AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆಗೂ ಮುನ್ನ ಟಿಎಂಸಿಗೆ ಶಾಕ್​; ಗೋವಾ ವಿಭಜನೆಗೆ ಯತ್ನಿಸುತ್ತಿರುವವರು ನಮಗೆ ಬೇಡವೆಂದು ಪಕ್ಷ ತೊರೆದ ಐವರು ಮುಖಂಡರು

Goa Assembly Election 2022: ಗೋವಾದಲ್ಲಿ 2022ರ ಫ್ರೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 40 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರ ದಿನಾಂಕವನ್ನು ಇನ್ನೂ ಚುನಾವಣಾ ಆಯೋಗ ಪ್ರಕಟಿಸಿಲ್ಲ.ಸದ್ಯ ಇರುವ ಬಿಜೆಪಿ ಸರ್ಕಾರದ ಅವಧಿ 2022ರ ಮಾರ್ಚ್ 15ರಂದು ಮುಕ್ತಾಯಗೊಳ್ಳಲಿದೆ.

ವಿಧಾನಸಭೆ ಚುನಾವಣೆಗೂ ಮುನ್ನ ಟಿಎಂಸಿಗೆ ಶಾಕ್​; ಗೋವಾ ವಿಭಜನೆಗೆ ಯತ್ನಿಸುತ್ತಿರುವವರು ನಮಗೆ ಬೇಡವೆಂದು ಪಕ್ಷ ತೊರೆದ ಐವರು ಮುಖಂಡರು
ಮಮತಾ ಬ್ಯಾನರ್ಜಿ
TV9 Web
| Edited By: |

Updated on:Dec 25, 2021 | 2:47 PM

Share

ಪಣಜಿ: ಗೋವಾ ವಿಧಾನಸಭೆ ಚುನಾವಣೆಗೆ (Goa Assembly Election 2022) ಕೆಲವೇ ತಿಂಗಳುಗಳು ಬಾಕಿ ಇದ್ದು, ಆ ರಾಜ್ಯದಲ್ಲಿ ಈ ಬಾರಿ ತೃಣಮೂಲ ಕಾಂಗ್ರೆಸ್ (TMC) ತನ್ನ ವ್ಯಾಪ್ತಿ ಹೆಚ್ಚಿಸಲು ಪ್ರಯತ್ನ ಮಾಡುತ್ತಿದೆ. ಅದಕ್ಕೆ ತಕ್ಕಂತೆ ಸ್ವಲ್ಪ ದಿನಗಳ ಹಿಂದೆ ಹಲವರು ಬೇರೆ ಪಕ್ಷಗಳ ನಾಯಕರು ಟಿಎಂಸಿ ಸೇರ್ಪಡೆಯಾಗಿದ್ದಾರೆ. ಆದರೆ ಇದೆಲ್ಲದರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್​ಗೆ ಬಹುದೊಡ್ಡ ಆಘಾತ ಎದುರಾಗಿದೆ. ಟಿಎಂಸಿಯ ಮಾಜಿ ಶಾಸಕ ಲಾವೂ ಮಾಮ್ಲೆದರ್​ ಸೇರಿ ಒಟ್ಟು ಐವರು ಪ್ರಮುಖ ನಾಯಕರು ಟಿಎಂಸಿಗೆ ರಾಜೀನಾಮೆ ನೀಡಿದ್ದಾರೆ.  

ಗೋವಾವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಪಕ್ಷದೊಂದಿಗೆ ನಾವು ಇರಲು ಇಚ್ಛಿಸುವುದಿಲ್ಲ. ಎಐಟಿಸಿ (ಆಲ್​ ಇಂಡಿಯಾ ತೃಣಮೂಲ ಕಾಂಗ್ರೆಸ್​) ಆಗಲೀ, ಎಐಟಿಸಿ ಗೋವಾವನ್ನು ನಿರ್ವಹಿಸುತ್ತಿರುವ ಕಂಪನಿಯೇ ಆಗಲಿ, ಇಲ್ಲಿನ ಜಾತ್ಯತೀತ ಪರಂಪರೆಯನ್ನು  ಹಾಳುಗೆಡವಲು ನಾವು ಬಿಡುವುದಿಲ್ಲ. ನಾವು ಇದರ ರಕ್ಷಣೆ ಮಾಡುತ್ತೇವೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಂದಹಾಗೆ ಇವರೆಲ್ಲ ಇತ್ತೀಚಿನ ತಿಂಗಳುಗಳಲ್ಲಿ ಟಿಎಂಸಿ ಸೇರ್ಪಡೆಯಾದವರು ಆಗಿದ್ದರು. ಮಾಮ್ಲೆದರ್​ ಅವರು ಸೆಪ್ಟೆಂಬರ್​ 23ರಂದು ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದರು.  ಅದಕ್ಕೂ ಮೊದಲು ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿಯಲ್ಲಿ ಇದ್ದರು. ಗೋವಾ ಮಾಜಿ ಮುಖ್ಯಮಂತ್ರಿ  ಲ್ಯೂಯಿಜಿನ್ಹೋ ಫಲೇರಿಯೋ  ಟಿಎಂಸಿ ಸೇರ್ಪಡೆ ಬೆನ್ನಲ್ಲೇ ಇವರೂ ಕೂಡ ಟಿಎಂಸಿ ಸೇರಿದ್ದರು. ಫಲೇರಿಯೋ ಇದೀಗ ಟಿಎಂಸಿ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಫೆಬ್ರವರಿಯಲ್ಲಿ ಚುನಾವಣೆ ಗೋವಾದಲ್ಲಿ 2022ರ ಫ್ರೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 40 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರ ದಿನಾಂಕವನ್ನು ಇನ್ನೂ ಚುನಾವಣಾ ಆಯೋಗ ಪ್ರಕಟಿಸಿಲ್ಲ.ಸದ್ಯ ಇರುವ ಬಿಜೆಪಿ ಸರ್ಕಾರದ ಅವಧಿ 2022ರ ಮಾರ್ಚ್ 15ರಂದು ಮುಕ್ತಾಯಗೊಳ್ಳಲಿದೆ. ಈ ಬಾರಿ ಬಿಜೆಪಿಗೆ ಕಾಂಗ್ರೆಸ್​ ಅಷ್ಟೇ ಅಲ್ಲ, ಆಮ್​ ಆದ್ಮಿ ಪಕ್ಷ, ತೃಣಮೂಲ ಕಾಂಗ್ರೆಸ್​ ಕೂಡ ಪ್ರಬಲ ಸ್ಪರ್ಧೆ ಒಡ್ಡಲಿವೆ. ಇನ್ನು ಗೋವಾದ ಪ್ರಾದೇಶಿಕ ಪಕ್ಷವಾದ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ ತೃಣಮೂಲ ಕಾಂಗ್ರೆಸ್​​ನೊಟ್ಟಿಗೆ ಮತ್ತು ಗೋವಾ ಫಾರ್ವರ್ಡ್​ ಪಾರ್ಟಿ ಕಾಂಗ್ರೆಸ್​ ಪಕ್ಷದೊಂದಿಗೆ  ಮೈತ್ರಿ ಮಾಡಿಕೊಂಡು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

2017ರ ಚುನಾವಣೆಯಲ್ಲಿ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್​ 17 ಸೀಟುಗಳನ್ನು ಗೆದ್ದುಕೊಂಡಿತ್ತು. ಆದರೆ ಬಿಜೆಪಿ ಗೋವಾದ ಎಂಜಿಪಿ ಸೇರಿ ಪ್ರಾದೇಶಿಕ ಪಕ್ಷಗಳು, ಸ್ವತಂತ್ರ್ಯ ಅಭ್ಯರ್ಥಿಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿತ್ತು. ತೃಣಮೂಲ ಕಾಂಗ್ರೆಸ್​ ಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನನಗೆ ಗೋವಾ ಅಧಿಕಾರ ಹಿಡಿಯಬೇಕು ಎಂಬ ಆಸೆ ಖಂಡಿತ ಇಲ್ಲ. ಆದರೆ ಬಿಜೆಪಿಯನ್ನು ಗೆಲ್ಲಲು ಬಿಡಬಾರದು ಎಂಬುದೇ ನನ್ನ ಉದ್ದೇಶ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಈಗಾಗಲೇ ಒಮ್ಮೆ ಗೋವಾ ಪ್ರವಾಸಕ್ಕೆ ಹೋಗಿ, ಅಲ್ಲಿನ ಮೀನುಗಾರರೊಂದಿಗೆ ಸಂವಾದ ನಡೆಸಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಟೆನ್ನಿಸ್ ಆಟಗಾರ ಲಿಯಾಂಡರ್​ ಪೇಸ್​ ಟಿಎಂಸಿ ಸೇರ್ಪಡೆಯಾಗಿದ್ದು, ಬಲ ಬಂದಿತ್ತು. ಆದರೆ ಈಗ ಏಕಾಏಕಿ ಐವರು ರಾಜೀನಾಮೆ ನೀಡಿದ್ದು, ಟಿಎಂಸಿಗೆ ಸ್ವಲ್ಪ ಮಟ್ಟಿಗೆ ಹಿನ್ನಡೆಯಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಕುಂದಾ ಖರೀದಿಗೆ ಮುಗಿಬಿದ್ದ ಜನಪ್ರತಿನಿಧಿಗಳು: ವಿಡಿಯೋ ನೋಡಿ

Published On - 2:46 pm, Sat, 25 December 21

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ