Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ಹೊಗೆಯೇಳುತ್ತಿದೆ ಎಂದು ಭಯಗೊಂಡು ಇಳಿದ ಪ್ರಯಾಣಿಕರಿಗೆ ಮತ್ತೊಂದು ಟ್ರೇನ್​​ ಡಿಕ್ಕಿ; ಐವರ ದುರ್ಮರಣ

ಮೃತಪಟ್ಟ ಎಲ್ಲರ ಗುರುತೂ ಇನ್ನೂ ಪತ್ತೆಯಾಗಿಲ್ಲ. ಇಬ್ಬರು ಅಸ್ಸಾಂನವರು ಎಂದು ಹೇಳಲಾಗಿದೆ. ಉಳಿದವರು ಯಾರು ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ರೈಲಿನಲ್ಲಿ ಹೊಗೆಯೇಳುತ್ತಿದೆ ಎಂದು ಭಯಗೊಂಡು ಇಳಿದ ಪ್ರಯಾಣಿಕರಿಗೆ ಮತ್ತೊಂದು ಟ್ರೇನ್​​ ಡಿಕ್ಕಿ; ಐವರ ದುರ್ಮರಣ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Apr 12, 2022 | 9:41 AM

ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದು ಐವರು ಮೃತಪಟ್ಟು, ಹಲವರು ಗಾಯಗೊಂಡ ದುರ್ಘಟನೆ ಆಂಧ್ರಪ್ರದೇಶದ ಶ್ರಿಕಾಕುಲಂ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.  ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಇದು ನಡೆದದ್ದು ಶ್ರೀಕಾಕುಲಂ ಜಿಲ್ಲೆಯ ಬಟುವಾ ಎಂಬ ಹಳ್ಳಿಯಲ್ಲಿ. ಸಿಕಂದರಾಬಾದ್​ ಮತ್ತು ಗುವಾಹಟಿ ಎಕ್ಸ್​ಪ್ರೆಸ್​ ರೈಲು ಈ ಪ್ರದೇಶಕ್ಕೆ ಬರುತ್ತಿದ್ದಂತೆ ಅದರಲ್ಲಿ ಹೊಗೆಯೇಳುತ್ತಿರುವುದನ್ನು ಒಂದಷ್ಟು ಪ್ರಯಾಣಿಕರು ಗಮನಿಸಿ, ಎಮರ್ಜನ್ಸಿ ಚೈನ್​ ಎಳೆದರು. ಆಗ ಈ ರೈಲು ನಿಂತಿತು. ಪ್ರಯಾಣಿಕರು ಅದರಿಂದ ಕೆಳಗೆ ಇಳಿದು ಅಲ್ಲೇ ಪಕ್ಕದ ಹಳಿ ಮೇಲೆ ನಿಂತಿದ್ದರು. ಅದೇ ವೇಳೆ ಮತ್ತೊಂದು ದಿಕ್ಕಿನಿಂದ ವೇಗವಾಗಿ ಬಂದ ಭುವನೇಶ್ವರ್​-ಮುಂಬೈ ರೈಲು (ಕೊನಾರ್ಕ್​ ಟ್ರೇನ್​) ಇವರಿಗೆ ಡಿಕ್ಕಿ ಹೊಡೆದಿದೆ. ಈ ರೈಲು ವಿಶಾಖಪಟ್ಟಣಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.

ಮೃತಪಟ್ಟ ಎಲ್ಲರ ಗುರುತೂ ಇನ್ನೂ ಪತ್ತೆಯಾಗಿಲ್ಲ. ಇಬ್ಬರು ಅಸ್ಸಾಂನವರು ಎಂದು ಹೇಳಲಾಗಿದೆ. ಉಳಿದವರು ಯಾರು ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಗಾಯಗೊಂಡವರನ್ನು ಶ್ರೀಕಾಕುಲಂ ಜನರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಗೇ ಮೃತದೇಹಗಳನ್ನು ಪೋಸ್ಟ್ ಮಾರ್ಟಮ್​ಗೆ ಕಳಿಸಲಾಗಿದೆ.

ಘಟನೆಯ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ಮೋಹನ್​ ರೆಡ್ಡಿಯವರಿಗೆ ವಿವರಣೆ ನೀಡಲಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಲು ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  2013ರಲ್ಲಿ ಒಂದು ಹೀಗಿದ್ದೇ ಘಟನೆ ನಡೆದಿತ್ತು. ಆಲಪ್ಪುಳ-ಧನಬಾದ್​ ರೈಲಿನ ಎಸ್​-1 ಕಂಪಾರ್ಟ್​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುಳ್ಳು ಸುದ್ದಿ ಹಬ್ಬಿತ್ತು. ಹೀಗಾಗಿ ಹೆದರಿದ ಪ್ರಯಾಣಿಕರು ಚೈನ್ ಎಳೆದು ರೈಲಿನಿಂದ ಇಳಿದು ಪಕ್ಕದ ಹಳಿಯಲ್ಲಿ ನಿಂತಿದ್ದಾಗ ಬೊಕಾರೊ ಎಕ್ಸ್​ಪ್ರೆಸ್ ಪ್ಯಾಸೆಂಜರ್​ ರೈಲು ಅವರಿಗೆ ಡಿಕ್ಕಿ ಹೊಡೆದಿತ್ತು. 9 ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ: ನೀಳ ತಲೆಗೂದಲನ್ನು ಕತ್ತರಿಸಿ ಹೊಸ ಗೆಟಪ್​ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ; ಇದಕ್ಕಿದೆ ಮಹತ್ತರ ಕಾರಣ

Published On - 9:29 am, Tue, 12 April 22

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು