AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಕಾರು; ಐವರು ಸ್ಥಳದಲ್ಲೇ ದುರ್ಮರಣ

ಕಾರು ಮಾಲಿಯಾದಿಂದ ಮೋರ್ಬಿಗೆ ಹೋಗುತ್ತಿತ್ತು. ಮೃತರೆಲ್ಲರೂ ಪುರುಷರೇ ಆಗಿದ್ದು, ಮೂಲತಃ ರಾಜಸ್ಥಾನದವರು ಎಂದು ಪೊಲೀಸರು ತಿಳಿಸಿದ್ದಾರೆ.

Gujarat: ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಕಾರು; ಐವರು ಸ್ಥಳದಲ್ಲೇ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 23, 2021 | 2:12 PM

Share

ಗುಜರಾತ್​​ನ ಮೋರ್ಬಿ ಜಿಲ್ಲೆಯಲ್ಲಿ ಕಾರೊಂದು ನಿಂತಿದ್ದ  ಟ್ರಕ್​​ಗೆ ಡಿಕ್ಕಿಯಾಗಿ ಐದು ಮಂದಿ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಹೊತ್ತಿಗೆ ದುರ್ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಇದೊಂದು ಸ್ಟೇಶನರಿ ಸಾಮಗ್ರಿಗಳನ್ನು ಹೊತ್ತ ಟ್ರಕ್​ ಆಗಿದ್ದು, ಮೋರ್ಬಿ-ಮಲಿಯಾ ಹೆದ್ದಾರಿಯಲ್ಲಿ ಟಿಂಬ್ಡಿ ಎಂಬ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದು. ಆದರೆ ಕಾರ್​ ಡ್ರವರ್ ಈ ಟ್ರಕ್​ಗೆ ಡಿಕ್ಕಿ ಹೊಡೆದಿದ್ದರಿಂದ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಡಿಎಸ್​ಪಿ ರಾಧಿಕಾ ಭಾರಾಯ್​ ತಿಳಿಸಿದ್ದಾರೆ. 

ಕಾರು ಮಾಲಿಯಾದಿಂದ ಮೋರ್ಬಿಗೆ ಹೋಗುತ್ತಿತ್ತು. ಮೃತರೆಲ್ಲರೂ ಪುರುಷರೇ ಆಗಿದ್ದು, ಆನಂದ್ ಶೇಖಾವತ್​, ತಾರಾಚಂದ್​ ಬಾರಲಾ, ಅಶೋಲ್​ ಬಿಲೆಡಾ, ವಿಜೇಂದ್ರ ಸಿಂಗ್​ ಮತ್ತು ಪವನ್​ ಮಿಸ್ಟ್ರಿ ಎಂದು ಗುರುತಿಸಲಾಗಿದೆ. ಇವರಲ್ಲಿ ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎಂಬುದು ಗೊತ್ತಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  ಮೃತರು ಮೋರ್ಬಿಯಲ್ಲಿ ಒಂದು ಉದ್ಯಮ ನಡೆಸುತ್ತಿದ್ದರು. ಆದರೆ ಮೂಲತಃ ರಾಜಸ್ಥಾನದವರಾಗಿದ್ದಾರೆ ಎಂಬ ಮಾಹಿತಿಯೂ ಸಿಕ್ಕಿದೆ. ಈ ಮೋರ್ಬಿ ಜಿಲ್ಲೆ ಅಹಮದಾಬಾದ್​ನಿಂದ 200 ಕಿಮೀ ದೂರದಲ್ಲಿದೆ.  ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಓಪನ್, ಬಂದ್ ಆಗಿದ್ದ ಜಲಸಾಹಸ ಕ್ರೀಡೆಗಳಿಗೆ ಅನುಮತಿ ಕೊಟ್ಟ ಜಿಲ್ಲಾಡಳಿತ

RSS ಬಗ್ಗೆ ಅವಹೇಳನಕಾರಿ ಹೇಳಿಕೆ: ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ 

(5 killed as car rams into truck which is parked in road side at Gujarat)

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ