ಹರಿದ್ವಾರ: ಇದ್ದಕ್ಕಿದ್ದಂತೆ ತುಂಬಿ ಹರಿದ ನದಿ, ಮಾರ್ಗ ಮಧ್ಯೆ ನೀರಿನಲ್ಲಿ ಸಿಲುಕಿದ ಬಸ್, 53 ಪ್ರಯಾಣಿಕರ ರಕ್ಷಣೆ

ನೇಪಾಳ್​ಗಂಜ್​ನಿಂದ ಹರಿದ್ವಾರಕ್ಕೆ ಬರುತ್ತಿದ್ದ ಬಸ್​ ಒಂದು ಮಾರ್ಗಮಧ್ಯೆ ತುಂಬಿ ಹರಿಯುತ್ತಿದ್ದ ನದಿ ನೀರಿನಲ್ಲಿ ಸಿಲುಕಿದ್ದು, 53 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಬಸ್ ನೀರಿನಲ್ಲಿ ಸಿಲುಕಿದ ತಕ್ಷಣ ಹರಿದ್ವಾರದ ಸಿಟಿ ಕಂಟ್ರೋಲ್‌ ರೂಂ ಎಸ್‌ಡಿಆರ್‌ಎಫ್ ತಂಡಕ್ಕೆ ಮಾಹಿತಿ ನೀಡಿತ್ತು. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರ ರಕ್ಷಣೆಗಾಗಿ ಎಸ್‌ಡಿಆರ್‌ಎಫ್‌ನ ಸಹಾಯವನ್ನು ಕೋರಲಾಗಿತ್ತು.

ಹರಿದ್ವಾರ: ಇದ್ದಕ್ಕಿದ್ದಂತೆ ತುಂಬಿ ಹರಿದ ನದಿ, ಮಾರ್ಗ ಮಧ್ಯೆ ನೀರಿನಲ್ಲಿ ಸಿಲುಕಿದ ಬಸ್, 53 ಪ್ರಯಾಣಿಕರ ರಕ್ಷಣೆ
ಬಸ್

Updated on: Sep 15, 2023 | 3:42 PM

ನೇಪಾಳ್​ಗಂಜ್​ನಿಂದ ಹರಿದ್ವಾರಕ್ಕೆ ಬರುತ್ತಿದ್ದ ಬಸ್​ ಒಂದು ಮಾರ್ಗಮಧ್ಯೆ ತುಂಬಿ ಹರಿಯುತ್ತಿದ್ದ ನದಿ ನೀರಿನಲ್ಲಿ ಸಿಲುಕಿದ್ದು, 53 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಬಸ್ ನೀರಿನಲ್ಲಿ ಸಿಲುಕಿದ ತಕ್ಷಣ ಹರಿದ್ವಾರದ ಸಿಟಿ ಕಂಟ್ರೋಲ್‌ ರೂಂ ಎಸ್‌ಡಿಆರ್‌ಎಫ್ ತಂಡಕ್ಕೆ ಮಾಹಿತಿ ನೀಡಿತ್ತು. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರ ರಕ್ಷಣೆಗಾಗಿ ಎಸ್‌ಡಿಆರ್‌ಎಫ್‌ನ ಸಹಾಯವನ್ನು ಕೋರಲಾಗಿತ್ತು.

ಮಾಹಿತಿ ಲಭಿಸಿದ ತಕ್ಷಣ ಎಸ್‌ಡಿಆರ್‌ಎಫ್ ರಕ್ಷಣಾ ತಂಡವು ಹೆಚ್ಚುವರಿ ಸಬ್ ಇನ್‌ಸ್ಪೆಕ್ಟರ್ ಪರ್ವಿಂದರ್ ಧಸ್ಮಾನ್​ ಅವರ  ಮಾರ್ಗದರ್ಶನದಲ್ಲಿ ರಕ್ಷಣಾ ಸಾಧನಗಳೊಂದಿಗೆ ತಕ್ಷಣ ಸ್ಥಳಕ್ಕೆ ತೆರಳಿದರು. ಮಾಹಿತಿ ಮೇರೆಗೆ ತಕ್ಷಣ ಕ್ರಮ ಕೈಗೊಂಡ ಎಸ್ ಡಿಆರ್ ಎಫ್ ತಂಡ ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಬಸ್ ನಲ್ಲಿದ್ದವರನ್ನು ಒಬ್ಬೊಬ್ಬರಾಗಿ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದರು.

ಮತ್ತಷ್ಟು ಓದಿ: ರೈತರಿಗೆ ಗುಡ್​ನ್ಯೂಸ್​: ಆಗಸ್ಟ್​ ಮೊದಲ ವಾರದಲ್ಲಿ ‌ಕಾಲುವೆಗೆ ಭದ್ರಾ ನದಿ ನೀರು

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಭಯಭೀತರಾಗಿ ಬಸ್ಸಿನಿಂದ ಹೊರಬಂದು ಸೇತುವೆಯ ಕೆಳಗಿರುವ ಪಿಲ್ಲರ್‌ಗಳ ಮೇಲೆ ಹತ್ತಿದ್ದಾರೆ. ಎಸ್‌ಡಿಆರ್‌ಎಫ್ ಹಗ್ಗ ಬಳಸಿ ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆತಂದರು.

ಬಸ್ಸಿನಲ್ಲಿ 53 ಜನರಿದ್ದರು, ಬಹುತೇಕರು ನೇಪಾಳಮೂಲದವರಾಗಿದ್ದರು. ಮಾರ್ಗಮಧ್ಯೆ ಮಳೆಯ ರಭಸಕ್ಕೆ ನದಿಯಲ್ಲಿ ಇದ್ದಕ್ಕಿದ್ದಂತೆ ನೀರು ಹರಿದಿದ್ದರಿಂದ ಪ್ರಯಾಣಿಕರಿದ್ದ ಬಸ್ ನದಿಯಲ್ಲಿ ಸಿಲುಕಿಕೊಂಡಿತು. ಎಸ್‌ಡಿಆರ್‌ಎಫ್‌ನಿಂದ ಸಕಾಲದಲ್ಲಿ ಎಲ್ಲ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಬಸ್‌ನ್ನು ಸ್ಥಳಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us