AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಲ್ಲಿ ಇನ್ನೂ ಇದ್ದಾರೆ 50 ಭಾರತೀಯರು, ವಾಪಸ್​ ಬರುವ ಇಚ್ಛೆ ಇರುವುದು ಕೆಲವೇ ಮಂದಿಗೆ ಮಾತ್ರ: ಸಚಿವೆ ಮೀನಾಕ್ಷಿ ಲೇಖಿ

ಇಂದು ರಾಜ್ಯಸಭೆಯಲ್ಲಿ ಮೀನಾಕ್ಷಿ ಲೇಖಿ ಈ ಬಗ್ಗೆ ವಿವರಣೆ ಕೊಟ್ಟಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್​ ವಶಪಡಿಸಿಕೊಂಡಾಗ ಅಲ್ಲಿಂದ ಭಾರತೀಯರನ್ನು, ನಿರಾಶ್ರಿತರನ್ನು ವಾಪಸ್​ ಕರೆದುಕೊಂಡುಬಂದ ಬಗ್ಗೆಯೂ ಮಾತುಗಳನ್ನಾಡಿದ್ದಾರೆ.

ಉಕ್ರೇನ್​​ನಲ್ಲಿ ಇನ್ನೂ ಇದ್ದಾರೆ 50 ಭಾರತೀಯರು, ವಾಪಸ್​ ಬರುವ ಇಚ್ಛೆ ಇರುವುದು ಕೆಲವೇ ಮಂದಿಗೆ ಮಾತ್ರ: ಸಚಿವೆ ಮೀನಾಕ್ಷಿ ಲೇಖಿ
ಮೀನಾಕ್ಷಿ ಲೇಖಿ
TV9 Web
| Edited By: |

Updated on: Mar 31, 2022 | 7:54 PM

Share

ರಷ್ಯಾ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್​​ನಲ್ಲಿ (Russia Attack On Ukraine) ಇನ್ನೂ 50 ಮಂದಿ ಭಾರತೀಯರು ಇದ್ದಾರೆ. ಅದರಲ್ಲಿ ಕೆಲವೇ ಮಂದಿ ಮಾತ್ರ ತಾಯ್ನಾಡಿಗೆ ವಾಪಸ್​ ಬರುವ ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಹೇಳಿದ್ದಾರೆ. ಇನ್ನು ಯಾರೆಲ್ಲ ಭಾರತಕ್ಕೆ ಮರಳಲು ಸಿದ್ಧರಾಗಿದ್ದಾರೆಯೋ ಅವರಿಗೆ ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದೂ ತಿಳಿಸಿದ್ದಾರೆ. ಉಕ್ರೇನ್​​ನಲ್ಲಿ ಭಾರತದ 20 ಸಾವಿರಕ್ಕೂ ಮಂದಿ ಇದ್ದರು. ಅದರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು. ವೈದ್ಯಕೀಯ ಶಿಕ್ಷಣ ಭಾರತಕ್ಕಿಂತ ಉಕ್ರೇನ್​​ನಲ್ಲಿ ಕಡಿಮೆ ಖರ್ಚಿನಲ್ಲಿ ಮುಗಿಯುತ್ತದೆ ಎಂಬ ಕಾರಣಕ್ಕೆ ಅನೇಕರು ಆ ದೇಶ ಸೇರಿಕೊಂಡಿದ್ದರು. ಆದರೆ ರಷ್ಯಾ ಆಕ್ರಮಣ ಮಾಡಿದ ಬಳಿಕ ಸಂಕಷ್ಟಕ್ಕೀಡಾಗಿದ್ದರು. ಹಾಸ್ಟೆಲ್​ಗಳ ಬಂಕರ್​ಗಳಲ್ಲಿ ಉಳಿದುಕೊಂಡು ತಮ್ಮನ್ನು ರಕ್ಷಿಸಿಕೊಂಡಿದ್ದರು. ಆಹಾರ, ನೀರು, ಶೌಚಗೃಹ ಇಲ್ಲದೆ ಪರದಾಡಿಬಿಟ್ಟಿದ್ದರು. ಅಷ್ಟೆಲ್ಲದರ ಮಧ್ಯೆ ಭಾರತ ಸರ್ಕಾರ ಅಲ್ಲಿರುವ ಸುಮಾರು 22,500 ಜನರನ್ನು ಆಪರೇಶನ್ ಗಂಗಾ ಎಂಬ ಕಾರ್ಯಾಚರಣೆ ಮೂಲಕ ಭಾರತಕ್ಕೆ ವಾಪಸ್​ ಕರೆತಂದಿದೆ. ಇದರಲ್ಲಿ ಭಾರತೀಯ ವಾಯುಸೇನೆ ಪಾಲ್ಗೊಂಡಿದ್ದು ವಿಶೇಷ.

ಹಾಗೇ ಇಂದು ರಾಜ್ಯಸಭೆಯಲ್ಲಿ ಮೀನಾಕ್ಷಿ ಲೇಖಿ ಈ ಬಗ್ಗೆ ವಿವರಣೆ ಕೊಟ್ಟಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್​ ವಶಪಡಿಸಿಕೊಂಡಾಗ ಅಲ್ಲಿಂದ ಭಾರತೀಯರನ್ನು, ನಿರಾಶ್ರಿತರನ್ನು ವಾಪಸ್​ ಕರೆದುಕೊಂಡುಬಂದ ಬಗ್ಗೆಯೂ ಮಾತುಗಳನ್ನಾಡಿದ್ದಾರೆ. ಕಳೆದ ಆಗಸ್ಟ್​​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡರು. ಆಗ ಕೇಂದ್ರ ಸರ್ಕಾರ ಆಪರೇಶನ್​ ದೇವಿ ಶಕ್ತಿ ಕಾರ್ಯಾಚರಣೆ ಮೂಲಕ ಸುಮಾರು 699 ಜನರನ್ನು ಸ್ಥಳಾಂತರ ಮಾಡಿತು. ಅದರಲ್ಲಿ 448 ಮಂದಿ ಭಾರತದವರಾಗಿದ್ದರೆ, 206 ಅಫ್ಘಾನಿಸ್ತಾನದವರೇ ಆದ ಅಲ್ಪಸಂಖ್ಯಾತರು. ಅಂದರೆ ಹಿಂದು, ಸಿಖ್​ ಸಮುದಾಯದವರು. ಸುಮಾರು 15 ಮಂದಿ ನೇಪಾಳ, ಉಗಾಂಡಾ ಮತ್ತು ಲೆಬನನ್​ ನಾಗರಿಕರಾಗಿದ್ದರು. 2021ರ ಆಗಸ್ಟ್​ 16-25ರವರೆಗೆ ಒಟ್ಟು ಏಳು ವಿಮಾನಗಳು ಕಾರ್ಯಾಚರಣೆ ನಡೆಸಿವೆ. ಹಾಗೇ ಡಿಸೆಂಬರ್​ 10ರಂದು ಕೊನೇ ಫ್ಲೈಟ್ ಅಫ್ಘಾನ್​​ನಿಂದ ಭಾರತಕ್ಕೆ ಬಂದಿದೆ ಎಂದೂ ಹೇಳಿದರು.

ಇದನ್ನೂ ಓದಿ: ಸೋಲಾಗುತ್ತದೆ ಎಂದು ಗೊತ್ತಿದ್ದರೂ ರಾಹುಲ್ ಇಲ್ಲಿಗೆ ಬರುವ ಧೈರ್ಯ ತೋರಿಸಿರುವುದು ಮೆಚ್ಚಬೇಕಾದದ್ದೇ: ಅರುಣ್ ಸಿಂಗ್

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು