AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gas Cylinder Price: ಈ ರಾಜ್ಯದಲ್ಲಿ 2023 ಏಪ್ರಿಲ್ 1ರಿಂದ ಗ್ಯಾಸ್ ಸಿಲಿಂಡರ್​ಗೆ 500 ರೂ.

ಮುಂದಿನ ವರ್ಷ ಏಪ್ರಿಲ್ 1ರ ನಂತರ ಬಿಪಿಎಲ್ ಕುಟುಂಬಗಳಿಗೆ ತಲಾ 500 ರೂಪಾಯಿಯಂತೆ ವರ್ಷದಲ್ಲಿ 12 ಗ್ಯಾಸ್ ಸಿಲಿಂಡರ್ ನೀಡುತ್ತೇವೆ ಎಂದು ರಾಜಸ್ಥಾನ ಸರ್ಕಾರ ಘೋಷಣೆ ಮಾಡಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಯಾರೂ ವಂಚಿತರಾಗಬಾರದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

Gas Cylinder Price: ಈ ರಾಜ್ಯದಲ್ಲಿ 2023 ಏಪ್ರಿಲ್ 1ರಿಂದ ಗ್ಯಾಸ್ ಸಿಲಿಂಡರ್​ಗೆ 500 ರೂ.
ಸಾಂದರ್ಭಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Dec 19, 2022 | 8:43 PM

Share

ಜೈಪುರ: ಮುಂದಿನ ವರ್ಷ ಏಪ್ರಿಲ್ 1ರ ನಂತರ ಬಿಪಿಎಲ್ (BPL) ಕುಟುಂಬಗಳಿಗೆ ತಲಾ 500 ರೂಪಾಯಿಯಂತೆ ವರ್ಷದಲ್ಲಿ 12 ಗ್ಯಾಸ್ ಸಿಲಿಂಡರ್ (gas cylinder) ನೀಡುತ್ತೇವೆ ಎಂದು ರಾಜಸ್ಥಾನ ಸರ್ಕಾರ ಘೋಷಣೆ ಮಾಡಿದೆ ಎಂದು ANI ತಿಳಿಸಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಯಾರೂ ವಂಚಿತರಾಗಬಾರದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಮತ್ತು ಉಜ್ವಲ ಯೋಜನೆಗೆ ಅಡಿಯಲ್ಲಿ ಅಡುಗೆ ಅನಿಲ ಪಡೆಯುತ್ತಿರುವ ಜನರಿಗೆ ರಾಜಸ್ಥಾನ ಸರ್ಕಾರ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಣೆ ಮಾಡಿದ್ದಾರೆ. ಅವರು ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ಈ ಘೋಷಣೆ ಮಾಡಿದ್ದಾರೆ. ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸುವ ಮೂಲಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದರು, ಬಿಪಿಎಲ್​ ಕುಟುಂಬಗಳಿಗೆ ಅರ್ಧಕ್ಕಿಂತ ಕಡಿಮೆ ಬೆಲೆಯಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಸಿಲಿಂಡರ್‌ಗಳನ್ನು ನೀಡುವುದಾಗಿ ಹೇಳಿದರು.

ನಾನು ಮುಂದಿನ ತಿಂಗಳು ಬಜೆಟ್‌ಗೆ ಸಿದ್ಧತೆ ನಡೆಸುತ್ತಿದ್ದೇನೆ. ಈ ಸಮಯದಲ್ಲಿ ನಿಮ್ಮ ಮುಂದೆ ಈ ಘೋಷಣೆಯನ್ನು ಇಡುತ್ತಿದ್ದೇನೆ. ಉಜ್ವಲ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗೆ ಎಲ್‌ಪಿಜಿ ಸಂಪರ್ಕಗಳನ್ನು ನೀಡಿದರು. ಆದರೆ ಈಗ ಆ ಸಿಲಿಂಡರ್ ಖಾಲಿಯಾಗಿದೆ, ಏಕೆಂದರೆ ಸಿಲಿಂಡರ್ ದರಗಳು ಈಗ 400ರಿಂದ 1,040 ರೂ.ಗೆ ಹೆಚ್ಚಾಗಿದೆ ಗೆಹ್ಲೋಟ್ ಹೇಳಿದರು. ನಾವು ವರ್ಷಕ್ಕೆ 12 ಸಿಲಿಂಡರ್‌ಗಳನ್ನು ನೀಡುತ್ತೇವೆ ಗೆಹ್ಲೋಟ್ ಹೇಳಿದರು.

ಇದನ್ನು ಓದಿ: ಇನ್ನು ಕ್ಯುಆರ್​ ಕೋಡ್​ನೊಂದಿಗೆ ಬರಲಿದೆ ಎಲ್​ಪಿಜಿ ಸಿಲಿಂಡರ್! ಪ್ರಯೋಜನಗಳು ಹಲವು

ಮುಂದಿನ ವರ್ಷ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಆದರೆ ಆಡಳಿತಕ್ಕಿಂತ ಹೆಚ್ಚಾಗಿ ಪಕ್ಷದ ಒಳಜಗಳವೇ ಹೆಚ್ಚಾಗಿದೆ. ರಾಹುಲ್ ಭಾರತ್ ಜೋಡೋ ಯಾತ್ರೆಯ ಮೂಲಕ ರಾಜ್ಯವನ್ನು ತಲುಪುದಕ್ಕಿಂತ ಮುನ್ನವೇ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ಹೊಸ ಘರ್ಷಣೆ ಉಂಟಾಗಿತ್ತು.

ಇಂದು ಅಲ್ವಾರ್‌ನಲ್ಲಿ 1,700 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಉದ್ಟಾಟನೆ ಮಾಡಿ, ಗೆಹ್ಲೋಟ್ ಅವರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು. ಸರ್ಕಾರದ ಘೋಷಣೆಯು ಉಚಿತ ಮತ್ತು ಸಬ್ಸಿಡಿ ಕುರಿತ ಚರ್ಚೆಗೆ ಹೊಸ ಪ್ರಚೋದನೆಯನ್ನು ನೀಡುವ ಸಾಧ್ಯತೆಗಳು ಇವೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Mon, 19 December 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​