ಚತ್ತೀಸಗಡ್​ನಲ್ಲಿ ನಕ್ಸಲರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮ: ಇಬ್ಬರನ್ನು ಹೊಡೆದುರುಳಿಸಿದ ರಕ್ಷಣಾ ಪಡೆ

ಮಾರ್ಚ್ 23ರಂದು ಇಲ್ಲಿನ ನಾರಾಯಣಪುರ ಜಿಲ್ಲೆಯಲ್ಲಿ ರಕ್ಷಣಾ ಸಿಬ್ಬಂದಿಯನ್ನು ಹೊತ್ತು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ನಕ್ಸಲರು ಐಇಡಿ ದಾಳಿ ನಡೆಸಿದ್ದ ಪರಿಣಾಮ ಐವರು ಡಿಆರ್​ಜಿ ಸಿಬ್ಬಂದಿ ಮೃತಪಟ್ಟಿದ್ದರು.

ಚತ್ತೀಸಗಡ್​ನಲ್ಲಿ ನಕ್ಸಲರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮ: ಇಬ್ಬರನ್ನು ಹೊಡೆದುರುಳಿಸಿದ ರಕ್ಷಣಾ ಪಡೆ
ಪ್ರಾತಿನಿಧಿಕ ಚಿತ್ರ
Follow us
|

Updated on:Apr 03, 2021 | 6:51 PM

ಚತ್ತೀಸಗಡ್​: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ಅಟ್ಟಹಾಸಕ್ಕೆ 5 ಮಂದಿ ಸೈನಿಕರು ಹುತಾತ್ಮರಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆಯಿಂದಲೂ ರಕ್ಷಣಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್​ಕೌಂಟರ್ ನಡೆದಿತ್ತು. ಭದ್ರತಾ ಪಡೆಗಳ ದಾಳಿಗೆ ಇಬ್ಬರು ನಕ್ಸಲರು ಬಲಿಯಾಗಿದ್ದು, ಅದರಲ್ಲಿ ಮಹಿಳೆಯೂ ಒಬ್ಬಳಿದ್ದಾಳೆ. ಹುತಾತ್ಮರಾದ ಯೋಧರಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪಡೆ(CRPF)ಗೆ ಸೇರಿದವರು. ಮತ್ತೆ ಮೂವರು ಜಿಲ್ಲಾ ರಿಸರ್ವ್​ ಗಾರ್ಡ್​ (DRG)ನವರಾಗಿದ್ದಾರೆ.

ಬಿಜಾಪುರದ ತಾರೆಮ್​​ನ ಸಿಲ್​​ಗರ್​​ ಅರಣ್ಯದಲ್ಲಿ ಅಡಗಿದ್ದ ನಕ್ಸಲರ ವಿರುದ್ಧ ಸಿಆರ್​ಪಿಎಫ್​, ಡಿಆರ್​ಜಿ, ಎಸ್​ಟಿಎಫ್​ಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದರು. ಸುಮಾರು 400 ಸಿಬ್ಬಂದಿ ಇದ್ದ ಭದ್ರತಾ ಪಡೆಗಳ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ ಪರಿಣಾಮ ಐವರ ಜೀವ ಹೋಗಿದೆ ಎಂದು ಚತ್ತೀಸ್​ಗಡ ಡಿಜಿಪಿ ಡಿಎಂ ಅಶ್ವಥಿ ತಿಳಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ತಾರೆಮ್​ಗೆ 9 ಆಂಬುಲೆನ್ಸ್​ಗಳು, ಎರಡು ಎಂಐ-17 ಹೆಲಿಕಾಪ್ಟರ್​ಗಳು ತೆರಳಿವೆ.

ಮಾರ್ಚ್ 23ರಂದು ಇಲ್ಲಿನ ನಾರಾಯಣಪುರ ಜಿಲ್ಲೆಯಲ್ಲಿ ರಕ್ಷಣಾ ಸಿಬ್ಬಂದಿಯನ್ನು ಹೊತ್ತು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ನಕ್ಸಲರು ಐಇಡಿ ದಾಳಿ ನಡೆಸಿದ್ದ ಪರಿಣಾಮ ಐವರು ಡಿಆರ್​ಜಿ ಸಿಬ್ಬಂದಿ ಮೃತಪಟ್ಟಿದ್ದರು. ಒಟ್ಟಾರೆ ಈ ಭಾಗದಲ್ಲಿ ನಕ್ಸಲರ ಕ್ರೌರ್ಯಕ್ಕೆ ಪೊಲೀಸರು, ಯೋಧರು ಪದೇಪದೆ ಬಲಿಯಾಗುತ್ತಿರುವುದು ದುರಂತವೇ ಆಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆಯನ್ನು ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ; ಯೋಜನೆಗಳು, ಅಸಮಾಧಾನ, ಸೋನಿಯಾ ಗಾಂಧಿ ಪತ್ರದ ಬಗ್ಗೆ ಚರ್ಚೆ

ಡಿ.ಕೆ. ಶಿವಕುಮಾರ್, ಯಡಿಯೂರಪ್ಪ, ವಿಜಯೇಂದ್ರ ಮೂವರೂ ಒಂದೇ ಇದ್ದಾರೆ, ಆದ್ರೆ ಪಕ್ಷ ಬೇರೆ ಬೇರೆ: ಬಸನಗೌಡ ಪಾಟೀಲ್ ಯತ್ನಾಳ್

Published On - 6:50 pm, Sat, 3 April 21

ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ