AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಗಂದಕ್ ನದಿಯಲ್ಲಿ ದೋಣಿ ಮುಳುಗಿ 5 ಜನ ಸಾವು, ಐವರು ನಾಪತ್ತೆ

ಕುಚೈಕೋಟ್​ನ ರಾಮ್​ಜೀತಾದಿಂದ ವಾಪಾಸ್ ಬರುವಾಗ ಮಾರ್ಗಮಧ್ಯೆ ನದಿಯಲ್ಲಿ ದೋಣಿ ಮಗುಚಿದೆ. ದುರಂತ ನಡೆಯುವಾಗ ದೋಣಿಯಲ್ಲಿ 10 ಜನರಿದ್ದರು. ಅವರಲ್ಲಿ ಐವರ ಶವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಐವರು ಕೂಡ ಬದುಕಿರುವ ಸಾಧ್ಯತೆಯಿಲ್ಲ.

ಬಿಹಾರದ ಗಂದಕ್ ನದಿಯಲ್ಲಿ ದೋಣಿ ಮುಳುಗಿ 5 ಜನ ಸಾವು, ಐವರು ನಾಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 17, 2021 | 5:00 PM

Share

ಪಾಟ್ನಾ: ಬಿಹಾರ ರಾಜ್ಯದ ಗೋಪಾಲ್​ಗಂಜ್ ಜಿಲ್ಲೆಯ ಗಂದಕ್ ನದಿಯಲ್ಲಿ ದೋಣಿ ಮುಳುಗಿ 5 ಜನರು ಸಾವನ್ನಪ್ಪಿದ್ದಾರೆ, ಐವರು ನಾಪತ್ತೆಯಾಗಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಹಾಗೂ ಓರ್ವ ಮಹಿಳೆ ಕೂಡ ಸೇರಿದ್ದಾರೆ. ದುರಂತ ನಡೆಯುವಾಗ ದೋಣಿಯಲ್ಲಿ 10 ಜನರಿದ್ದರು. ಅವರಲ್ಲಿ ಐವರ ಶವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಐವರು ಕೂಡ ಬದುಕಿರುವ ಸಾಧ್ಯತೆಯಿಲ್ಲ ಎನ್ನಲಾಗಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಇನ್ನೂ ನಾಪತ್ತೆಯಾದವರ ಸುಳಿವು ಸಿಕ್ಕಿಲ್ಲ.

ದೋಣಿ ದುರಂತದಲ್ಲಿ ಸಾವನ್ನಪ್ಪಿದ್ದವರನ್ನು ಆಕಾಶ್ (13), ಪವನ್ ಕುಮಾರ್ (10), ಬ್ರಜೇಶ್ ಗುಪ್ತಾ, ಪುಷ್ಪಾ ದೇವಿ ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಅಪರಿಚಿತರು ಕೂಡ ಈ ದುರಂತದಲ್ಲಿ ಸಾವಿಗೀಡಾಗಿದ್ದಾರೆ. ಕುಚೈಕೋಟ್​ನ ರಾಮ್​ಜೀತಾದಿಂದ ವಾಪಾಸ್ ಬರುವಾಗ ಮಾರ್ಗಮಧ್ಯೆ ನದಿಯಲ್ಲಿ ದೋಣಿ ಮಗುಚಿದೆ.

ನಿನ್ನೆ ಮಳೆಯಿಂದಾಗಿ ಬಿಹಾರದ ಗಂದಕ್ ನದಿಯಲ್ಲಿ ಅಲೆಗಳು ಹೆಚ್ಚಾಗಿದ್ದವು. ಹೀಗಾಗಿ, ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿದೆ ಎಂದು ಪ್ರಾಥಮಿಕ ವಿಚಾರಣೆಯಿಂದ ಮಾಹಿತಿ ಲಭ್ಯವಾಗಿದೆ.

ಇದೇ ರೀತಿ ಬಿಹಾರದ ಮುಜಾಫರ್​ಪುರ ಜಿಲ್ಲೆಯಲ್ಲಿ ವಿದ್ಯುತ್ ತಗುಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಿದ್ಯುತ್ ಸಂಸ್ಥೆಯ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ! 

MEA Helpline Number: ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗೆ ಸಹಾಯವಾಣಿ ಆರಂಭ

(5 Dead 5 Missing After Boat Capsizes in Bihar Gandak River)

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ