AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanti 2023: ಗುಜರಾತಿನ ಸಲಂಗ್​​ಪುರ್​​ನಲ್ಲಿ 54 ಅಡಿ ಎತ್ತರದ ಹನುಮಂತನ ಮೂರ್ತಿ ಅನಾವರಣಗೊಳಿಸಲಿದ್ದಾರೆ ಅಮಿತ್ ಶಾ

ಮೂರ್ತಿಯು ಮುಂಭಾಗದಲ್ಲಿ ಉದ್ಯಾನವನವನ್ನು ಹೊಂದಿದ್ದು, 1500 ಪ್ರೇಕ್ಷಕರಿಗೆ ಒಂದು ಆಂಫಿಥಿಯೇಟರ್ ಜೊತೆಗೆ ಬೆಳಕು ಮತ್ತು ಧ್ವನಿ ಪ್ರದರ್ಶನ, ಕಾರಂಜಿ ಇರುತ್ತದೆ

Hanuman Jayanti 2023: ಗುಜರಾತಿನ ಸಲಂಗ್​​ಪುರ್​​ನಲ್ಲಿ 54 ಅಡಿ ಎತ್ತರದ ಹನುಮಂತನ ಮೂರ್ತಿ ಅನಾವರಣಗೊಳಿಸಲಿದ್ದಾರೆ ಅಮಿತ್ ಶಾ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
|

Updated on: Apr 06, 2023 | 7:00 AM

Share

ಸಲಂಗ್​​ಪುರ್: ಕೇಂದ್ರ ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್‌ ಶಾ(Amit Shah) ಇಂದು(ಏಪ್ರಿಲ್ 6 ರಂದು) ಗುಜರಾತಿನ ಬೊಟಾಡ್ ಜಿಲ್ಲೆಯ ಸಲಂಗ್‌ಪುರ (Salangpur) ಪಟ್ಟಣದಲ್ಲಿ ಭಗವಾನ್ ಹನುಮಾನ್ ಮೂರ್ತಿಯನ್ನು (Hanuman Statue ) ಅನಾವರಣಗೊಳಿಸಲಿದ್ದಾರೆ. 54 ಅಡಿ ಎತ್ತರದ 30,000 ಕೆಜಿ ಪಂಚಧಾತು ವಸ್ತು ನಿರ್ಮಿತ ಮೂರ್ತಿಯಾಗಿದೆ ಇದು.ಇಲ್ಲಿಯೇ ಶಾ ಅವರು ಈ ಯಾತ್ರಾ ಸ್ಥಳದ ಭೋಜನ ಶಾಲೆಯನ್ನು ಉದ್ಘಾಟಿಸಲಿದ್ದಾರೆ. ಮೂರ್ತಿಯು ಮುಂಭಾಗದಲ್ಲಿ ಉದ್ಯಾನವನವನ್ನು ಹೊಂದಿದ್ದು, 1500 ಪ್ರೇಕ್ಷಕರಿಗೆ ಒಂದು ಆಂಫಿಥಿಯೇಟರ್ ಜೊತೆಗೆ ಬೆಳಕು ಮತ್ತು ಧ್ವನಿ ಪ್ರದರ್ಶನ, ಕಾರಂಜಿ ಇರುತ್ತದೆ. ಮೂರ್ತಿಯನ್ನು ರಾಜಸ್ಥಾನ ಮೂಲದ ಕಲಾವಿದ ನರೇಶ್‌ಭಾಯ್ ಕುನಾವತ್ ರಚಿಸಿದ್ದಾರೆ. ಇದನ್ನು ಸಲಂಗ್‌ಪುರದ ರಾಜ ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ.

40 ಕೋಟಿ ವೆಚ್ಚದಲ್ಲಿ ಮಂದಿರದಲ್ಲಿ 7 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿರುವ ಭೋಜನಾಲಯದಲ್ಲಿ ಏಕಕಾಲಕ್ಕೆ 5 ಸಾವಿರ ಮಂದಿ ಕೂತು ಉಣ್ಣಲು ಅವಕಾಶ ಕಲ್ಪಿಸಲಾಗಿದೆ.

ಭೋಜನಾಲಯದಲ್ಲಿ ಬೆಂಕಿ ಅಥವಾ ವಿದ್ಯುತ್ ಇಲ್ಲದೆ ಎಣ್ಣೆ ಆಧಾರಿತ ತಂತ್ರಜ್ಞಾನವನ್ನು ಬಳಸಿ ಅಡುಗೆ ಮಾಡಲಾಗುತ್ತದೆ. ಭೋಜನಾಲಯದ ಕಟ್ಟಡವು ಸುಮಾರು 2 ಲಕ್ಷ 30 ಸಾವಿರ ಚದರ ಅಡಿಯಷ್ಟಿದ್ದು, 250 ಅಂಕಣಗಳಲ್ಲಿ ನಿರ್ಮಿಸಲಾಗಿದೆ. ಇದು 75 ಅಡಿ ಅಗಲದ ಮೆಟ್ಟಿಲುಗಳನ್ನು ಹೊಂದಿದ್ದು, ಅವುಗಳ ನಡುವೆ ಹಿರಿಯ ನಾಗರಿಕರು ಮತ್ತು ವಿಶೇಷ ಸಾಮರ್ಥ್ಯವುಳ್ಳವರಿಗೆ ಎಸ್ಕಲೇಟರ್‌ಗಳಿವೆ. ಕಟ್ಟಡದ ಒಳಗೆ ತಾಪಮಾನವನ್ನು ನಿರ್ವಹಿಸಲು ವಿಶೇಷ ಕಗೋಡೆಯನ್ನು ಸ್ಥಾಪಿಸಲಾಗಿದೆ. ಇದು ಒಟ್ಟು 4 ಡೈನಿಂಗ್ ಹಾಲ್‌ಗಳನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್