AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಲ್ಲಿ ಇನ್ನೂ ಇದ್ದಾರೆ 50 ಭಾರತೀಯರು, ವಾಪಸ್​ ಬರುವ ಇಚ್ಛೆ ಇರುವುದು ಕೆಲವೇ ಮಂದಿಗೆ ಮಾತ್ರ: ಸಚಿವೆ ಮೀನಾಕ್ಷಿ ಲೇಖಿ

ಇಂದು ರಾಜ್ಯಸಭೆಯಲ್ಲಿ ಮೀನಾಕ್ಷಿ ಲೇಖಿ ಈ ಬಗ್ಗೆ ವಿವರಣೆ ಕೊಟ್ಟಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್​ ವಶಪಡಿಸಿಕೊಂಡಾಗ ಅಲ್ಲಿಂದ ಭಾರತೀಯರನ್ನು, ನಿರಾಶ್ರಿತರನ್ನು ವಾಪಸ್​ ಕರೆದುಕೊಂಡುಬಂದ ಬಗ್ಗೆಯೂ ಮಾತುಗಳನ್ನಾಡಿದ್ದಾರೆ.

ಉಕ್ರೇನ್​​ನಲ್ಲಿ ಇನ್ನೂ ಇದ್ದಾರೆ 50 ಭಾರತೀಯರು, ವಾಪಸ್​ ಬರುವ ಇಚ್ಛೆ ಇರುವುದು ಕೆಲವೇ ಮಂದಿಗೆ ಮಾತ್ರ: ಸಚಿವೆ ಮೀನಾಕ್ಷಿ ಲೇಖಿ
ಮೀನಾಕ್ಷಿ ಲೇಖಿ
TV9 Web
| Updated By: Lakshmi Hegde|

Updated on: Mar 31, 2022 | 7:54 PM

Share

ರಷ್ಯಾ ಆಕ್ರಮಣಕ್ಕೆ ತುತ್ತಾಗಿರುವ ಉಕ್ರೇನ್​​ನಲ್ಲಿ (Russia Attack On Ukraine) ಇನ್ನೂ 50 ಮಂದಿ ಭಾರತೀಯರು ಇದ್ದಾರೆ. ಅದರಲ್ಲಿ ಕೆಲವೇ ಮಂದಿ ಮಾತ್ರ ತಾಯ್ನಾಡಿಗೆ ವಾಪಸ್​ ಬರುವ ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಹೇಳಿದ್ದಾರೆ. ಇನ್ನು ಯಾರೆಲ್ಲ ಭಾರತಕ್ಕೆ ಮರಳಲು ಸಿದ್ಧರಾಗಿದ್ದಾರೆಯೋ ಅವರಿಗೆ ಉಕ್ರೇನ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಿಂದ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದೂ ತಿಳಿಸಿದ್ದಾರೆ. ಉಕ್ರೇನ್​​ನಲ್ಲಿ ಭಾರತದ 20 ಸಾವಿರಕ್ಕೂ ಮಂದಿ ಇದ್ದರು. ಅದರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು. ವೈದ್ಯಕೀಯ ಶಿಕ್ಷಣ ಭಾರತಕ್ಕಿಂತ ಉಕ್ರೇನ್​​ನಲ್ಲಿ ಕಡಿಮೆ ಖರ್ಚಿನಲ್ಲಿ ಮುಗಿಯುತ್ತದೆ ಎಂಬ ಕಾರಣಕ್ಕೆ ಅನೇಕರು ಆ ದೇಶ ಸೇರಿಕೊಂಡಿದ್ದರು. ಆದರೆ ರಷ್ಯಾ ಆಕ್ರಮಣ ಮಾಡಿದ ಬಳಿಕ ಸಂಕಷ್ಟಕ್ಕೀಡಾಗಿದ್ದರು. ಹಾಸ್ಟೆಲ್​ಗಳ ಬಂಕರ್​ಗಳಲ್ಲಿ ಉಳಿದುಕೊಂಡು ತಮ್ಮನ್ನು ರಕ್ಷಿಸಿಕೊಂಡಿದ್ದರು. ಆಹಾರ, ನೀರು, ಶೌಚಗೃಹ ಇಲ್ಲದೆ ಪರದಾಡಿಬಿಟ್ಟಿದ್ದರು. ಅಷ್ಟೆಲ್ಲದರ ಮಧ್ಯೆ ಭಾರತ ಸರ್ಕಾರ ಅಲ್ಲಿರುವ ಸುಮಾರು 22,500 ಜನರನ್ನು ಆಪರೇಶನ್ ಗಂಗಾ ಎಂಬ ಕಾರ್ಯಾಚರಣೆ ಮೂಲಕ ಭಾರತಕ್ಕೆ ವಾಪಸ್​ ಕರೆತಂದಿದೆ. ಇದರಲ್ಲಿ ಭಾರತೀಯ ವಾಯುಸೇನೆ ಪಾಲ್ಗೊಂಡಿದ್ದು ವಿಶೇಷ.

ಹಾಗೇ ಇಂದು ರಾಜ್ಯಸಭೆಯಲ್ಲಿ ಮೀನಾಕ್ಷಿ ಲೇಖಿ ಈ ಬಗ್ಗೆ ವಿವರಣೆ ಕೊಟ್ಟಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್​ ವಶಪಡಿಸಿಕೊಂಡಾಗ ಅಲ್ಲಿಂದ ಭಾರತೀಯರನ್ನು, ನಿರಾಶ್ರಿತರನ್ನು ವಾಪಸ್​ ಕರೆದುಕೊಂಡುಬಂದ ಬಗ್ಗೆಯೂ ಮಾತುಗಳನ್ನಾಡಿದ್ದಾರೆ. ಕಳೆದ ಆಗಸ್ಟ್​​ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡರು. ಆಗ ಕೇಂದ್ರ ಸರ್ಕಾರ ಆಪರೇಶನ್​ ದೇವಿ ಶಕ್ತಿ ಕಾರ್ಯಾಚರಣೆ ಮೂಲಕ ಸುಮಾರು 699 ಜನರನ್ನು ಸ್ಥಳಾಂತರ ಮಾಡಿತು. ಅದರಲ್ಲಿ 448 ಮಂದಿ ಭಾರತದವರಾಗಿದ್ದರೆ, 206 ಅಫ್ಘಾನಿಸ್ತಾನದವರೇ ಆದ ಅಲ್ಪಸಂಖ್ಯಾತರು. ಅಂದರೆ ಹಿಂದು, ಸಿಖ್​ ಸಮುದಾಯದವರು. ಸುಮಾರು 15 ಮಂದಿ ನೇಪಾಳ, ಉಗಾಂಡಾ ಮತ್ತು ಲೆಬನನ್​ ನಾಗರಿಕರಾಗಿದ್ದರು. 2021ರ ಆಗಸ್ಟ್​ 16-25ರವರೆಗೆ ಒಟ್ಟು ಏಳು ವಿಮಾನಗಳು ಕಾರ್ಯಾಚರಣೆ ನಡೆಸಿವೆ. ಹಾಗೇ ಡಿಸೆಂಬರ್​ 10ರಂದು ಕೊನೇ ಫ್ಲೈಟ್ ಅಫ್ಘಾನ್​​ನಿಂದ ಭಾರತಕ್ಕೆ ಬಂದಿದೆ ಎಂದೂ ಹೇಳಿದರು.

ಇದನ್ನೂ ಓದಿ: ಸೋಲಾಗುತ್ತದೆ ಎಂದು ಗೊತ್ತಿದ್ದರೂ ರಾಹುಲ್ ಇಲ್ಲಿಗೆ ಬರುವ ಧೈರ್ಯ ತೋರಿಸಿರುವುದು ಮೆಚ್ಚಬೇಕಾದದ್ದೇ: ಅರುಣ್ ಸಿಂಗ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ