AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಗಂದಕ್ ನದಿಯಲ್ಲಿ ದೋಣಿ ಮುಳುಗಿ 5 ಜನ ಸಾವು, ಐವರು ನಾಪತ್ತೆ

ಕುಚೈಕೋಟ್​ನ ರಾಮ್​ಜೀತಾದಿಂದ ವಾಪಾಸ್ ಬರುವಾಗ ಮಾರ್ಗಮಧ್ಯೆ ನದಿಯಲ್ಲಿ ದೋಣಿ ಮಗುಚಿದೆ. ದುರಂತ ನಡೆಯುವಾಗ ದೋಣಿಯಲ್ಲಿ 10 ಜನರಿದ್ದರು. ಅವರಲ್ಲಿ ಐವರ ಶವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಐವರು ಕೂಡ ಬದುಕಿರುವ ಸಾಧ್ಯತೆಯಿಲ್ಲ.

ಬಿಹಾರದ ಗಂದಕ್ ನದಿಯಲ್ಲಿ ದೋಣಿ ಮುಳುಗಿ 5 ಜನ ಸಾವು, ಐವರು ನಾಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 17, 2021 | 5:00 PM

Share

ಪಾಟ್ನಾ: ಬಿಹಾರ ರಾಜ್ಯದ ಗೋಪಾಲ್​ಗಂಜ್ ಜಿಲ್ಲೆಯ ಗಂದಕ್ ನದಿಯಲ್ಲಿ ದೋಣಿ ಮುಳುಗಿ 5 ಜನರು ಸಾವನ್ನಪ್ಪಿದ್ದಾರೆ, ಐವರು ನಾಪತ್ತೆಯಾಗಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಹಾಗೂ ಓರ್ವ ಮಹಿಳೆ ಕೂಡ ಸೇರಿದ್ದಾರೆ. ದುರಂತ ನಡೆಯುವಾಗ ದೋಣಿಯಲ್ಲಿ 10 ಜನರಿದ್ದರು. ಅವರಲ್ಲಿ ಐವರ ಶವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಐವರು ಕೂಡ ಬದುಕಿರುವ ಸಾಧ್ಯತೆಯಿಲ್ಲ ಎನ್ನಲಾಗಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಇನ್ನೂ ನಾಪತ್ತೆಯಾದವರ ಸುಳಿವು ಸಿಕ್ಕಿಲ್ಲ.

ದೋಣಿ ದುರಂತದಲ್ಲಿ ಸಾವನ್ನಪ್ಪಿದ್ದವರನ್ನು ಆಕಾಶ್ (13), ಪವನ್ ಕುಮಾರ್ (10), ಬ್ರಜೇಶ್ ಗುಪ್ತಾ, ಪುಷ್ಪಾ ದೇವಿ ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಅಪರಿಚಿತರು ಕೂಡ ಈ ದುರಂತದಲ್ಲಿ ಸಾವಿಗೀಡಾಗಿದ್ದಾರೆ. ಕುಚೈಕೋಟ್​ನ ರಾಮ್​ಜೀತಾದಿಂದ ವಾಪಾಸ್ ಬರುವಾಗ ಮಾರ್ಗಮಧ್ಯೆ ನದಿಯಲ್ಲಿ ದೋಣಿ ಮಗುಚಿದೆ.

ನಿನ್ನೆ ಮಳೆಯಿಂದಾಗಿ ಬಿಹಾರದ ಗಂದಕ್ ನದಿಯಲ್ಲಿ ಅಲೆಗಳು ಹೆಚ್ಚಾಗಿದ್ದವು. ಹೀಗಾಗಿ, ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿದೆ ಎಂದು ಪ್ರಾಥಮಿಕ ವಿಚಾರಣೆಯಿಂದ ಮಾಹಿತಿ ಲಭ್ಯವಾಗಿದೆ.

ಇದೇ ರೀತಿ ಬಿಹಾರದ ಮುಜಾಫರ್​ಪುರ ಜಿಲ್ಲೆಯಲ್ಲಿ ವಿದ್ಯುತ್ ತಗುಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಿದ್ಯುತ್ ಸಂಸ್ಥೆಯ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:Afghanistan: ಅಫ್ಘಾನಿಸ್ತಾನದಲ್ಲಿ ಭೂಕಂಪ, ಕಾಬೂಲ್​ ಹಿಂದಿನ ಸರ್ಕಾರಕ್ಕಿಂತ ತಾಲೀಬಾನಿಗಳ ಕೈಯಲ್ಲಿ ಸುರಕ್ಷಿತವಾಗಿದೆ ಎಂದ ರಷ್ಯಾ! 

MEA Helpline Number: ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗೆ ಸಹಾಯವಾಣಿ ಆರಂಭ

(5 Dead 5 Missing After Boat Capsizes in Bihar Gandak River)

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ