AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆಗೂ ಮುನ್ನ ಟಿಎಂಸಿಗೆ ಶಾಕ್​; ಗೋವಾ ವಿಭಜನೆಗೆ ಯತ್ನಿಸುತ್ತಿರುವವರು ನಮಗೆ ಬೇಡವೆಂದು ಪಕ್ಷ ತೊರೆದ ಐವರು ಮುಖಂಡರು

Goa Assembly Election 2022: ಗೋವಾದಲ್ಲಿ 2022ರ ಫ್ರೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 40 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರ ದಿನಾಂಕವನ್ನು ಇನ್ನೂ ಚುನಾವಣಾ ಆಯೋಗ ಪ್ರಕಟಿಸಿಲ್ಲ.ಸದ್ಯ ಇರುವ ಬಿಜೆಪಿ ಸರ್ಕಾರದ ಅವಧಿ 2022ರ ಮಾರ್ಚ್ 15ರಂದು ಮುಕ್ತಾಯಗೊಳ್ಳಲಿದೆ.

ವಿಧಾನಸಭೆ ಚುನಾವಣೆಗೂ ಮುನ್ನ ಟಿಎಂಸಿಗೆ ಶಾಕ್​; ಗೋವಾ ವಿಭಜನೆಗೆ ಯತ್ನಿಸುತ್ತಿರುವವರು ನಮಗೆ ಬೇಡವೆಂದು ಪಕ್ಷ ತೊರೆದ ಐವರು ಮುಖಂಡರು
ಮಮತಾ ಬ್ಯಾನರ್ಜಿ
TV9 Web
| Updated By: Lakshmi Hegde|

Updated on:Dec 25, 2021 | 2:47 PM

Share

ಪಣಜಿ: ಗೋವಾ ವಿಧಾನಸಭೆ ಚುನಾವಣೆಗೆ (Goa Assembly Election 2022) ಕೆಲವೇ ತಿಂಗಳುಗಳು ಬಾಕಿ ಇದ್ದು, ಆ ರಾಜ್ಯದಲ್ಲಿ ಈ ಬಾರಿ ತೃಣಮೂಲ ಕಾಂಗ್ರೆಸ್ (TMC) ತನ್ನ ವ್ಯಾಪ್ತಿ ಹೆಚ್ಚಿಸಲು ಪ್ರಯತ್ನ ಮಾಡುತ್ತಿದೆ. ಅದಕ್ಕೆ ತಕ್ಕಂತೆ ಸ್ವಲ್ಪ ದಿನಗಳ ಹಿಂದೆ ಹಲವರು ಬೇರೆ ಪಕ್ಷಗಳ ನಾಯಕರು ಟಿಎಂಸಿ ಸೇರ್ಪಡೆಯಾಗಿದ್ದಾರೆ. ಆದರೆ ಇದೆಲ್ಲದರ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್​ಗೆ ಬಹುದೊಡ್ಡ ಆಘಾತ ಎದುರಾಗಿದೆ. ಟಿಎಂಸಿಯ ಮಾಜಿ ಶಾಸಕ ಲಾವೂ ಮಾಮ್ಲೆದರ್​ ಸೇರಿ ಒಟ್ಟು ಐವರು ಪ್ರಮುಖ ನಾಯಕರು ಟಿಎಂಸಿಗೆ ರಾಜೀನಾಮೆ ನೀಡಿದ್ದಾರೆ.  

ಗೋವಾವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಪಕ್ಷದೊಂದಿಗೆ ನಾವು ಇರಲು ಇಚ್ಛಿಸುವುದಿಲ್ಲ. ಎಐಟಿಸಿ (ಆಲ್​ ಇಂಡಿಯಾ ತೃಣಮೂಲ ಕಾಂಗ್ರೆಸ್​) ಆಗಲೀ, ಎಐಟಿಸಿ ಗೋವಾವನ್ನು ನಿರ್ವಹಿಸುತ್ತಿರುವ ಕಂಪನಿಯೇ ಆಗಲಿ, ಇಲ್ಲಿನ ಜಾತ್ಯತೀತ ಪರಂಪರೆಯನ್ನು  ಹಾಳುಗೆಡವಲು ನಾವು ಬಿಡುವುದಿಲ್ಲ. ನಾವು ಇದರ ರಕ್ಷಣೆ ಮಾಡುತ್ತೇವೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಂದಹಾಗೆ ಇವರೆಲ್ಲ ಇತ್ತೀಚಿನ ತಿಂಗಳುಗಳಲ್ಲಿ ಟಿಎಂಸಿ ಸೇರ್ಪಡೆಯಾದವರು ಆಗಿದ್ದರು. ಮಾಮ್ಲೆದರ್​ ಅವರು ಸೆಪ್ಟೆಂಬರ್​ 23ರಂದು ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದರು.  ಅದಕ್ಕೂ ಮೊದಲು ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿಯಲ್ಲಿ ಇದ್ದರು. ಗೋವಾ ಮಾಜಿ ಮುಖ್ಯಮಂತ್ರಿ  ಲ್ಯೂಯಿಜಿನ್ಹೋ ಫಲೇರಿಯೋ  ಟಿಎಂಸಿ ಸೇರ್ಪಡೆ ಬೆನ್ನಲ್ಲೇ ಇವರೂ ಕೂಡ ಟಿಎಂಸಿ ಸೇರಿದ್ದರು. ಫಲೇರಿಯೋ ಇದೀಗ ಟಿಎಂಸಿ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಫೆಬ್ರವರಿಯಲ್ಲಿ ಚುನಾವಣೆ ಗೋವಾದಲ್ಲಿ 2022ರ ಫ್ರೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 40 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅದರ ದಿನಾಂಕವನ್ನು ಇನ್ನೂ ಚುನಾವಣಾ ಆಯೋಗ ಪ್ರಕಟಿಸಿಲ್ಲ.ಸದ್ಯ ಇರುವ ಬಿಜೆಪಿ ಸರ್ಕಾರದ ಅವಧಿ 2022ರ ಮಾರ್ಚ್ 15ರಂದು ಮುಕ್ತಾಯಗೊಳ್ಳಲಿದೆ. ಈ ಬಾರಿ ಬಿಜೆಪಿಗೆ ಕಾಂಗ್ರೆಸ್​ ಅಷ್ಟೇ ಅಲ್ಲ, ಆಮ್​ ಆದ್ಮಿ ಪಕ್ಷ, ತೃಣಮೂಲ ಕಾಂಗ್ರೆಸ್​ ಕೂಡ ಪ್ರಬಲ ಸ್ಪರ್ಧೆ ಒಡ್ಡಲಿವೆ. ಇನ್ನು ಗೋವಾದ ಪ್ರಾದೇಶಿಕ ಪಕ್ಷವಾದ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ ತೃಣಮೂಲ ಕಾಂಗ್ರೆಸ್​​ನೊಟ್ಟಿಗೆ ಮತ್ತು ಗೋವಾ ಫಾರ್ವರ್ಡ್​ ಪಾರ್ಟಿ ಕಾಂಗ್ರೆಸ್​ ಪಕ್ಷದೊಂದಿಗೆ  ಮೈತ್ರಿ ಮಾಡಿಕೊಂಡು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

2017ರ ಚುನಾವಣೆಯಲ್ಲಿ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್​ 17 ಸೀಟುಗಳನ್ನು ಗೆದ್ದುಕೊಂಡಿತ್ತು. ಆದರೆ ಬಿಜೆಪಿ ಗೋವಾದ ಎಂಜಿಪಿ ಸೇರಿ ಪ್ರಾದೇಶಿಕ ಪಕ್ಷಗಳು, ಸ್ವತಂತ್ರ್ಯ ಅಭ್ಯರ್ಥಿಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿತ್ತು. ತೃಣಮೂಲ ಕಾಂಗ್ರೆಸ್​ ಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನನಗೆ ಗೋವಾ ಅಧಿಕಾರ ಹಿಡಿಯಬೇಕು ಎಂಬ ಆಸೆ ಖಂಡಿತ ಇಲ್ಲ. ಆದರೆ ಬಿಜೆಪಿಯನ್ನು ಗೆಲ್ಲಲು ಬಿಡಬಾರದು ಎಂಬುದೇ ನನ್ನ ಉದ್ದೇಶ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಈಗಾಗಲೇ ಒಮ್ಮೆ ಗೋವಾ ಪ್ರವಾಸಕ್ಕೆ ಹೋಗಿ, ಅಲ್ಲಿನ ಮೀನುಗಾರರೊಂದಿಗೆ ಸಂವಾದ ನಡೆಸಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಟೆನ್ನಿಸ್ ಆಟಗಾರ ಲಿಯಾಂಡರ್​ ಪೇಸ್​ ಟಿಎಂಸಿ ಸೇರ್ಪಡೆಯಾಗಿದ್ದು, ಬಲ ಬಂದಿತ್ತು. ಆದರೆ ಈಗ ಏಕಾಏಕಿ ಐವರು ರಾಜೀನಾಮೆ ನೀಡಿದ್ದು, ಟಿಎಂಸಿಗೆ ಸ್ವಲ್ಪ ಮಟ್ಟಿಗೆ ಹಿನ್ನಡೆಯಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಕುಂದಾ ಖರೀದಿಗೆ ಮುಗಿಬಿದ್ದ ಜನಪ್ರತಿನಿಧಿಗಳು: ವಿಡಿಯೋ ನೋಡಿ

Published On - 2:46 pm, Sat, 25 December 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್