AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zika Virus: ಕೇರಳದಲ್ಲಿ ಇಂದು ಮತ್ತೆ 5 ಝಿಕಾ ವೈರಸ್​ ಪ್ರಕರಣಗಳು ಪತ್ತೆ; ಏಪ್ರಿಲ್​​ನಲ್ಲೇ ಈ ಜ್ವರ ಪ್ರಾರಂಭವಾಗಿದೆಯೆಂದ ವೈದ್ಯರು

ತಿರುವನಂತಪುರಂನಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇಲ್ಲಿನ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಒಂದು ನಿಯಂತ್ರಣಾ ಕೊಠಡಿ ತೆರೆಯಲಾಗಿದೆ. ಅದರ ಮೂಲಕ ಸೊಳ್ಳೆಗಳ ಮೊಟ್ಟೆ ನಾಶ ಮಾಡುವ, ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

Zika Virus: ಕೇರಳದಲ್ಲಿ ಇಂದು ಮತ್ತೆ 5 ಝಿಕಾ ವೈರಸ್​ ಪ್ರಕರಣಗಳು ಪತ್ತೆ; ಏಪ್ರಿಲ್​​ನಲ್ಲೇ ಈ ಜ್ವರ ಪ್ರಾರಂಭವಾಗಿದೆಯೆಂದ ವೈದ್ಯರು
ರೋಗ ಹರಡುವ ಸೊಳ್ಳೆ
TV9 Web
| Edited By: |

Updated on: Jul 15, 2021 | 3:19 PM

Share

ಕೇರಳ: ರಾಜ್ಯದಲ್ಲಿ ಮತ್ತೆ 5 ಝಿಕಾ ವೈರಸ್​ (Zika Virus) ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಇದೀಗ ಝಿಕಾ ಸೋಂಕು ಕಾಣಿಸಿಕೊಂಡ ಎಲ್ಲರೂ ತಿರುವನಂತಪುರದವರೇ ಆಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​, ಇಂದು ಮತ್ತೆ ಐವರಲ್ಲಿ ಝಿಕಾ ವೈರಸ್ ಕಾಣಿಸಿಕೊಂಡಿದೆ. ಅದರಲ್ಲಿ ತಿರುವನಂತಪುರ (Thiruvananthapuram)ದ ಅನಾಯಾರದ ಇಬ್ಬರು, ಕುನ್ನುಕುಜಿ, ಪಾಟ್ಟೋಮ್ ಮತ್ತು ಈಸ್ಟ್ ಫೋರ್ಟ್​ನ ತಲಾ ಒಬ್ಬರು ಇದ್ದಾರೆ. ಇದರೊಂದಿಗೆ ಕೇರಳದಲ್ಲಿ ಜಿಕಾ ವೈರಸ್ ಸೋಂಕಿತರ ಒಟ್ಟೂ ಸಂಖ್ಯೆ 28ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಅನಾಯಾರದ ಮೂರು ಕಿಮಿ ಸುತ್ತಲಿನ ಪ್ರದೇಶದಲ್ಲೇ ಜಿಕಾ ವೈರಸ್​ ಕಾಣಿಸಿಕೊಂಡಿದ್ದು, ಅದು ಬೇರೆ ಹೆಚ್ಚು ಪ್ರದೇಶಗಳಿಗೆ ಹರಡದಂತೆ ತಡೆಯಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸೊಳ್ಳೆಗಳನ್ನು ನಾಶ ಮಾಡಲು ಸ್ವಚ್ಛತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದೂ ವೀಣಾ ಹೇಳಿದ್ದಾರೆ.

ತಿರುವನಂತಪುರಂನಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇಲ್ಲಿನ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಒಂದು ನಿಯಂತ್ರಣಾ ಕೊಠಡಿ ತೆರೆಯಲಾಗಿದೆ. ಅದರ ಮೂಲಕ ಸೊಳ್ಳೆಗಳ ಮೊಟ್ಟೆ ನಾಶ ಮಾಡುವ, ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರೊದಿಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಏಪ್ರಿಲ್​​ನಲ್ಲೇ ಕಾಣಿಸಿಕೊಂಡಿರಬಹುದು ಕೇರಳದಲ್ಲಿ ಈಗೀಗ ಝಿಕಾ ವೈರಸ್​​ನ ಪ್ರಕರಣಗಳು ಪತ್ತೆಯಾಗುತ್ತಿದ್ದರೂ ಅದು ಏಪ್ರಿಲ್​​ನಲ್ಲೇ ಶುರುವಾಗಿದೆ ಎಂದು ರಾಜ್ಯದ ಕೆಲವು ಆಸ್ಪತ್ರೆಗಳ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್​ನಲ್ಲಿ ಕೊರೊನಾ ಲಾಕ್​ಡೌನ್​ ಇದ್ದಿದ್ದರಿಂದ ಝಿಕಾ ವೈರಸ್​ ತಪಾಸಣೆ ಸರಿಯಾಗಿ ಆಗಲಿಲ್ಲ. ವೈರಸ್​ನ ಸೌಮ್ಯ ಲಕ್ಷಣಗಳು ಆಗಲೇ ಕಂಡುಬಂದಿದ್ದವು. ಜ್ವರ, ಕಣ್ಣು ಕೆಂಪಾಗುವುದು, ಮೈಮೇಲೆ ದದ್ದು ಏಳುವಂತ ಲಕ್ಷಣಗಳುಳ್ಳ ಜ್ವರ ಏಪ್ರಿಲ್​ನಲ್ಲಿ ಹಲವರಿಗೆ ಬಂದಿದೆ. ಇದೆಲ್ಲ ಜಿಕಾದ ಲಕ್ಷಣಗಳೇ ಆಗಿವೆ ಎಂದು ಕಿಮ್ಸ್​ಹೆಲ್ತ್​​ನ ಹಿರಿಯ ವೈದ್ಯ ಡಾ. ರಾಜಲಕ್ಷ್ಮೀ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!