AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯಲ್ಲಿ 544 ಸ್ಥಾನಗಳಿಗೆ ಮತದಾನ? ಏನಿದು ಲೆಕ್ಕಾಚಾರ?

ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ. ನಾವು ಯೋಜನೆಯನ್ನು ರೂಪಿಸಿದ್ದೇವೆ, ಶಿಬಿರದಲ್ಲಿರುವ ಮತದಾರರಿಗೆ ಶಿಬಿರದಿಂದಲೇ ಮತದಾನ ಮಾಡಲು ನಾವು ಸೂಚಿಸಿದ್ದೇವೆ. ಜಮ್ಮು ಮತ್ತು ಕಾಶ್ಮೀರ ವಲಸಿಗರಿಗೆ ಒಂದು ಯೋಜನೆ ಇದೆ, ಅದೇ ರೀತಿಯಲ್ಲಿ ಮಣಿಪುರದಲ್ಲಿ ಯೋಜನೆಯು ಜಾರಿಯಾಗಲಿದೆ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 544 ಸ್ಥಾನಗಳಿಗೆ ಮತದಾನ? ಏನಿದು ಲೆಕ್ಕಾಚಾರ?
ರಾಜೀವ್ ಕುಮಾರ್
ರಶ್ಮಿ ಕಲ್ಲಕಟ್ಟ
|

Updated on: Mar 16, 2024 | 8:37 PM

Share

ದೆಹಲಿ ಮಾರ್ಚ್ 16: ಲೋಕಸಭೆಯ (Lok sabha Election) 543 ಸ್ಥಾನಗಳಿಗೆ ಏಪ್ರಿಲ್ 19 ರಂದು ಪ್ರಾರಂಭವಾಗುವ ಚುನಾವಣೆಯು ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಆದರೆ, ಚುನಾವಣಾ ಆಯೋಗವು (Election Commission) ಇಂದು (ಶನಿವಾರ) ಸಂಜೆ ವೇಳಾಪಟ್ಟಿಯನ್ನು ಪ್ರಕಟಿಸಿದಾಗ, 543 ಲೋಕಸಭಾ ಸ್ಥಾನಗಳ ಬದಲಿಗೆ 544 ಕ್ಷೇತ್ರ ಎಂದು ಹೇಳಿದೆ. ಹಾಗಾದರೆ ಒಂದು ಕ್ಷೇತ್ರ ಸೇರ್ಪಡೆ ಆಗಿದೆಯೇ ಎಂಬ ಯೋಚನೆ ನಿಮಗೆ ಬರದೇ ಇರದು. ಆದರೆ ಲೆಕ್ಕಾಚಾರ ಹಾಗಲ್ಲ. ಮಣಿಪುರದ ಎರಡು ಕ್ಷೇತ್ರಗಳಲ್ಲಿ ಒಂದಕ್ಕೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Rajiv Kumar) ಈ ಬಗ್ಗೆ ವಿವರಿಸಿದ್ದಾರೆ. ಹಾಗಾಗಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 544 ಎಂದು ಅವರು ಹೇಳಿದ್ದಾರೆ.

ಮಣಿಪುರದ ಎರಡು ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಣಿಪುರದ ಒಳಭಾಗ ಮತ್ತು ಹೊರ ಮಣಿಪುರದ ಕೆಲವು ಭಾಗಗಳಲ್ಲಿ ಏಪ್ರಿಲ್ 19 ರಂದು ಹಂತ 1 ರಲ್ಲಿ ಮತ್ತು ಏಪ್ರಿಲ್ 26 ರಂದು 2 ನೇ ಹಂತದಲ್ಲಿ ಮತದಾನ ನಡೆಯಲಿದೆ. ಉಳಿದ ಭಾಗಗಳು ಹೊರ ಮಣಿಪುರ ಮತ್ತೆ ಮತ ಚಲಾಯಿಸಲಿದೆ. ಕಳೆದ ವರ್ಷ ಮೇ 3 ರಂದು ಎರಡು ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳು ಮೊದಲ ಬಾರಿಗೆ ಭುಗಿಲೆದ್ದ ನಂತರ ಪುನರಾವರ್ತಿತ ಹಿಂಸಾಚಾರದಿಂದ ನಲುಗಿರುವ ರಾಜ್ಯದಲ್ಲಿ ಜನರು ಸ್ಥಳಾಂತರಗೊಂಡ ಕಾರಣ ಒಂದು ಸ್ಥಾನಕ್ಕೆ ಎರಡು ಬಾರಿ ಮತದಾನ ನಡೆಯಲಿದೆ.

ಮಣಿಪುರದ ಒಳ ಮತ್ತು ಹೊರ ಸ್ಥಾನಗಳನ್ನು ಕ್ರಮವಾಗಿ ಬಿಜೆಪಿ ಮತ್ತು ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಹೊಂದಿದೆ. ಮಣಿಪುರದ ಹೊರ ಕ್ಷೇತ್ರವು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿದೆ.

ಮುಂಬರುವ ಚುನಾವಣೆಯಲ್ಲಿ ಮಣಿಪುರದ ಶಿಬಿರಗಳಲ್ಲಿ ವಾಸಿಸುವ ಜನರಿಗೆ ಅವರ ಶಿಬಿರಗಳಿಂದ ಮತ ಚಲಾಯಿಸಲು ಅವಕಾಶ ನೀಡಲಾಗುವುದು ಎಂದು ಚುನಾವಣಾ ಆಯೋಗ ಘೋಷಿಸಿದೆ.

“ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ. ನಾವು ಯೋಜನೆಯನ್ನು ರೂಪಿಸಿದ್ದೇವೆ, ಶಿಬಿರದಲ್ಲಿರುವ ಮತದಾರರಿಗೆ ಶಿಬಿರದಿಂದಲೇ ಮತದಾನ ಮಾಡಲು ನಾವು ಸೂಚಿಸಿದ್ದೇವೆ. ಜಮ್ಮು ಮತ್ತು ಕಾಶ್ಮೀರ ವಲಸಿಗರಿಗೆ ಒಂದು ಯೋಜನೆ ಇದೆ, ಅದೇ ರೀತಿಯಲ್ಲಿ ಮಣಿಪುರದಲ್ಲಿ ಯೋಜನೆಯು ಜಾರಿಯಾಗಲಿದೆ. ಮತದಾರರಿಗೆ ಆಯಾ ಕ್ಯಾಂಪ್‌ಗಳಿಂದ ಕೆಳಗಿನ ಕ್ಷೇತ್ರದಿಂದ ಮೇಲಕ್ಕೆ ಮತ್ತು ಮೇಲಿನಿಂದ ಕೆಳಕ್ಕೆ ಮತ ಚಲಾಯಿಸಲು ಅವಕಾಶ ನೀಡಲಾಗುತ್ತದೆ ಎಂದು ಕುಮಾರ್ ಹೇಳಿದರು.

ಇದನ್ನೂ ಓದಿ: Lok Sabha Election Opinion Poll: ಲೋಕಸಭೆ ಚುನಾವಣೆ ಸಮೀಕ್ಷೆ, ಎನ್​ಡಿಎ vs ಇಂಡಿಯಾ ಬಲಾಬಲ ಹೀಗಿದೆ

“ಮತದಾರರಲ್ಲಿ ನನ್ನ ಮನವಿ ಏನೆಂದರೆ, ಶಾಂತಿಯುತವಾಗಿ ಚುನಾವಣೆಯಲ್ಲಿ ಭಾಗವಹಿಸಿ, ಮತದಾನದ ಮೂಲಕ ಪ್ರತಿನಿಧಿಗಳನ್ನು ನಿರ್ಧರಿಸೋಣ, ನಾವು ವ್ಯವಸ್ಥೆ ಮಾಡುತ್ತೇವೆ” ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.

ಅಧಿಕಾರಿಗಳ ಪ್ರಕಾರ, 25,000 ಕ್ಕೂ ಹೆಚ್ಚು ಜನರನ್ನು ಭದ್ರತಾ ಪಡೆಗಳು ರಕ್ಷಿಸಿದ್ದು, ಸುಮಾರು 50,000 ಜನರು ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ 96 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ, ಅದರಲ್ಲಿ 49.72 ಕೋಟಿ ಪುರುಷ ಮತದಾರರು ಮತ್ತು 47.1 ಕೋಟಿ ಮಹಿಳಾ ಮತದಾರರು ಇದ್ದಾರೆ. 1.82 ಕೋಟಿ ಪ್ರಥಮ ಬಾರಿ ಮತದಾರರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ