AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ಹೊಗೆಯೇಳುತ್ತಿದೆ ಎಂದು ಭಯಗೊಂಡು ಇಳಿದ ಪ್ರಯಾಣಿಕರಿಗೆ ಮತ್ತೊಂದು ಟ್ರೇನ್​​ ಡಿಕ್ಕಿ; ಐವರ ದುರ್ಮರಣ

ಮೃತಪಟ್ಟ ಎಲ್ಲರ ಗುರುತೂ ಇನ್ನೂ ಪತ್ತೆಯಾಗಿಲ್ಲ. ಇಬ್ಬರು ಅಸ್ಸಾಂನವರು ಎಂದು ಹೇಳಲಾಗಿದೆ. ಉಳಿದವರು ಯಾರು ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ರೈಲಿನಲ್ಲಿ ಹೊಗೆಯೇಳುತ್ತಿದೆ ಎಂದು ಭಯಗೊಂಡು ಇಳಿದ ಪ್ರಯಾಣಿಕರಿಗೆ ಮತ್ತೊಂದು ಟ್ರೇನ್​​ ಡಿಕ್ಕಿ; ಐವರ ದುರ್ಮರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 12, 2022 | 9:41 AM

Share

ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದು ಐವರು ಮೃತಪಟ್ಟು, ಹಲವರು ಗಾಯಗೊಂಡ ದುರ್ಘಟನೆ ಆಂಧ್ರಪ್ರದೇಶದ ಶ್ರಿಕಾಕುಲಂ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.  ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಇದು ನಡೆದದ್ದು ಶ್ರೀಕಾಕುಲಂ ಜಿಲ್ಲೆಯ ಬಟುವಾ ಎಂಬ ಹಳ್ಳಿಯಲ್ಲಿ. ಸಿಕಂದರಾಬಾದ್​ ಮತ್ತು ಗುವಾಹಟಿ ಎಕ್ಸ್​ಪ್ರೆಸ್​ ರೈಲು ಈ ಪ್ರದೇಶಕ್ಕೆ ಬರುತ್ತಿದ್ದಂತೆ ಅದರಲ್ಲಿ ಹೊಗೆಯೇಳುತ್ತಿರುವುದನ್ನು ಒಂದಷ್ಟು ಪ್ರಯಾಣಿಕರು ಗಮನಿಸಿ, ಎಮರ್ಜನ್ಸಿ ಚೈನ್​ ಎಳೆದರು. ಆಗ ಈ ರೈಲು ನಿಂತಿತು. ಪ್ರಯಾಣಿಕರು ಅದರಿಂದ ಕೆಳಗೆ ಇಳಿದು ಅಲ್ಲೇ ಪಕ್ಕದ ಹಳಿ ಮೇಲೆ ನಿಂತಿದ್ದರು. ಅದೇ ವೇಳೆ ಮತ್ತೊಂದು ದಿಕ್ಕಿನಿಂದ ವೇಗವಾಗಿ ಬಂದ ಭುವನೇಶ್ವರ್​-ಮುಂಬೈ ರೈಲು (ಕೊನಾರ್ಕ್​ ಟ್ರೇನ್​) ಇವರಿಗೆ ಡಿಕ್ಕಿ ಹೊಡೆದಿದೆ. ಈ ರೈಲು ವಿಶಾಖಪಟ್ಟಣಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.

ಮೃತಪಟ್ಟ ಎಲ್ಲರ ಗುರುತೂ ಇನ್ನೂ ಪತ್ತೆಯಾಗಿಲ್ಲ. ಇಬ್ಬರು ಅಸ್ಸಾಂನವರು ಎಂದು ಹೇಳಲಾಗಿದೆ. ಉಳಿದವರು ಯಾರು ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಗಾಯಗೊಂಡವರನ್ನು ಶ್ರೀಕಾಕುಲಂ ಜನರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಗೇ ಮೃತದೇಹಗಳನ್ನು ಪೋಸ್ಟ್ ಮಾರ್ಟಮ್​ಗೆ ಕಳಿಸಲಾಗಿದೆ.

ಘಟನೆಯ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿಯವರಿಗೆ ವಿವರಣೆ ನೀಡಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಲು ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  2013ರಲ್ಲಿ ಒಂದು ಹೀಗಿದ್ದೇ ಘಟನೆ ನಡೆದಿತ್ತು. ಆಲಪ್ಪುಳ-ಧನಬಾದ್​ ರೈಲಿನ ಎಸ್​-1 ಕಂಪಾರ್ಟ್​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುಳ್ಳು ಸುದ್ದಿ ಹಬ್ಬಿತ್ತು. ಹೀಗಾಗಿ ಹೆದರಿದ ಪ್ರಯಾಣಿಕರು ಚೈನ್ ಎಳೆದು ರೈಲಿನಿಂದ ಇಳಿದು ಪಕ್ಕದ ಹಳಿಯಲ್ಲಿ ನಿಂತಿದ್ದಾಗ ಬೊಕಾರೊ ಎಕ್ಸ್​ಪ್ರೆಸ್ ಪ್ಯಾಸೆಂಜರ್​ ರೈಲು ಅವರಿಗೆ ಡಿಕ್ಕಿ ಹೊಡೆದಿತ್ತು. 9 ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ: ನೀಳ ತಲೆಗೂದಲನ್ನು ಕತ್ತರಿಸಿ ಹೊಸ ಗೆಟಪ್​ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ; ಇದಕ್ಕಿದೆ ಮಹತ್ತರ ಕಾರಣ

Published On - 9:29 am, Tue, 12 April 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ