AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚತ್ತೀಸಗಡ್​ನಲ್ಲಿ ನಕ್ಸಲರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮ: ಇಬ್ಬರನ್ನು ಹೊಡೆದುರುಳಿಸಿದ ರಕ್ಷಣಾ ಪಡೆ

ಮಾರ್ಚ್ 23ರಂದು ಇಲ್ಲಿನ ನಾರಾಯಣಪುರ ಜಿಲ್ಲೆಯಲ್ಲಿ ರಕ್ಷಣಾ ಸಿಬ್ಬಂದಿಯನ್ನು ಹೊತ್ತು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ನಕ್ಸಲರು ಐಇಡಿ ದಾಳಿ ನಡೆಸಿದ್ದ ಪರಿಣಾಮ ಐವರು ಡಿಆರ್​ಜಿ ಸಿಬ್ಬಂದಿ ಮೃತಪಟ್ಟಿದ್ದರು.

ಚತ್ತೀಸಗಡ್​ನಲ್ಲಿ ನಕ್ಸಲರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮ: ಇಬ್ಬರನ್ನು ಹೊಡೆದುರುಳಿಸಿದ ರಕ್ಷಣಾ ಪಡೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 03, 2021 | 6:51 PM

Share

ಚತ್ತೀಸಗಡ್​: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ಅಟ್ಟಹಾಸಕ್ಕೆ 5 ಮಂದಿ ಸೈನಿಕರು ಹುತಾತ್ಮರಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆಯಿಂದಲೂ ರಕ್ಷಣಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್​ಕೌಂಟರ್ ನಡೆದಿತ್ತು. ಭದ್ರತಾ ಪಡೆಗಳ ದಾಳಿಗೆ ಇಬ್ಬರು ನಕ್ಸಲರು ಬಲಿಯಾಗಿದ್ದು, ಅದರಲ್ಲಿ ಮಹಿಳೆಯೂ ಒಬ್ಬಳಿದ್ದಾಳೆ. ಹುತಾತ್ಮರಾದ ಯೋಧರಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪಡೆ(CRPF)ಗೆ ಸೇರಿದವರು. ಮತ್ತೆ ಮೂವರು ಜಿಲ್ಲಾ ರಿಸರ್ವ್​ ಗಾರ್ಡ್​ (DRG)ನವರಾಗಿದ್ದಾರೆ.

ಬಿಜಾಪುರದ ತಾರೆಮ್​​ನ ಸಿಲ್​​ಗರ್​​ ಅರಣ್ಯದಲ್ಲಿ ಅಡಗಿದ್ದ ನಕ್ಸಲರ ವಿರುದ್ಧ ಸಿಆರ್​ಪಿಎಫ್​, ಡಿಆರ್​ಜಿ, ಎಸ್​ಟಿಎಫ್​ಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದರು. ಸುಮಾರು 400 ಸಿಬ್ಬಂದಿ ಇದ್ದ ಭದ್ರತಾ ಪಡೆಗಳ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ ಪರಿಣಾಮ ಐವರ ಜೀವ ಹೋಗಿದೆ ಎಂದು ಚತ್ತೀಸ್​ಗಡ ಡಿಜಿಪಿ ಡಿಎಂ ಅಶ್ವಥಿ ತಿಳಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ತಾರೆಮ್​ಗೆ 9 ಆಂಬುಲೆನ್ಸ್​ಗಳು, ಎರಡು ಎಂಐ-17 ಹೆಲಿಕಾಪ್ಟರ್​ಗಳು ತೆರಳಿವೆ.

ಮಾರ್ಚ್ 23ರಂದು ಇಲ್ಲಿನ ನಾರಾಯಣಪುರ ಜಿಲ್ಲೆಯಲ್ಲಿ ರಕ್ಷಣಾ ಸಿಬ್ಬಂದಿಯನ್ನು ಹೊತ್ತು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ನಕ್ಸಲರು ಐಇಡಿ ದಾಳಿ ನಡೆಸಿದ್ದ ಪರಿಣಾಮ ಐವರು ಡಿಆರ್​ಜಿ ಸಿಬ್ಬಂದಿ ಮೃತಪಟ್ಟಿದ್ದರು. ಒಟ್ಟಾರೆ ಈ ಭಾಗದಲ್ಲಿ ನಕ್ಸಲರ ಕ್ರೌರ್ಯಕ್ಕೆ ಪೊಲೀಸರು, ಯೋಧರು ಪದೇಪದೆ ಬಲಿಯಾಗುತ್ತಿರುವುದು ದುರಂತವೇ ಆಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ; ಯೋಜನೆಗಳು, ಅಸಮಾಧಾನ, ಸೋನಿಯಾ ಗಾಂಧಿ ಪತ್ರದ ಬಗ್ಗೆ ಚರ್ಚೆ

ಡಿ.ಕೆ. ಶಿವಕುಮಾರ್, ಯಡಿಯೂರಪ್ಪ, ವಿಜಯೇಂದ್ರ ಮೂವರೂ ಒಂದೇ ಇದ್ದಾರೆ, ಆದ್ರೆ ಪಕ್ಷ ಬೇರೆ ಬೇರೆ: ಬಸನಗೌಡ ಪಾಟೀಲ್ ಯತ್ನಾಳ್

Published On - 6:50 pm, Sat, 3 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!