AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಲ್ಲಿ ಇನ್ನೂ ಇದ್ದಾರೆ 50 ಭಾರತೀಯರು, ವಾಪಸ್​ ಬರುವ ಇಚ್ಛೆ ಇರುವುದು ಕೆಲವೇ ಮಂದಿಗೆ ಮಾತ್ರ: ಸಚಿವೆ ಮೀನಾಕ್ಷಿ ಲೇಖಿ

ಇಂದು ರಾಜ್ಯಸಭೆಯಲ್ಲಿ ಮೀನಾಕ್ಷಿ ಲೇಖಿ ಈ ಬಗ್ಗೆ ವಿವರಣೆ ಕೊಟ್ಟಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್​ ವಶಪಡಿಸಿಕೊಂಡಾಗ ಅಲ್ಲಿಂದ ಭಾರತೀಯರನ್ನು, ನಿರಾಶ್ರಿತರನ್ನು ವಾಪಸ್​ ಕರೆದುಕೊಂಡುಬಂದ ಬಗ್ಗೆಯೂ ಮಾತುಗಳನ್ನಾಡಿದ್ದಾರೆ.

ಉಕ್ರೇನ್​​ನಲ್ಲಿ ಇನ್ನೂ ಇದ್ದಾರೆ 50 ಭಾರತೀಯರು, ವಾಪಸ್​ ಬರುವ ಇಚ್ಛೆ ಇರುವುದು ಕೆಲವೇ ಮಂದಿಗೆ ಮಾತ್ರ: ಸಚಿವೆ ಮೀನಾಕ್ಷಿ ಲೇಖಿ
ಮೀನಾಕ್ಷಿ ಲೇಖಿ
TV9 Web
| Edited By: |

Updated on: Mar 31, 2022 | 7:54 PM

Share

ರಷ್ಯಾ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್​​ನಲ್ಲಿ (Russia Attack On Ukraine) ಇನ್ನೂ 50 ಮಂದಿ ಭಾರತೀಯರು ಇದ್ದಾರೆ. ಅದರಲ್ಲಿ ಕೆಲವೇ ಮಂದಿ ಮಾತ್ರ ತಾಯ್ನಾಡಿಗೆ ವಾಪಸ್​ ಬರುವ ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಹೇಳಿದ್ದಾರೆ. ಇನ್ನು ಯಾರೆಲ್ಲ ಭಾರತಕ್ಕೆ ಮರಳಲು ಸಿದ್ಧರಾಗಿದ್ದಾರೆಯೋ ಅವರಿಗೆ ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದೂ ತಿಳಿಸಿದ್ದಾರೆ. ಉಕ್ರೇನ್​​ನಲ್ಲಿ ಭಾರತದ 20 ಸಾವಿರಕ್ಕೂ ಮಂದಿ ಇದ್ದರು. ಅದರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು. ವೈದ್ಯಕೀಯ ಶಿಕ್ಷಣ ಭಾರತಕ್ಕಿಂತ ಉಕ್ರೇನ್​​ನಲ್ಲಿ ಕಡಿಮೆ ಖರ್ಚಿನಲ್ಲಿ ಮುಗಿಯುತ್ತದೆ ಎಂಬ ಕಾರಣಕ್ಕೆ ಅನೇಕರು ಆ ದೇಶ ಸೇರಿಕೊಂಡಿದ್ದರು. ಆದರೆ ರಷ್ಯಾ ಆಕ್ರಮಣ ಮಾಡಿದ ಬಳಿಕ ಸಂಕಷ್ಟಕ್ಕೀಡಾಗಿದ್ದರು. ಹಾಸ್ಟೆಲ್​ಗಳ ಬಂಕರ್​ಗಳಲ್ಲಿ ಉಳಿದುಕೊಂಡು ತಮ್ಮನ್ನು ರಕ್ಷಿಸಿಕೊಂಡಿದ್ದರು. ಆಹಾರ, ನೀರು, ಶೌಚಗೃಹ ಇಲ್ಲದೆ ಪರದಾಡಿಬಿಟ್ಟಿದ್ದರು. ಅಷ್ಟೆಲ್ಲದರ ಮಧ್ಯೆ ಭಾರತ ಸರ್ಕಾರ ಅಲ್ಲಿರುವ ಸುಮಾರು 22,500 ಜನರನ್ನು ಆಪರೇಶನ್ ಗಂಗಾ ಎಂಬ ಕಾರ್ಯಾಚರಣೆ ಮೂಲಕ ಭಾರತಕ್ಕೆ ವಾಪಸ್​ ಕರೆತಂದಿದೆ. ಇದರಲ್ಲಿ ಭಾರತೀಯ ವಾಯುಸೇನೆ ಪಾಲ್ಗೊಂಡಿದ್ದು ವಿಶೇಷ.

ಹಾಗೇ ಇಂದು ರಾಜ್ಯಸಭೆಯಲ್ಲಿ ಮೀನಾಕ್ಷಿ ಲೇಖಿ ಈ ಬಗ್ಗೆ ವಿವರಣೆ ಕೊಟ್ಟಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್​ ವಶಪಡಿಸಿಕೊಂಡಾಗ ಅಲ್ಲಿಂದ ಭಾರತೀಯರನ್ನು, ನಿರಾಶ್ರಿತರನ್ನು ವಾಪಸ್​ ಕರೆದುಕೊಂಡುಬಂದ ಬಗ್ಗೆಯೂ ಮಾತುಗಳನ್ನಾಡಿದ್ದಾರೆ. ಕಳೆದ ಆಗಸ್ಟ್​​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡರು. ಆಗ ಕೇಂದ್ರ ಸರ್ಕಾರ ಆಪರೇಶನ್​ ದೇವಿ ಶಕ್ತಿ ಕಾರ್ಯಾಚರಣೆ ಮೂಲಕ ಸುಮಾರು 699 ಜನರನ್ನು ಸ್ಥಳಾಂತರ ಮಾಡಿತು. ಅದರಲ್ಲಿ 448 ಮಂದಿ ಭಾರತದವರಾಗಿದ್ದರೆ, 206 ಅಫ್ಘಾನಿಸ್ತಾನದವರೇ ಆದ ಅಲ್ಪಸಂಖ್ಯಾತರು. ಅಂದರೆ ಹಿಂದು, ಸಿಖ್​ ಸಮುದಾಯದವರು. ಸುಮಾರು 15 ಮಂದಿ ನೇಪಾಳ, ಉಗಾಂಡಾ ಮತ್ತು ಲೆಬನನ್​ ನಾಗರಿಕರಾಗಿದ್ದರು. 2021ರ ಆಗಸ್ಟ್​ 16-25ರವರೆಗೆ ಒಟ್ಟು ಏಳು ವಿಮಾನಗಳು ಕಾರ್ಯಾಚರಣೆ ನಡೆಸಿವೆ. ಹಾಗೇ ಡಿಸೆಂಬರ್​ 10ರಂದು ಕೊನೇ ಫ್ಲೈಟ್ ಅಫ್ಘಾನ್​​ನಿಂದ ಭಾರತಕ್ಕೆ ಬಂದಿದೆ ಎಂದೂ ಹೇಳಿದರು.

ಇದನ್ನೂ ಓದಿ: ಸೋಲಾಗುತ್ತದೆ ಎಂದು ಗೊತ್ತಿದ್ದರೂ ರಾಹುಲ್ ಇಲ್ಲಿಗೆ ಬರುವ ಧೈರ್ಯ ತೋರಿಸಿರುವುದು ಮೆಚ್ಚಬೇಕಾದದ್ದೇ: ಅರುಣ್ ಸಿಂಗ್

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?