AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಹಾಗೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅಧಿಕಾರಿ ಸೂರಜ್​ ಪ್ರಸಾದ್​ ಮಾಹಿತಿ ಹಂಚಿಕೊಂಡಿದ್ದಾರೆ.

150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ
ಬೋರ್​ವೆಲ್​
TV9 Web
| Edited By: |

Updated on:Jun 14, 2021 | 2:08 PM

Share

ಉತ್ತರ ಪ್ರದೇಶ: ಆಟವಾಡುತ್ತಿದ್ದ 4 ವರ್ಷದ ಮಗು 150 ಅಡಿ ಆಳದ ಬೋರ್​ವೆಲ್​ಗೆ ಬಿದ್ದಿರುವ ಘಟನೆಯೊಂದು ಆಗ್ರಾದ ಧರಿಯೈ ಗ್ರಾಮದಲ್ಲಿ ಸೋಮವಾರ ನಡೆದಿದೆ. ಪೊಲೀಸ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿದ್ದಾರೆ ಎಂದು ಪೊಲೀಸ್​ ಸಿಬ್ಬಂದಿಯೋರ್ವರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಸರಿಸುಮಾರು 8:30 ಸಮಯದಲ್ಲಿ ಆಗ್ರಾದ ನಿಬೊಹಾರಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿನ ಫತೆಹಾಬಾದ್​ನಲ್ಲಿ ಘಟನೆ ನಡೆದಿದೆ. ಪೊಲೀಸ್​ ಸಿಬ್ಬಂದಿ ಕಾರ್ಯಾಚರಣೆಯಲ್ಲಿದೆ. ಮಗು ಪ್ರತಿಕ್ರಿಯೆ ನೀಡುತ್ತಿದೆ ಹಾಗೂ ಮಗುವಿನ ಚಲನ-ವಲನಗಳು ಗಮನಕ್ಕೆ ಬರುತ್ತಿದೆ ಎಂದು ಅಧಿಕಾರಿ ಸೂರಜ್​ ಪ್ರಸಾದ್​ ಪಿಟಿಐಗೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಹಾಗೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮಗುವಿನ ತಂದೆ ನಿರ್ಮಿಸಿದ್ದ ಬೋರ್​ವೆಲ್​ಗೆ ಮಗು ಬಿದ್ದಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

ಘಟನೆ ನಡೆದ ಬಳಿಕ ತಡಮಾಡದೇ ಹಗ್ಗವನ್ನು ಬೋರ್​ವೆಲ್​ಗೆ ಇಳಿಬಿಟ್ಟಿದ್ದೇವೆ. ಮಗು ನಮ್ಮ ಮಾತನ್ನು ಕೇಳಿಸಿಕೊಂಡು ಪ್ರತಿಕ್ರಿಯೆ ನೀಡುತ್ತಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

ಬೋರ್‌ವೆಲ್‌ ಪೈಪ್ ಸಾಗಿಸ್ತಿದ್ದ ಲಾರಿ ಪಲ್ಟಿ, ಮೂವರು ಸ್ಥಳದಲ್ಲೇ ಸಾವು

ಬೋರ್‌ವೆಲ್‌ ಕೊರೆಯುವಾಗ ಕುಸಿದ ಭೂಮಿ, ಮಣ್ಣಿನಲ್ಲಿ ಸಿಲುಕಿದ್ದವನ ರಕ್ಷಣೆ

Published On - 1:59 pm, Mon, 14 June 21

Follow Us
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!