AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ಪ್ರೊಫೆಸರ್​ ನಮ್ಮನ್ನು ಬಾತ್​ರೂಮ್​ಗೆ ಕರೆದುಕೊಂಡು ಹೋಗ್ತಿದ್ರು, 500 ವಿದ್ಯಾರ್ಥಿನಿಯರಿಂದ ಮೋದಿ, ಖಟ್ಟರ್​ಗೆ ಪತ್ರ

ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು ಪ್ರೊಫೆಸರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಹರ್ಯಾಣ: ಪ್ರೊಫೆಸರ್​ ನಮ್ಮನ್ನು ಬಾತ್​ರೂಮ್​ಗೆ ಕರೆದುಕೊಂಡು ಹೋಗ್ತಿದ್ರು, 500 ವಿದ್ಯಾರ್ಥಿನಿಯರಿಂದ ಮೋದಿ, ಖಟ್ಟರ್​ಗೆ ಪತ್ರ
Image Credit source: JC Law
ನಯನಾ ರಾಜೀವ್
|

Updated on: Jan 09, 2024 | 8:55 AM

Share

ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು ಪ್ರೊಫೆಸರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಈ ಕುರಿತು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಪತ್ರ ಬರೆದಿದ್ದಾರೆ . ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಪತ್ರದ ಪ್ರತಿಯನ್ನು ಉಪಕುಲಪತಿ ಅಜ್ಮೀರ್ ಸಿಂಗ್ ಮಲಿಕ್, ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯ ಗೃಹ ಸಚಿವ ಅನಿಲ್ ವಿಜ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮತ್ತು ಇತರರಿಗೆ ಕಳುಹಿಸಲಾಗಿದೆ. ಆದರೆ, ಈ ಬಗ್ಗೆ ಸರಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಪ್ರೊಫೆಸರ್​ ತಮ್ಮ ಚೇಂಬರ್​ಗೆ ಕರೆಸಿಕೊಂಡು, ಬಳಿಕ ಬಾತ್​ರೂಮ್​ಗೆ ಕರೆದೊಯ್ದು, ಖಾಸಗಿ ಅಂಗಗಳನ್ನು ಮುಟ್ಟಿ ಅಶ್ಲೀಲ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ತೆಲಂಗಾಣ: ನಿರಂತರ ಕಿರುಕುಳ, ಲಿಂಗ ಪರಿವರ್ತನೆ ಮಾಡಿಕೊಂಡ ಪತಿಯನ್ನು ಕೊಂದ ಪತ್ನಿ

ಇದು ಹಲವು ತಿಂಗಳಿನಿಂದ ನಡೆಯುತ್ತಿದೆ ಎಂದು ಪತ್ರದಲ್ಲಿ ಹೇಳಿಕೊಂಡಿದ್ದಾರೆ. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ರಾಜೇಶ್ ಕುಮಾರ್ ಬನ್ಸಾಲ್ ಅವರು ಅನಾಮಧೇಯ ಪತ್ರ ಸ್ವೀಕರಿಸಿರುವುದನ್ನು ಒಪ್ಪಿಕೊಂಡಿದ್ದಾರೆ.

ಘಟನೆ ವಿಶ್ವವಿದ್ಯಾನಿಲಯದಲ್ಲಿ ಬೆಳಕಿಗೆ ಬಂದ ಬೆನ್ನಲ್ಲೇ ಹರ್ಯಾಣದ ಮನೋಹರ್ ಲಾಲ್ ಖಟ್ಟರ್ ಸರ್ಕಾರ ವಿಪಕ್ಷಗಳ ದಾಳಿಗೆ ಗುರಿಯಾಗಿದೆ. ಸಿರ್ಸಾದ ಚೌಧರಿ ದೇವಿ ಲಾಲ್ ವಿಶ್ವವಿದ್ಯಾನಿಲಯದ 500 ವಿದ್ಯಾರ್ಥಿನಿಯರಿಂದ ಕೇಳಿಬಂದಿರುವ ಗಂಭೀರ ಆರೋಪ ತೀವ್ರ ಕಳವಳಕಾರಿಯಾಗಿದೆ ಎಂದು ಅವರು ಬರೆದಿದ್ದಾರೆ.

ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ರಾಜ್ಯಪಾಲರಿಂದ ಪ್ರಧಾನಿಗೆ ಪತ್ರ ಬರೆಯಬೇಕಾಗಿರುವುದು ಬೇಸರದ ಸಂಗತಿ ಎಂದು ಕಾಂಗ್ರೆಸ್ ನಾಯಕ ದೀಪೇಂದ್ರ ಸಿಂಗ್ ಹೂಡಾ ಬರೆದಿದ್ದಾರೆ. ವಿದ್ಯಾರ್ಥಿನಿಯರ ಆರೋಪಗಳ ಬಗ್ಗೆ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಿ ಅವರಿಗೆ ನ್ಯಾಯ ಒದಗಿಸಬೇಕು ಎಂಬುದು ನನ್ನ ಮನವಿ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ