AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ: 3 ಕಟ್ಟಡಗಳು ಕುಸಿದು 5 ಮಂದಿ ಸಾವು, ಇನ್ನೊಬ್ಬನ ಸ್ಥಿತಿ ಗಂಭೀರ

Salem Gas Cylinder Blast: ಸ್ಫೋಟದ ರಭಸಕ್ಕೆ ಸುತ್ತಲಿನ ಮೂರು ಮನೆಗಳು ಕುಸಿದುಬಿದ್ದಿದ್ದವು. ಹೀಗೆ ಕುಸಿದ ಮನೆಯ ಅವಶೇಷಗಳಡಿ ಸಿಲುಕಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರಯೋಜನ ಆಗಲಿಲ್ಲ.

ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ: 3 ಕಟ್ಟಡಗಳು ಕುಸಿದು 5 ಮಂದಿ ಸಾವು, ಇನ್ನೊಬ್ಬನ ಸ್ಥಿತಿ ಗಂಭೀರ
ಸ್ಫೋಟದ ರಭಸಕ್ಕೆ ಕುಸಿದ ಮೂರು ಮನೆಗಳು
TV9 Web
| Updated By: Lakshmi Hegde|

Updated on:Nov 24, 2021 | 9:20 AM

Share

ತಮಿಳುನಾಡಿನ ಸೇಲಂ  ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಸಿಲಿಂಡರ್ ಗ್ಯಾಸ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಿನ್ನೆ ಸೇಲಂನ ಕರುಂಗಳಪಟ್ಟಿ ಎಂಬಲ್ಲಿ ರಾಜಲಕ್ಷ್ಮೀ (80) ಎಂಬುವರು ಮನೆಯಲ್ಲಿ ಚಹಾ ಮಾಡಲೆಂದು  ಸ್ಟವ್​ ಆನ್​ ಮಾಡುತ್ತಿದ್ದಂತೆ ಅಡುಗೆ ಅನಿಲದ ಗ್ಯಾಸ್ ಸ್ಫೋಟವಾಗಿತ್ತು. ರಾಜಲಕ್ಷ್ಮೀ ಸ್ಥಳದಲ್ಲೇ ಮೃತಪಟ್ಟಿದ್ದರು. 10 ಮಂದಿ ಗಂಭೀರ ಗಾಯಗೊಂಡಿದ್ದರು.  ಆದರೆ ಸ್ಫೋಟದ ರಭಸಕ್ಕೆ ಮನೆ ಕುಸಿದು 5 ಮಂದಿ ಮೃತಪಟ್ಟಿದ್ದಾರೆ.

ಸ್ಫೋಟದ ರಭಸಕ್ಕೆ ಸುತ್ತಲಿನ ಮೂರು ಮನೆಗಳು ಕುಸಿದುಬಿದ್ದಿದ್ದವು. ಹೀಗೆ ಕುಸಿದ ಮನೆಯ ಅವಶೇಷಗಳಡಿ ಸಿಲುಕಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರಯೋಜನ ಆಗಲಿಲ್ಲ. ಸ್ಫೋಟದ ಸ್ಥಳಕ್ಕೆ ಜಿಲ್ಲಾಧಿಕಾರಿ ಕರ್ಮೇಘಂ ಮತ್ತು ಪೊಲೀಸ್ ಉನ್ನತ ಅಧಿಕಾರಿ ಭೇಟಿ ಕೊಟ್ಟಿದ್ದರು. ಅಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಖುದ್ದಾಗಿ ಮೇಲ್ವಿಚಾರಣೆ ಮಾಡಿದ್ದಾರೆ.  ಕುಸಿದು ಬಿದ್ದ ಮನೆಯ ಅವಶೇಷಗಳಡಿ 5 ವರ್ಷದ ಬಾಲಕಿ ಸೇರಿ 12 ಮಂದಿ ಸಿಲುಕಿದ್ದರು. ಇನ್ನೂ ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಹಾಗೇ, ಸ್ಥಳದಲ್ಲಿ ಅಗ್ನಿಶಾಮಕದಳದ ಸಿಬ್ಬಂದಿ ಇನ್ನೂ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Tamil Nadu: ಸೇಲಂನಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ​; ದುರಂತದಲ್ಲಿ ವೃದ್ಧೆ ಸಾವು, 10 ಮಂದಿಗೆ ಗಾಯ

Published On - 9:19 am, Wed, 24 November 21

ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್