ವಿಡಿಯೋ ವೈರಲ್

ಭಾನುವಾರ, ಖಾಸಗಿ ಮಾಡೆಲಿಂಗ್ ಸಂಸ್ಥೆಯು ಸೆಂಬನಾರ್ಕೋಯಿಲ್‌ನ ಮೈಲಾಡುತುರೈನಲ್ಲಿ ಸೌಂದರ್ಯ ಸ್ಪರ್ಧೆಯನ್ನು ಆಯೋಜಿಸಿತ್ತು. ಅಲ್ಲಿ ವಿವಿಧ ವಯೋಮಾನದ ಸ್ಪರ್ಧಿಗಳು ಭಾಗವಹಿಸಿ, ರ‍್ಯಾಂಪ್ ವಾಕ್ ಮಾಡಿದ್ದರು. ರ್ಯಾಂಪ್ ವಾಕ್‌ನಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮತ್ತು ಎಸ್‌ಎಸ್‌ಐ ಸುಬ್ರಮಣ್ಯನ್, ಸೆಂಬನಾರ್‌ಕೋಯಿಲ್ ಪೊಲೀಸ್ ಠಾಣೆಯ ಐವರು ಪೊಲೀಸರು, ಮಹಿಳಾ ಪೊಲೀಸರಾದ ರೇಣುಕಾ, ಅಶ್ವಿನಿ ಮತ್ತು ನಿತ್ಯಶೀಲ ಮತ್ತು ಕಾನ್‌ಸ್ಟೆಬಲ್ ಶ್ರೀನಿವಾಸನ್ ಈ ಸ್ಪರ್ಧೆಯಲ್ಲಿ  ಭಾಗವಹಿಸಲೇಬೇಕೆಂದು ಸಂಘಟಕರು ವಿನಂತಿಸಿದರು. ಹೀಗಾಗಿ, ಅವರು ರ್ಯಾಂಪ್ ವಾಕ್ ಮಾಡಿದ್ದರು.

ಇದನ್ನೂ ಓದಿ: ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿಷೇಧದ ಆದೇಶವನ್ನು ವಾಪಾಸ್ ಪಡೆ ಪೊಲೀಸ್ ಇಲಾಖೆ

ಈ ಕಾರ್ಯಕ್ರಮದಲ್ಲಿ ಪೊಲೀಸರ ರ್ಯಾಂಪ್ ವಾಕ್ ವಿಡಿಯೋ ವೈರಲ್ ಆಗಿದ್ದು, ಸಾಕಷ್ಟು ನೆಗೆಟಿವ್ ಕಮೆಂಟ್​ಗಳನ್ನು ಪಡೆದಿತ್ತು. ಹೀಗಾಗಿ, ಗುರುವಾರ ಎಸ್​ಪಿ ಜಿ. ಜವಾಹರ್ ಐವರನ್ನು ಬೇರೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಎಸ್‌ಎಸ್‌ಐ ಸುಬ್ರಮಣ್ಯನ್ ಅವರನ್ನು ಮನಲ್‌ಮೇಡು ಠಾಣೆಗೆ, ರೇಣುಕಾ ಅವರನ್ನು ಮೈಲಾಡುತುರೈ ಠಾಣೆಗೆ, ಅಶ್ವಿನಿ ಅವರನ್ನು ಸಿರ್ಕಾಜಿ ಠಾಣೆಗೆ, ನಿತ್ಯ ಶೀಲವನ್ನು ಕುತ್ತಾಲಂ ಠಾಣೆಗೆ ಮತ್ತು ಶ್ರೀನಿವಾಸನ್ ಅವರನ್ನು ಕೊಲ್ಲಿಡಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸರು ಸಂಘಟಕರು ಹೇಳಿದ್ದನ್ನು ಉತ್ಸಾಹದಿಂದಲೇ ಒಪ್ಪಿಕೊಂಡರೂ ಕರ್ತವ್ಯ ಲೋಪವೆಸಗಿದ್ದರಿಂದ ಅವರನ್ನು ವರ್ಗಾವಣೆ ಮಾಡಬೇಕಾಯಿತು ಎಂದು ಎಸ್​ಪಿ ಕಚೇರಿ ಮೂಲಗಳು ತಿಳಿಸಿವೆ. ಎಲ್ಲಾ ಐವರು ಪೊಲೀಸ್ ಸಿಬ್ಬಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

Published On - 11:08 am, Fri, 5 August 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ