AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanti 2023: ಗುಜರಾತಿನ ಸಲಂಗ್​​ಪುರ್​​ನಲ್ಲಿ 54 ಅಡಿ ಎತ್ತರದ ಹನುಮಂತನ ಮೂರ್ತಿ ಅನಾವರಣಗೊಳಿಸಲಿದ್ದಾರೆ ಅಮಿತ್ ಶಾ

ಮೂರ್ತಿಯು ಮುಂಭಾಗದಲ್ಲಿ ಉದ್ಯಾನವನವನ್ನು ಹೊಂದಿದ್ದು, 1500 ಪ್ರೇಕ್ಷಕರಿಗೆ ಒಂದು ಆಂಫಿಥಿಯೇಟರ್ ಜೊತೆಗೆ ಬೆಳಕು ಮತ್ತು ಧ್ವನಿ ಪ್ರದರ್ಶನ, ಕಾರಂಜಿ ಇರುತ್ತದೆ

Hanuman Jayanti 2023: ಗುಜರಾತಿನ ಸಲಂಗ್​​ಪುರ್​​ನಲ್ಲಿ 54 ಅಡಿ ಎತ್ತರದ ಹನುಮಂತನ ಮೂರ್ತಿ ಅನಾವರಣಗೊಳಿಸಲಿದ್ದಾರೆ ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on: Apr 06, 2023 | 7:00 AM

ಸಲಂಗ್​​ಪುರ್: ಕೇಂದ್ರ ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್‌ ಶಾ(Amit Shah) ಇಂದು(ಏಪ್ರಿಲ್ 6 ರಂದು) ಗುಜರಾತಿನ ಬೊಟಾಡ್ ಜಿಲ್ಲೆಯ ಸಲಂಗ್‌ಪುರ (Salangpur) ಪಟ್ಟಣದಲ್ಲಿ ಭಗವಾನ್ ಹನುಮಾನ್ ಮೂರ್ತಿಯನ್ನು (Hanuman Statue ) ಅನಾವರಣಗೊಳಿಸಲಿದ್ದಾರೆ. 54 ಅಡಿ ಎತ್ತರದ 30,000 ಕೆಜಿ ಪಂಚಧಾತು ವಸ್ತು ನಿರ್ಮಿತ ಮೂರ್ತಿಯಾಗಿದೆ ಇದು.ಇಲ್ಲಿಯೇ ಶಾ ಅವರು ಈ ಯಾತ್ರಾ ಸ್ಥಳದ ಭೋಜನ ಶಾಲೆಯನ್ನು ಉದ್ಘಾಟಿಸಲಿದ್ದಾರೆ. ಮೂರ್ತಿಯು ಮುಂಭಾಗದಲ್ಲಿ ಉದ್ಯಾನವನವನ್ನು ಹೊಂದಿದ್ದು, 1500 ಪ್ರೇಕ್ಷಕರಿಗೆ ಒಂದು ಆಂಫಿಥಿಯೇಟರ್ ಜೊತೆಗೆ ಬೆಳಕು ಮತ್ತು ಧ್ವನಿ ಪ್ರದರ್ಶನ, ಕಾರಂಜಿ ಇರುತ್ತದೆ. ಮೂರ್ತಿಯನ್ನು ರಾಜಸ್ಥಾನ ಮೂಲದ ಕಲಾವಿದ ನರೇಶ್‌ಭಾಯ್ ಕುನಾವತ್ ರಚಿಸಿದ್ದಾರೆ. ಇದನ್ನು ಸಲಂಗ್‌ಪುರದ ರಾಜ ಎಂದು ಜನಪ್ರಿಯವಾಗಿ ಕರೆಯಲಾಗುತ್ತದೆ.

40 ಕೋಟಿ ವೆಚ್ಚದಲ್ಲಿ ಮಂದಿರದಲ್ಲಿ 7 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿರುವ ಭೋಜನಾಲಯದಲ್ಲಿ ಏಕಕಾಲಕ್ಕೆ 5 ಸಾವಿರ ಮಂದಿ ಕೂತು ಉಣ್ಣಲು ಅವಕಾಶ ಕಲ್ಪಿಸಲಾಗಿದೆ.

ಭೋಜನಾಲಯದಲ್ಲಿ ಬೆಂಕಿ ಅಥವಾ ವಿದ್ಯುತ್ ಇಲ್ಲದೆ ಎಣ್ಣೆ ಆಧಾರಿತ ತಂತ್ರಜ್ಞಾನವನ್ನು ಬಳಸಿ ಅಡುಗೆ ಮಾಡಲಾಗುತ್ತದೆ. ಭೋಜನಾಲಯದ ಕಟ್ಟಡವು ಸುಮಾರು 2 ಲಕ್ಷ 30 ಸಾವಿರ ಚದರ ಅಡಿಯಷ್ಟಿದ್ದು, 250 ಅಂಕಣಗಳಲ್ಲಿ ನಿರ್ಮಿಸಲಾಗಿದೆ. ಇದು 75 ಅಡಿ ಅಗಲದ ಮೆಟ್ಟಿಲುಗಳನ್ನು ಹೊಂದಿದ್ದು, ಅವುಗಳ ನಡುವೆ ಹಿರಿಯ ನಾಗರಿಕರು ಮತ್ತು ವಿಶೇಷ ಸಾಮರ್ಥ್ಯವುಳ್ಳವರಿಗೆ ಎಸ್ಕಲೇಟರ್‌ಗಳಿವೆ. ಕಟ್ಟಡದ ಒಳಗೆ ತಾಪಮಾನವನ್ನು ನಿರ್ವಹಿಸಲು ವಿಶೇಷ ಕಗೋಡೆಯನ್ನು ಸ್ಥಾಪಿಸಲಾಗಿದೆ. ಇದು ಒಟ್ಟು 4 ಡೈನಿಂಗ್ ಹಾಲ್‌ಗಳನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ