AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ರಾತ್ರಿ ಮಲಗಿ ನಿದ್ರಿಸುತ್ತಿದ್ದವರ ಮೇಲೆ ಕುಸಿದ ಗೋಡೆ; 3 ಮಕ್ಕಳು ಸೇರಿ ಐವರ ದುರ್ಮರಣ

ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದು, ಎಲ್ಲರೂ ರಾತ್ರಿ ಮಲಗಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಹೊತ್ತಿಗೆ ಮನೆಯ ಒಂದು ಭಾಗ ಕುಸಿದುಬಿದ್ದಿದೆ. ಐವರೂ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Telangana: ರಾತ್ರಿ ಮಲಗಿ ನಿದ್ರಿಸುತ್ತಿದ್ದವರ ಮೇಲೆ ಕುಸಿದ ಗೋಡೆ; 3 ಮಕ್ಕಳು ಸೇರಿ ಐವರ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 10, 2021 | 4:54 PM

Share

ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ತೆಲಂಗಾಣದ ಜೋಗುಳಾಂಬಾ ಗಡ್ವಾಲ್​ ಜಿಲ್ಲೆಯಲ್ಲಿ ನಡೆದಿದೆ. ಹಾಗೇ, ಈ ಕುಟುಂಬದ ಇನ್ನಿಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗೆ ಮರಣಹೊಂದಿದವರು  ಪತಿ-ಪತ್ನಿ ಮತ್ತು ಅವರ ಮೂವರ ಮಕ್ಕಳಾಗಿದ್ದಾರೆ. ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದ್ದು, ಸುತ್ತಲಿನವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  

ಈ ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದು, ಎಲ್ಲರೂ ರಾತ್ರಿ ಮಲಗಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಹೊತ್ತಿಗೆ ಮನೆಯ ಒಂದು ಭಾಗ ಕುಸಿದುಬಿದ್ದಿದೆ. ಐವರೂ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಹೇಳಿದ್ದಾರೆ.  ಬದುಕುಳಿದ ಇಬ್ಬರು ಮಕ್ಕಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ತೆಲಂಗಾಣ ಮತ್ತು ಹೈದರಾಬಾದ್​​ನಲ್ಲಿ ಭಯಂಕ ಮಳೆ ಸುರಿಯುತ್ತಿದ್ದು, ಮಳೆಯಿಂದಲೇ ಗೋಡೆ ಕುಸಿದಿದೆಯಾ ಎಂದು ಪೊಲೀಸ್​ ಅಧಿಕಾರಿಯನ್ನು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ, ಮಳೆಯಿಂದಲೂ ಆಗಿರಬಹುದು. ಆದರೆ ಮನೆಯ ಗೋಡೆ ಅದಾಗಲೇ ಶಿಥಿಲಾವಸ್ಥೆಯಲ್ಲಿ ಇತ್ತು ಎಂದು ತಿಳಿಸಿದ್ದಾರೆ.

ಪರಿಹಾರ ಘೋಷಿಸಿದ ಸಿಎಂ ಇನ್ನು ಘಟನೆ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೇ, ಇದೀಗ ಮೃತಪಟ್ಟ ಕುಟುಂಬದಲ್ಲಿ ಬದುಕುಳಿದ ಇಬ್ಬರೂ ಮಕ್ಕಳಿಗೆ ತಲಾ 5 ಲಕ್ಷ ರೂ.ಕೊಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ನಮಗೆ ಓದಿನಲ್ಲಿ ಆಸಕ್ತಿಯಿಲ್ಲ, ಸ್ಪೋರ್ಟ್ಸ್​ನಲ್ಲಿ ಆಸಕ್ತಿಯಿದೆ ಎಂದು ಪತ್ರ ಬರೆದು ನಾಪತ್ತೆಯಾದ 7 ಮಕ್ಕಳು; ಪೊಲೀಸರಿಂದ ಶೋಧ

100 ಸಿಸಿ ಬೈಕ್​ನಲ್ಲಿ ಕಾಶ್ಮೀರಕ್ಕೆ ರೈಡ್; ಧಾರವಾಡದ ಯುವಕನಿಂದ ಕೊರೊನಾ ಜಾಗೃತಿ ಅಭಿಯಾನ

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ