AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ಪ್ರೊಫೆಸರ್​ ನಮ್ಮನ್ನು ಬಾತ್​ರೂಮ್​ಗೆ ಕರೆದುಕೊಂಡು ಹೋಗ್ತಿದ್ರು, 500 ವಿದ್ಯಾರ್ಥಿನಿಯರಿಂದ ಮೋದಿ, ಖಟ್ಟರ್​ಗೆ ಪತ್ರ

ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು ಪ್ರೊಫೆಸರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಹರ್ಯಾಣ: ಪ್ರೊಫೆಸರ್​ ನಮ್ಮನ್ನು ಬಾತ್​ರೂಮ್​ಗೆ ಕರೆದುಕೊಂಡು ಹೋಗ್ತಿದ್ರು, 500 ವಿದ್ಯಾರ್ಥಿನಿಯರಿಂದ ಮೋದಿ, ಖಟ್ಟರ್​ಗೆ ಪತ್ರ
Image Credit source: JC Law
ನಯನಾ ರಾಜೀವ್
|

Updated on: Jan 09, 2024 | 8:55 AM

Share

ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು ಪ್ರೊಫೆಸರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಈ ಕುರಿತು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಪತ್ರ ಬರೆದಿದ್ದಾರೆ . ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಪತ್ರದ ಪ್ರತಿಯನ್ನು ಉಪಕುಲಪತಿ ಅಜ್ಮೀರ್ ಸಿಂಗ್ ಮಲಿಕ್, ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯ ಗೃಹ ಸಚಿವ ಅನಿಲ್ ವಿಜ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮತ್ತು ಇತರರಿಗೆ ಕಳುಹಿಸಲಾಗಿದೆ. ಆದರೆ, ಈ ಬಗ್ಗೆ ಸರಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಪ್ರೊಫೆಸರ್​ ತಮ್ಮ ಚೇಂಬರ್​ಗೆ ಕರೆಸಿಕೊಂಡು, ಬಳಿಕ ಬಾತ್​ರೂಮ್​ಗೆ ಕರೆದೊಯ್ದು, ಖಾಸಗಿ ಅಂಗಗಳನ್ನು ಮುಟ್ಟಿ ಅಶ್ಲೀಲ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ತೆಲಂಗಾಣ: ನಿರಂತರ ಕಿರುಕುಳ, ಲಿಂಗ ಪರಿವರ್ತನೆ ಮಾಡಿಕೊಂಡ ಪತಿಯನ್ನು ಕೊಂದ ಪತ್ನಿ

ಇದು ಹಲವು ತಿಂಗಳಿನಿಂದ ನಡೆಯುತ್ತಿದೆ ಎಂದು ಪತ್ರದಲ್ಲಿ ಹೇಳಿಕೊಂಡಿದ್ದಾರೆ. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ರಾಜೇಶ್ ಕುಮಾರ್ ಬನ್ಸಾಲ್ ಅವರು ಅನಾಮಧೇಯ ಪತ್ರ ಸ್ವೀಕರಿಸಿರುವುದನ್ನು ಒಪ್ಪಿಕೊಂಡಿದ್ದಾರೆ.

ಘಟನೆ ವಿಶ್ವವಿದ್ಯಾನಿಲಯದಲ್ಲಿ ಬೆಳಕಿಗೆ ಬಂದ ಬೆನ್ನಲ್ಲೇ ಹರ್ಯಾಣದ ಮನೋಹರ್ ಲಾಲ್ ಖಟ್ಟರ್ ಸರ್ಕಾರ ವಿಪಕ್ಷಗಳ ದಾಳಿಗೆ ಗುರಿಯಾಗಿದೆ. ಸಿರ್ಸಾದ ಚೌಧರಿ ದೇವಿ ಲಾಲ್ ವಿಶ್ವವಿದ್ಯಾನಿಲಯದ 500 ವಿದ್ಯಾರ್ಥಿನಿಯರಿಂದ ಕೇಳಿಬಂದಿರುವ ಗಂಭೀರ ಆರೋಪ ತೀವ್ರ ಕಳವಳಕಾರಿಯಾಗಿದೆ ಎಂದು ಅವರು ಬರೆದಿದ್ದಾರೆ.

ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ರಾಜ್ಯಪಾಲರಿಂದ ಪ್ರಧಾನಿಗೆ ಪತ್ರ ಬರೆಯಬೇಕಾಗಿರುವುದು ಬೇಸರದ ಸಂಗತಿ ಎಂದು ಕಾಂಗ್ರೆಸ್ ನಾಯಕ ದೀಪೇಂದ್ರ ಸಿಂಗ್ ಹೂಡಾ ಬರೆದಿದ್ದಾರೆ. ವಿದ್ಯಾರ್ಥಿನಿಯರ ಆರೋಪಗಳ ಬಗ್ಗೆ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಿ ಅವರಿಗೆ ನ್ಯಾಯ ಒದಗಿಸಬೇಕು ಎಂಬುದು ನನ್ನ ಮನವಿ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ