AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಲ್ಲಿ ಇನ್ನೂ ಇದ್ದಾರೆ 50 ಭಾರತೀಯರು, ವಾಪಸ್​ ಬರುವ ಇಚ್ಛೆ ಇರುವುದು ಕೆಲವೇ ಮಂದಿಗೆ ಮಾತ್ರ: ಸಚಿವೆ ಮೀನಾಕ್ಷಿ ಲೇಖಿ

ಇಂದು ರಾಜ್ಯಸಭೆಯಲ್ಲಿ ಮೀನಾಕ್ಷಿ ಲೇಖಿ ಈ ಬಗ್ಗೆ ವಿವರಣೆ ಕೊಟ್ಟಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್​ ವಶಪಡಿಸಿಕೊಂಡಾಗ ಅಲ್ಲಿಂದ ಭಾರತೀಯರನ್ನು, ನಿರಾಶ್ರಿತರನ್ನು ವಾಪಸ್​ ಕರೆದುಕೊಂಡುಬಂದ ಬಗ್ಗೆಯೂ ಮಾತುಗಳನ್ನಾಡಿದ್ದಾರೆ.

ಉಕ್ರೇನ್​​ನಲ್ಲಿ ಇನ್ನೂ ಇದ್ದಾರೆ 50 ಭಾರತೀಯರು, ವಾಪಸ್​ ಬರುವ ಇಚ್ಛೆ ಇರುವುದು ಕೆಲವೇ ಮಂದಿಗೆ ಮಾತ್ರ: ಸಚಿವೆ ಮೀನಾಕ್ಷಿ ಲೇಖಿ
ಮೀನಾಕ್ಷಿ ಲೇಖಿ
TV9 Web
| Edited By: |

Updated on: Mar 31, 2022 | 7:54 PM

Share

ರಷ್ಯಾ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್​​ನಲ್ಲಿ (Russia Attack On Ukraine) ಇನ್ನೂ 50 ಮಂದಿ ಭಾರತೀಯರು ಇದ್ದಾರೆ. ಅದರಲ್ಲಿ ಕೆಲವೇ ಮಂದಿ ಮಾತ್ರ ತಾಯ್ನಾಡಿಗೆ ವಾಪಸ್​ ಬರುವ ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಹೇಳಿದ್ದಾರೆ. ಇನ್ನು ಯಾರೆಲ್ಲ ಭಾರತಕ್ಕೆ ಮರಳಲು ಸಿದ್ಧರಾಗಿದ್ದಾರೆಯೋ ಅವರಿಗೆ ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದೂ ತಿಳಿಸಿದ್ದಾರೆ. ಉಕ್ರೇನ್​​ನಲ್ಲಿ ಭಾರತದ 20 ಸಾವಿರಕ್ಕೂ ಮಂದಿ ಇದ್ದರು. ಅದರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು. ವೈದ್ಯಕೀಯ ಶಿಕ್ಷಣ ಭಾರತಕ್ಕಿಂತ ಉಕ್ರೇನ್​​ನಲ್ಲಿ ಕಡಿಮೆ ಖರ್ಚಿನಲ್ಲಿ ಮುಗಿಯುತ್ತದೆ ಎಂಬ ಕಾರಣಕ್ಕೆ ಅನೇಕರು ಆ ದೇಶ ಸೇರಿಕೊಂಡಿದ್ದರು. ಆದರೆ ರಷ್ಯಾ ಆಕ್ರಮಣ ಮಾಡಿದ ಬಳಿಕ ಸಂಕಷ್ಟಕ್ಕೀಡಾಗಿದ್ದರು. ಹಾಸ್ಟೆಲ್​ಗಳ ಬಂಕರ್​ಗಳಲ್ಲಿ ಉಳಿದುಕೊಂಡು ತಮ್ಮನ್ನು ರಕ್ಷಿಸಿಕೊಂಡಿದ್ದರು. ಆಹಾರ, ನೀರು, ಶೌಚಗೃಹ ಇಲ್ಲದೆ ಪರದಾಡಿಬಿಟ್ಟಿದ್ದರು. ಅಷ್ಟೆಲ್ಲದರ ಮಧ್ಯೆ ಭಾರತ ಸರ್ಕಾರ ಅಲ್ಲಿರುವ ಸುಮಾರು 22,500 ಜನರನ್ನು ಆಪರೇಶನ್ ಗಂಗಾ ಎಂಬ ಕಾರ್ಯಾಚರಣೆ ಮೂಲಕ ಭಾರತಕ್ಕೆ ವಾಪಸ್​ ಕರೆತಂದಿದೆ. ಇದರಲ್ಲಿ ಭಾರತೀಯ ವಾಯುಸೇನೆ ಪಾಲ್ಗೊಂಡಿದ್ದು ವಿಶೇಷ.

ಹಾಗೇ ಇಂದು ರಾಜ್ಯಸಭೆಯಲ್ಲಿ ಮೀನಾಕ್ಷಿ ಲೇಖಿ ಈ ಬಗ್ಗೆ ವಿವರಣೆ ಕೊಟ್ಟಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್​ ವಶಪಡಿಸಿಕೊಂಡಾಗ ಅಲ್ಲಿಂದ ಭಾರತೀಯರನ್ನು, ನಿರಾಶ್ರಿತರನ್ನು ವಾಪಸ್​ ಕರೆದುಕೊಂಡುಬಂದ ಬಗ್ಗೆಯೂ ಮಾತುಗಳನ್ನಾಡಿದ್ದಾರೆ. ಕಳೆದ ಆಗಸ್ಟ್​​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡರು. ಆಗ ಕೇಂದ್ರ ಸರ್ಕಾರ ಆಪರೇಶನ್​ ದೇವಿ ಶಕ್ತಿ ಕಾರ್ಯಾಚರಣೆ ಮೂಲಕ ಸುಮಾರು 699 ಜನರನ್ನು ಸ್ಥಳಾಂತರ ಮಾಡಿತು. ಅದರಲ್ಲಿ 448 ಮಂದಿ ಭಾರತದವರಾಗಿದ್ದರೆ, 206 ಅಫ್ಘಾನಿಸ್ತಾನದವರೇ ಆದ ಅಲ್ಪಸಂಖ್ಯಾತರು. ಅಂದರೆ ಹಿಂದು, ಸಿಖ್​ ಸಮುದಾಯದವರು. ಸುಮಾರು 15 ಮಂದಿ ನೇಪಾಳ, ಉಗಾಂಡಾ ಮತ್ತು ಲೆಬನನ್​ ನಾಗರಿಕರಾಗಿದ್ದರು. 2021ರ ಆಗಸ್ಟ್​ 16-25ರವರೆಗೆ ಒಟ್ಟು ಏಳು ವಿಮಾನಗಳು ಕಾರ್ಯಾಚರಣೆ ನಡೆಸಿವೆ. ಹಾಗೇ ಡಿಸೆಂಬರ್​ 10ರಂದು ಕೊನೇ ಫ್ಲೈಟ್ ಅಫ್ಘಾನ್​​ನಿಂದ ಭಾರತಕ್ಕೆ ಬಂದಿದೆ ಎಂದೂ ಹೇಳಿದರು.

ಇದನ್ನೂ ಓದಿ: ಸೋಲಾಗುತ್ತದೆ ಎಂದು ಗೊತ್ತಿದ್ದರೂ ರಾಹುಲ್ ಇಲ್ಲಿಗೆ ಬರುವ ಧೈರ್ಯ ತೋರಿಸಿರುವುದು ಮೆಚ್ಚಬೇಕಾದದ್ದೇ: ಅರುಣ್ ಸಿಂಗ್

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ