Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಅತಿದೊಡ್ಡ ಡ್ರಗ್ಸ್ ದಂಧೆ ಬಯಲು; 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ವಶ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಅತಿ ದೊಡ್ಡ ಮಾದಕ ದ್ರವ್ಯ ದಂಧೆಯಲ್ಲಿ 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಈ ಬೃಹತ್ ಕೊಕೇನ್ ರವಾನೆಯ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಸ್ಮಗ್ಲಿಂಗ್ ಸಿಂಡಿಕೇಟ್ ಕೈವಾಡವಿದೆ. ಇದು ದಕ್ಷಿಣ ದೆಹಲಿಯಿಂದ ನಡೆಸಲ್ಪಡುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ ಸಿಂಡಿಕೇಟ್ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ದೆಹಲಿಯ ಅತಿದೊಡ್ಡ ಡ್ರಗ್ಸ್ ದಂಧೆ ಬಯಲು; 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ವಶ
ಕೊಕೇನ್
Follow us
ಸುಷ್ಮಾ ಚಕ್ರೆ
|

Updated on: Oct 02, 2024 | 6:12 PM

ನವದೆಹಲಿ: ದೆಹಲಿ ಪೊಲೀಸರು ಇಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಅತಿದೊಡ್ಡ ಮಾದಕ ದ್ರವ್ಯ ದಂಧೆಯಲ್ಲಿ ಸುಮಾರು 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಡ್ರಗ್ಸ್ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಇದು ಅಂತಾರಾಷ್ಟ್ರೀಯ ಡ್ರಗ್ ಸಿಂಡಿಕೇಟ್ ಆಗಿದ್ದು, ಅಫ್ಘಾನ್ ಪ್ರಜೆಗಳು ನವದೆಹಲಿಯಲ್ಲಿ ಇದನ್ನು ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ದೆಹಲಿಯಲ್ಲಿ ಕೊಕೇನ್ ಮಾರಾಟ ಮಾಡಲು ಯೋಜಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶೇಷ ಕೋಶದ ತಂಡವು ಸುಳಿವನ್ನು ಆಧರಿಸಿ 2 ತಿಂಗಳಿನಿಂದ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ, ಹೊಸ ಕಾನೂನು ಜಾರಿಗೆ ನಿರ್ಧಾರ: ಸಿದ್ದರಾಮಯ್ಯ

ಸಿಂಡಿಕೇಟ್ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರು ಅಫ್ಘಾನಿಸ್ತಾನದ ಪ್ರಜೆಗಳನ್ನು ಬಂಧಿಸಿದ ಕೆಲವೇ ದಿನಗಳಲ್ಲಿ ಡ್ರಗ್ ದಂಧೆ ಬೆಳಕಿಗೆ ಬಂದಿದೆ. ತಿಲಕ್ ನಗರದಲ್ಲಿ ನಡೆದ ದಾಳಿ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇಬ್ಬರು ಆರೋಪಿಗಳಾದ ಹಾಶಿಮಿ ಮೊಹಮ್ಮದ್ ವಾರಿಸ್ ಮತ್ತು ಅಬ್ದುಲ್ ನಯೀಬ್ ಅವರಿಂದ 400 ಗ್ರಾಂ ಹೆರಾಯಿನ್ ಮತ್ತು 160 ಗ್ರಾಂ ಕೊಕೇನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಡ್ರಗ್ಸ್, ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ

ವಾರಿಸ್ ಅವರು ಜನವರಿ 2020ರಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು ಅಫ್ಘಾನಿಸ್ತಾನದಲ್ಲಿದೆ. ಪೊಲೀಸರ ಪ್ರಕಾರ ನಯೀಬ್ ಕೂಡ ಆಫ್ಘನ್ ಪ್ರಜೆಯಾಗಿದ್ದು, ಅವನು ತನ್ನ ತಂದೆಯೊಂದಿಗೆ ಜನವರಿ 2020ರಲ್ಲಿ ಭಾರತಕ್ಕೆ ಬಂದನು. ಅವರು ನೋಂದಾಯಿತ ನಿರಾಶ್ರಿತರಾಗಿದ್ದರು. ಅವರ ತಂದೆಯನ್ನು ಹೊರತುಪಡಿಸಿ ಅವರ ಇಡೀ ಕುಟುಂಬವು ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ