ಕೇರಳದಲ್ಲಿ ಒಂದೇ ಕುಟುಂಬದ 5 ಮಂದಿಗೆ ವಕ್ಕರಿಸಿದ ಕೊರೊನಾ

ತಿರುವನಂತಪುರಂ: ದೇವರನಾಡು ಕೇರಳದಲ್ಲಿ ಮಹಾಮಾರಿ ಕೊರೊನಾ ವೈರೆಸ್ ಮತ್ತೆ ಬಂದು ವಕ್ಕರಿಸಿದೆ. 5 ಮಂದಿಗೆ ಈ ಸೋಂಕು ಇದೆ ಎಂದು ಕೇರಳ ಸರ್ಕಾರ ಮಾಹಿತಿ ಖಚಿತ ಪಡಿಸಿದೆ. ಸೋಂಕಿತರು ಕೇರಳದ ಪಟ್ಟನಂತಿಟ್ಟದ ಒಂದೇ ಕುಟುಂಬದವರಾಗಿದ್ದು, ಇತ್ತೀಚಿಗೆ ಇಟಲಿಗೆ ಭೇಟಿ ನೀಡಿ ಬಂದಿದ್ದ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು. ಅವರಿಂದಲೇ ಉಳಿದ ಇಬ್ಬರಿಗೆ ಸೋಂಕು ಹರಡಿದೆ ಎಂದು ಕೇರಳಾದ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ತಿಳಿಸಿದ್ದಾರೆ. ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕು ಪೀಡಿತರಿಗೆ ಆಸ್ಪತ್ರೆಯಲ್ಲಿ […]

ಕೇರಳದಲ್ಲಿ ಒಂದೇ ಕುಟುಂಬದ 5 ಮಂದಿಗೆ ವಕ್ಕರಿಸಿದ ಕೊರೊನಾ
ಸಾಧು ಶ್ರೀನಾಥ್​

Updated on: Mar 08, 2020 | 1:40 PM

ತಿರುವನಂತಪುರಂ: ದೇವರನಾಡು ಕೇರಳದಲ್ಲಿ ಮಹಾಮಾರಿ ಕೊರೊನಾ ವೈರೆಸ್ ಮತ್ತೆ ಬಂದು ವಕ್ಕರಿಸಿದೆ. 5 ಮಂದಿಗೆ ಈ ಸೋಂಕು ಇದೆ ಎಂದು ಕೇರಳ ಸರ್ಕಾರ ಮಾಹಿತಿ ಖಚಿತ ಪಡಿಸಿದೆ.

ಸೋಂಕಿತರು ಕೇರಳದ ಪಟ್ಟನಂತಿಟ್ಟದ ಒಂದೇ ಕುಟುಂಬದವರಾಗಿದ್ದು, ಇತ್ತೀಚಿಗೆ ಇಟಲಿಗೆ ಭೇಟಿ ನೀಡಿ ಬಂದಿದ್ದ ಮೂವರಲ್ಲಿ ಸೋಂಕು ಪತ್ತೆಯಾಗಿತ್ತು. ಅವರಿಂದಲೇ ಉಳಿದ ಇಬ್ಬರಿಗೆ ಸೋಂಕು ಹರಡಿದೆ ಎಂದು ಕೇರಳಾದ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ತಿಳಿಸಿದ್ದಾರೆ.

ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕು ಪೀಡಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಮೇಲೆ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ. ಈ ಹಿನ್ನೆಲೆ ಕೇರಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.

Published On - 12:10 pm, Sun, 8 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us