AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಸೇನಾ ಕಾಪ್ಟರ್​ ದುರಂತದಲ್ಲಿ ಮೃತಪಟ್ಟ ಬ್ರಿಗೇಡಿಯರ್​ ಲಿಡ್ಡರ್​ ಕುಟುಂಬಕ್ಕೆ 50 ಲಕ್ಷ ರೂ.ನೆರವು; ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ

ಡಿಸೆಂಬರ್​ ತಿಂಗಳಲ್ಲಿ ತಮಿಳುನಾಡಿನಲ್ಲಿ ನಡೆದ ಸೇನಾ ವಿಮಾನ ಅಪಘಾತದಲ್ಲಿ (Army Helicopter Crash) ಮೃತಪಟ್ಟ ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್ (Brigadier Lidder)​ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್​ ಖಟ್ಟರ್​ ಹೇಳಿದ್ದಾರೆ. ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವ ಜತೆ, ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ. ಹಾಗೇ, ಬ್ರಿಗೇಡಿಯರ್​ ಲಿಡ್ಡರ್​ ಅಕಾಲಿಕ ನಿಧನದಿಂದ ಅವರ […]

ತಮಿಳುನಾಡು ಸೇನಾ ಕಾಪ್ಟರ್​ ದುರಂತದಲ್ಲಿ ಮೃತಪಟ್ಟ ಬ್ರಿಗೇಡಿಯರ್​ ಲಿಡ್ಡರ್​ ಕುಟುಂಬಕ್ಕೆ 50 ಲಕ್ಷ ರೂ.ನೆರವು; ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ
ಬ್ರಿಗೇಡಿಯರ್​ ಲಿಡ್ಡರ್​ ಕುಟುಂಬ
TV9 Web
| Edited By: |

Updated on:Jan 15, 2022 | 9:20 AM

Share

ಡಿಸೆಂಬರ್​ ತಿಂಗಳಲ್ಲಿ ತಮಿಳುನಾಡಿನಲ್ಲಿ ನಡೆದ ಸೇನಾ ವಿಮಾನ ಅಪಘಾತದಲ್ಲಿ (Army Helicopter Crash) ಮೃತಪಟ್ಟ ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್ (Brigadier Lidder)​ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್​ ಖಟ್ಟರ್​ ಹೇಳಿದ್ದಾರೆ. ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವ ಜತೆ, ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ. ಹಾಗೇ, ಬ್ರಿಗೇಡಿಯರ್​ ಲಿಡ್ಡರ್​ ಅಕಾಲಿಕ ನಿಧನದಿಂದ ಅವರ ಕುಟುಂಬ ಮತ್ತು ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಸೈನಿಕ್ ಮತ್ತು ಅರ್ಧ ಸೈನಿಕ್​ ಬಲ್​​ ಆರ್ಥಿಕ ನೆರವು ನೀತಿಯಡಿ, ಮೃತ ಲಿಡ್ಡರ್​ ಕುಟುಂಬಕ್ಕೆ ಹಣಕಾಸು ನೆರವು ಮತ್ತು ಸರ್ಕಾರಿ ಉದ್ಯೋಗ ನೀಡಲಾಗುವುದು. ಈ ನೀತಿಯಡಿ ಬ್ರಿಗೇಡಿಯರ್​ ಲಿಡ್ಡರ್​ ಅವರು ತಾತ್ಕಾಲಿಕ ಯುದ್ಧದ ಕಾರಣದಿಂದ ಮೃತಪಟ್ಟಿದ್ದಾರೆ ಎಂದೇ ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಲಿಡ್ಡರ್​ ಅವರು ಹರ್ಯಾಣದ ಪಂಚಕುಲಾ ನಿವಾಸಿ. ಡಿಸೆಂಬರ್​ 8ರಂದು ತಮಿಳುನಾಡಿನ ಕೂನೂರು ಬಳಿ ಭಾರತೀಯ ವಾಯುಪಡೆ ಹೆಲಿಕಾಪ್ಟರ್​ ಪತನವಾಗಿ ಮೃತಪಟ್ಟ 14 ಮಂದಿಯಲ್ಲಿ ಇವರೂ ಒಬ್ಬರು. ಈ ಸೇನಾ ವಿಮಾನ ದುರಂತದಲ್ಲಿ ಭಾರತದ ಪ್ರಥಮ ಸಿಡಿಎಸ್​ ಬಿಪಿನ್​ ಜನರಲ್​ ರಾವತ್​ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಕೂಡ ಮೃತಪಟ್ಟಿದ್ದಾರೆ. ಅಂದು ನಡೆದ ಅಪಘಾತದ ತನಿಖೆಯನ್ನು ಭಾರತೀಯ ಸೇನೆಯ ಮೂರು ವಲಯಗಳ ಮುಖ್ಯ ಅಧಿಕಾರಿಗಳನ್ನೊಳಗೊಂಡ ಸಮಿತಿ ನಡೆಸಿತ್ತು. ಅದರ ವರದಿ ಹೊರಬಿದ್ದಿದ್ದು, ಸೇನಾ ಹೆಲಿಕಾಪ್ಟರ್​ ದುರಂತಕ್ಕೆ ತಾಂತ್ರಿಕ ದೋಷ ಕಾರಣವಲ್ಲ. ಮೋಡ ಅಡ್ಡಬಂದು, ಹವಾಮಾನದಲ್ಲಿ ಆಕಸ್ಮಿಕವಾಗಿ ಆದ ಬದಲಾವಣೆಯೇ ಮುಖ್ಯ ಕಾರಣ ಎಂದು ಹೇಳಲಾಗಿದೆ. ಆದರೆ ಅಂದು ಸಿಡಿಎಸ್​ ರಾವತ್​ ಮತ್ತು ಇತರ 13 ಅಧಿಕಾರಿಗಳ ಸಾವು ದೇಶಕ್ಕೇ ಶಾಕ್​ ನೀಡಿತ್ತು.

ತಮಿಳುನಾಡಿನ ವೆಲ್ಲಿಂಗ್ಟನ್​​ನಲ್ಲಿರುವ ಮಿಲಿಟರಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಜನರಲ್​ ಬಿಪಿನ್​ ರಾವತ್​ ತೆರಳುತ್ತಿದ್ದರು. ಅವರೊಂದಿಗೆ ಪತ್ನಿ ಮಧುಲಿಕಾ ಸೇರಿ ಸೇನೆಯ ಇತರ ಉನ್ನತ ಅಧಿಕಾರಿಗಳು ಇದ್ದರು. ಆದರೆ ಕೂನೂರಿನ ಬಳಿಯ ನೀಲಗಿರಿ ಅರಣ್ಯದಲ್ಲಿ ಹೆಲಿಕಾಪ್ಟರ್​ ಪತನಗೊಂಡು ಸ್ಫೋಟಗೊಂಡಿತ್ತು. ಅಂದು ವಾಯುಸೇನೆ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ಒಬ್ಬರು ಬದುಕುಳಿದಿದ್ದರು. ಆದರೆ ಅವರೂ ಕೂಡ ಡಿಸೆಂಬರ್​ 15ರಂದು ಮೃತಪಟ್ಟಿದ್ದಾರೆ. ಈ ಮೂಲಕ ಅಂದು ಸೇನಾ ಹೆಲಿಕಾಪ್ಟರ್​​ನಲ್ಲಿದ್ದ 14 ಜನರೂ ಮೃತಪಟ್ಟಿದ್ದರು.

ಇದನ್ನೂ ಓದಿ: ಕಾಟನ್ ಮಾರುಕಟ್ಟೆಯನ್ನು ಲೀಜ್​ದಾರರಿಗೆ ಮಾರಾಟ ಮಾಡಲು ನಗರಸಭೆ ತೀರ್ಮಾನ; ಸಬ್ ಲೀಜ್​ದಾರರ ಕಡೆಗಣನೆ ಆಕ್ರೋಶ

Published On - 9:01 am, Sat, 15 January 22

Follow Us
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ