AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಸೇನಾ ಕಾಪ್ಟರ್​ ದುರಂತದಲ್ಲಿ ಮೃತಪಟ್ಟ ಬ್ರಿಗೇಡಿಯರ್​ ಲಿಡ್ಡರ್​ ಕುಟುಂಬಕ್ಕೆ 50 ಲಕ್ಷ ರೂ.ನೆರವು; ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ

ಡಿಸೆಂಬರ್​ ತಿಂಗಳಲ್ಲಿ ತಮಿಳುನಾಡಿನಲ್ಲಿ ನಡೆದ ಸೇನಾ ವಿಮಾನ ಅಪಘಾತದಲ್ಲಿ (Army Helicopter Crash) ಮೃತಪಟ್ಟ ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್ (Brigadier Lidder)​ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್​ ಖಟ್ಟರ್​ ಹೇಳಿದ್ದಾರೆ. ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವ ಜತೆ, ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ. ಹಾಗೇ, ಬ್ರಿಗೇಡಿಯರ್​ ಲಿಡ್ಡರ್​ ಅಕಾಲಿಕ ನಿಧನದಿಂದ ಅವರ […]

ತಮಿಳುನಾಡು ಸೇನಾ ಕಾಪ್ಟರ್​ ದುರಂತದಲ್ಲಿ ಮೃತಪಟ್ಟ ಬ್ರಿಗೇಡಿಯರ್​ ಲಿಡ್ಡರ್​ ಕುಟುಂಬಕ್ಕೆ 50 ಲಕ್ಷ ರೂ.ನೆರವು; ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ
ಬ್ರಿಗೇಡಿಯರ್​ ಲಿಡ್ಡರ್​ ಕುಟುಂಬ
TV9 Web
| Edited By: |

Updated on:Jan 15, 2022 | 9:20 AM

Share

ಡಿಸೆಂಬರ್​ ತಿಂಗಳಲ್ಲಿ ತಮಿಳುನಾಡಿನಲ್ಲಿ ನಡೆದ ಸೇನಾ ವಿಮಾನ ಅಪಘಾತದಲ್ಲಿ (Army Helicopter Crash) ಮೃತಪಟ್ಟ ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್ (Brigadier Lidder)​ ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್​ ಖಟ್ಟರ್​ ಹೇಳಿದ್ದಾರೆ. ಕುಟುಂಬಕ್ಕೆ 50 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವ ಜತೆ, ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ. ಹಾಗೇ, ಬ್ರಿಗೇಡಿಯರ್​ ಲಿಡ್ಡರ್​ ಅಕಾಲಿಕ ನಿಧನದಿಂದ ಅವರ ಕುಟುಂಬ ಮತ್ತು ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಸೈನಿಕ್ ಮತ್ತು ಅರ್ಧ ಸೈನಿಕ್​ ಬಲ್​​ ಆರ್ಥಿಕ ನೆರವು ನೀತಿಯಡಿ, ಮೃತ ಲಿಡ್ಡರ್​ ಕುಟುಂಬಕ್ಕೆ ಹಣಕಾಸು ನೆರವು ಮತ್ತು ಸರ್ಕಾರಿ ಉದ್ಯೋಗ ನೀಡಲಾಗುವುದು. ಈ ನೀತಿಯಡಿ ಬ್ರಿಗೇಡಿಯರ್​ ಲಿಡ್ಡರ್​ ಅವರು ತಾತ್ಕಾಲಿಕ ಯುದ್ಧದ ಕಾರಣದಿಂದ ಮೃತಪಟ್ಟಿದ್ದಾರೆ ಎಂದೇ ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಲಿಡ್ಡರ್​ ಅವರು ಹರ್ಯಾಣದ ಪಂಚಕುಲಾ ನಿವಾಸಿ. ಡಿಸೆಂಬರ್​ 8ರಂದು ತಮಿಳುನಾಡಿನ ಕೂನೂರು ಬಳಿ ಭಾರತೀಯ ವಾಯುಪಡೆ ಹೆಲಿಕಾಪ್ಟರ್​ ಪತನವಾಗಿ ಮೃತಪಟ್ಟ 14 ಮಂದಿಯಲ್ಲಿ ಇವರೂ ಒಬ್ಬರು. ಈ ಸೇನಾ ವಿಮಾನ ದುರಂತದಲ್ಲಿ ಭಾರತದ ಪ್ರಥಮ ಸಿಡಿಎಸ್​ ಬಿಪಿನ್​ ಜನರಲ್​ ರಾವತ್​ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಕೂಡ ಮೃತಪಟ್ಟಿದ್ದಾರೆ. ಅಂದು ನಡೆದ ಅಪಘಾತದ ತನಿಖೆಯನ್ನು ಭಾರತೀಯ ಸೇನೆಯ ಮೂರು ವಲಯಗಳ ಮುಖ್ಯ ಅಧಿಕಾರಿಗಳನ್ನೊಳಗೊಂಡ ಸಮಿತಿ ನಡೆಸಿತ್ತು. ಅದರ ವರದಿ ಹೊರಬಿದ್ದಿದ್ದು, ಸೇನಾ ಹೆಲಿಕಾಪ್ಟರ್​ ದುರಂತಕ್ಕೆ ತಾಂತ್ರಿಕ ದೋಷ ಕಾರಣವಲ್ಲ. ಮೋಡ ಅಡ್ಡಬಂದು, ಹವಾಮಾನದಲ್ಲಿ ಆಕಸ್ಮಿಕವಾಗಿ ಆದ ಬದಲಾವಣೆಯೇ ಮುಖ್ಯ ಕಾರಣ ಎಂದು ಹೇಳಲಾಗಿದೆ. ಆದರೆ ಅಂದು ಸಿಡಿಎಸ್​ ರಾವತ್​ ಮತ್ತು ಇತರ 13 ಅಧಿಕಾರಿಗಳ ಸಾವು ದೇಶಕ್ಕೇ ಶಾಕ್​ ನೀಡಿತ್ತು.

ತಮಿಳುನಾಡಿನ ವೆಲ್ಲಿಂಗ್ಟನ್​​ನಲ್ಲಿರುವ ಮಿಲಿಟರಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಜನರಲ್​ ಬಿಪಿನ್​ ರಾವತ್​ ತೆರಳುತ್ತಿದ್ದರು. ಅವರೊಂದಿಗೆ ಪತ್ನಿ ಮಧುಲಿಕಾ ಸೇರಿ ಸೇನೆಯ ಇತರ ಉನ್ನತ ಅಧಿಕಾರಿಗಳು ಇದ್ದರು. ಆದರೆ ಕೂನೂರಿನ ಬಳಿಯ ನೀಲಗಿರಿ ಅರಣ್ಯದಲ್ಲಿ ಹೆಲಿಕಾಪ್ಟರ್​ ಪತನಗೊಂಡು ಸ್ಫೋಟಗೊಂಡಿತ್ತು. ಅಂದು ವಾಯುಸೇನೆ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್​ ಒಬ್ಬರು ಬದುಕುಳಿದಿದ್ದರು. ಆದರೆ ಅವರೂ ಕೂಡ ಡಿಸೆಂಬರ್​ 15ರಂದು ಮೃತಪಟ್ಟಿದ್ದಾರೆ. ಈ ಮೂಲಕ ಅಂದು ಸೇನಾ ಹೆಲಿಕಾಪ್ಟರ್​​ನಲ್ಲಿದ್ದ 14 ಜನರೂ ಮೃತಪಟ್ಟಿದ್ದರು.

ಇದನ್ನೂ ಓದಿ: ಕಾಟನ್ ಮಾರುಕಟ್ಟೆಯನ್ನು ಲೀಜ್​ದಾರರಿಗೆ ಮಾರಾಟ ಮಾಡಲು ನಗರಸಭೆ ತೀರ್ಮಾನ; ಸಬ್ ಲೀಜ್​ದಾರರ ಕಡೆಗಣನೆ ಆಕ್ರೋಶ

Published On - 9:01 am, Sat, 15 January 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್