AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telangana: ರಾತ್ರಿ ಮಲಗಿ ನಿದ್ರಿಸುತ್ತಿದ್ದವರ ಮೇಲೆ ಕುಸಿದ ಗೋಡೆ; 3 ಮಕ್ಕಳು ಸೇರಿ ಐವರ ದುರ್ಮರಣ

ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದು, ಎಲ್ಲರೂ ರಾತ್ರಿ ಮಲಗಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಹೊತ್ತಿಗೆ ಮನೆಯ ಒಂದು ಭಾಗ ಕುಸಿದುಬಿದ್ದಿದೆ. ಐವರೂ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Telangana: ರಾತ್ರಿ ಮಲಗಿ ನಿದ್ರಿಸುತ್ತಿದ್ದವರ ಮೇಲೆ ಕುಸಿದ ಗೋಡೆ; 3 ಮಕ್ಕಳು ಸೇರಿ ಐವರ ದುರ್ಮರಣ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 10, 2021 | 4:54 PM

Share

ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ತೆಲಂಗಾಣದ ಜೋಗುಳಾಂಬಾ ಗಡ್ವಾಲ್​ ಜಿಲ್ಲೆಯಲ್ಲಿ ನಡೆದಿದೆ. ಹಾಗೇ, ಈ ಕುಟುಂಬದ ಇನ್ನಿಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗೆ ಮರಣಹೊಂದಿದವರು  ಪತಿ-ಪತ್ನಿ ಮತ್ತು ಅವರ ಮೂವರ ಮಕ್ಕಳಾಗಿದ್ದಾರೆ. ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದ್ದು, ಸುತ್ತಲಿನವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  

ಈ ಕುಟುಂಬದಲ್ಲಿ ಒಟ್ಟು 7 ಮಂದಿ ಇದ್ದು, ಎಲ್ಲರೂ ರಾತ್ರಿ ಮಲಗಿ ನಿದ್ರಿಸುತ್ತಿದ್ದರು. ಮಧ್ಯರಾತ್ರಿ ಹೊತ್ತಿಗೆ ಮನೆಯ ಒಂದು ಭಾಗ ಕುಸಿದುಬಿದ್ದಿದೆ. ಐವರೂ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಹೇಳಿದ್ದಾರೆ.  ಬದುಕುಳಿದ ಇಬ್ಬರು ಮಕ್ಕಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ತೆಲಂಗಾಣ ಮತ್ತು ಹೈದರಾಬಾದ್​​ನಲ್ಲಿ ಭಯಂಕ ಮಳೆ ಸುರಿಯುತ್ತಿದ್ದು, ಮಳೆಯಿಂದಲೇ ಗೋಡೆ ಕುಸಿದಿದೆಯಾ ಎಂದು ಪೊಲೀಸ್​ ಅಧಿಕಾರಿಯನ್ನು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ, ಮಳೆಯಿಂದಲೂ ಆಗಿರಬಹುದು. ಆದರೆ ಮನೆಯ ಗೋಡೆ ಅದಾಗಲೇ ಶಿಥಿಲಾವಸ್ಥೆಯಲ್ಲಿ ಇತ್ತು ಎಂದು ತಿಳಿಸಿದ್ದಾರೆ.

ಪರಿಹಾರ ಘೋಷಿಸಿದ ಸಿಎಂ ಇನ್ನು ಘಟನೆ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಗೇ, ಇದೀಗ ಮೃತಪಟ್ಟ ಕುಟುಂಬದಲ್ಲಿ ಬದುಕುಳಿದ ಇಬ್ಬರೂ ಮಕ್ಕಳಿಗೆ ತಲಾ 5 ಲಕ್ಷ ರೂ.ಕೊಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ನಮಗೆ ಓದಿನಲ್ಲಿ ಆಸಕ್ತಿಯಿಲ್ಲ, ಸ್ಪೋರ್ಟ್ಸ್​ನಲ್ಲಿ ಆಸಕ್ತಿಯಿದೆ ಎಂದು ಪತ್ರ ಬರೆದು ನಾಪತ್ತೆಯಾದ 7 ಮಕ್ಕಳು; ಪೊಲೀಸರಿಂದ ಶೋಧ

100 ಸಿಸಿ ಬೈಕ್​ನಲ್ಲಿ ಕಾಶ್ಮೀರಕ್ಕೆ ರೈಡ್; ಧಾರವಾಡದ ಯುವಕನಿಂದ ಕೊರೊನಾ ಜಾಗೃತಿ ಅಭಿಯಾನ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ