AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zika Virus: ಕೇರಳದಲ್ಲಿ ಇಂದು ಮತ್ತೆ 5 ಝಿಕಾ ವೈರಸ್​ ಪ್ರಕರಣಗಳು ಪತ್ತೆ; ಏಪ್ರಿಲ್​​ನಲ್ಲೇ ಈ ಜ್ವರ ಪ್ರಾರಂಭವಾಗಿದೆಯೆಂದ ವೈದ್ಯರು

ತಿರುವನಂತಪುರಂನಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇಲ್ಲಿನ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಒಂದು ನಿಯಂತ್ರಣಾ ಕೊಠಡಿ ತೆರೆಯಲಾಗಿದೆ. ಅದರ ಮೂಲಕ ಸೊಳ್ಳೆಗಳ ಮೊಟ್ಟೆ ನಾಶ ಮಾಡುವ, ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

Zika Virus: ಕೇರಳದಲ್ಲಿ ಇಂದು ಮತ್ತೆ 5 ಝಿಕಾ ವೈರಸ್​ ಪ್ರಕರಣಗಳು ಪತ್ತೆ; ಏಪ್ರಿಲ್​​ನಲ್ಲೇ ಈ ಜ್ವರ ಪ್ರಾರಂಭವಾಗಿದೆಯೆಂದ ವೈದ್ಯರು
ರೋಗ ಹರಡುವ ಸೊಳ್ಳೆ
TV9 Web
| Edited By: |

Updated on: Jul 15, 2021 | 3:19 PM

Share

ಕೇರಳ: ರಾಜ್ಯದಲ್ಲಿ ಮತ್ತೆ 5 ಝಿಕಾ ವೈರಸ್​ (Zika Virus) ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಇದೀಗ ಝಿಕಾ ಸೋಂಕು ಕಾಣಿಸಿಕೊಂಡ ಎಲ್ಲರೂ ತಿರುವನಂತಪುರದವರೇ ಆಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​, ಇಂದು ಮತ್ತೆ ಐವರಲ್ಲಿ ಝಿಕಾ ವೈರಸ್ ಕಾಣಿಸಿಕೊಂಡಿದೆ. ಅದರಲ್ಲಿ ತಿರುವನಂತಪುರ (Thiruvananthapuram)ದ ಅನಾಯಾರದ ಇಬ್ಬರು, ಕುನ್ನುಕುಜಿ, ಪಾಟ್ಟೋಮ್ ಮತ್ತು ಈಸ್ಟ್ ಫೋರ್ಟ್​ನ ತಲಾ ಒಬ್ಬರು ಇದ್ದಾರೆ. ಇದರೊಂದಿಗೆ ಕೇರಳದಲ್ಲಿ ಜಿಕಾ ವೈರಸ್ ಸೋಂಕಿತರ ಒಟ್ಟೂ ಸಂಖ್ಯೆ 28ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಅನಾಯಾರದ ಮೂರು ಕಿಮಿ ಸುತ್ತಲಿನ ಪ್ರದೇಶದಲ್ಲೇ ಜಿಕಾ ವೈರಸ್​ ಕಾಣಿಸಿಕೊಂಡಿದ್ದು, ಅದು ಬೇರೆ ಹೆಚ್ಚು ಪ್ರದೇಶಗಳಿಗೆ ಹರಡದಂತೆ ತಡೆಯಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಸೊಳ್ಳೆಗಳನ್ನು ನಾಶ ಮಾಡಲು ಸ್ವಚ್ಛತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದೂ ವೀಣಾ ಹೇಳಿದ್ದಾರೆ.

ತಿರುವನಂತಪುರಂನಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇಲ್ಲಿನ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಒಂದು ನಿಯಂತ್ರಣಾ ಕೊಠಡಿ ತೆರೆಯಲಾಗಿದೆ. ಅದರ ಮೂಲಕ ಸೊಳ್ಳೆಗಳ ಮೊಟ್ಟೆ ನಾಶ ಮಾಡುವ, ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರೊದಿಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಏಪ್ರಿಲ್​​ನಲ್ಲೇ ಕಾಣಿಸಿಕೊಂಡಿರಬಹುದು ಕೇರಳದಲ್ಲಿ ಈಗೀಗ ಝಿಕಾ ವೈರಸ್​​ನ ಪ್ರಕರಣಗಳು ಪತ್ತೆಯಾಗುತ್ತಿದ್ದರೂ ಅದು ಏಪ್ರಿಲ್​​ನಲ್ಲೇ ಶುರುವಾಗಿದೆ ಎಂದು ರಾಜ್ಯದ ಕೆಲವು ಆಸ್ಪತ್ರೆಗಳ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್​ನಲ್ಲಿ ಕೊರೊನಾ ಲಾಕ್​ಡೌನ್​ ಇದ್ದಿದ್ದರಿಂದ ಝಿಕಾ ವೈರಸ್​ ತಪಾಸಣೆ ಸರಿಯಾಗಿ ಆಗಲಿಲ್ಲ. ವೈರಸ್​ನ ಸೌಮ್ಯ ಲಕ್ಷಣಗಳು ಆಗಲೇ ಕಂಡುಬಂದಿದ್ದವು. ಜ್ವರ, ಕಣ್ಣು ಕೆಂಪಾಗುವುದು, ಮೈಮೇಲೆ ದದ್ದು ಏಳುವಂತ ಲಕ್ಷಣಗಳುಳ್ಳ ಜ್ವರ ಏಪ್ರಿಲ್​ನಲ್ಲಿ ಹಲವರಿಗೆ ಬಂದಿದೆ. ಇದೆಲ್ಲ ಜಿಕಾದ ಲಕ್ಷಣಗಳೇ ಆಗಿವೆ ಎಂದು ಕಿಮ್ಸ್​ಹೆಲ್ತ್​​ನ ಹಿರಿಯ ವೈದ್ಯ ಡಾ. ರಾಜಲಕ್ಷ್ಮೀ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ