AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ಹೆಸರಿನಲ್ಲಿ 50 ಯುವತಿಯರಿಗೆ ಯಾಮಾರಿಸಿದ ಖತರ್ನಾಕ್​ ಆಸಾಮಿ! ಬೆಂಗಳೂರಿಗೂ ಇದೆ ಲಿಂಕ್​

ಇತ್ತೀಚೆಗೆ ಗುರುಗ್ರಾಮ್‌ನಲ್ಲಿ ಮಹಿಳೆಯೊಬ್ಬರು ಪ್ರಕರಣವನ್ನು ದಾಖಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಮದುವೆಯಾದ ಮೂರು ದಿನಗಳ ನಂತರ ಆರೋಪಿಯು ಮಹಿಳೆಯ ಚಿನ್ನಾಭರಣ ಸೇರಿದಂತೆ 20 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿದ್ದ.

ಮದುವೆಯ ಹೆಸರಿನಲ್ಲಿ 50 ಯುವತಿಯರಿಗೆ ಯಾಮಾರಿಸಿದ ಖತರ್ನಾಕ್​ ಆಸಾಮಿ! ಬೆಂಗಳೂರಿಗೂ ಇದೆ ಲಿಂಕ್​
50 ಯುವತಿಯರಿಗೆ ಯಾಮಾರಿಸಿದ ಖತರ್ನಾಕ್​ ಆಸಾಮಿ
ಸಾಧು ಶ್ರೀನಾಥ್​
|

Updated on:Jun 11, 2023 | 12:35 PM

Share

ಗುರುಗ್ರಾಮ: 20 ವರ್ಷಗಳ ಅವಧಿಯಲ್ಲಿ ವಿವಿಧ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳ (Matrimonial App) ಮೂಲಕ 50 ಮಹಿಳೆಯರನ್ನು ಮದುವೆಯಾಗಿ ನಂಬಿಸಿ, ಲಕ್ಷ ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗುರುಗ್ರಾಮ ಪೊಲೀಸರು ತಿಳಿಸಿದ್ದಾರೆ. ಜೆಮ್‌ಶೆಡ್‌ಪುರ ಮೂಲದ (native of Jamshedpur) ತಪೇಶ್‌ನನ್ನು ಗುರುಗ್ರಾಮ್ ಪೊಲೀಸರು (Gurugram police) ಗುರುವಾರ ಒಡಿಶಾದಲ್ಲಿ (Odisha) ಬಂಧಿಸಿದ್ದಾರೆ. ಆರೋಪಿಗೆ 1992ರಲ್ಲಿ ಕೋಲ್ಕತ್ತಾದಲ್ಲಿ ಮೊದಲ ಮದುವೆಯಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆರೋಪಿಯು 2000 ಇಸ್ವಿಯಲ್ಲಿ ಕಣ್ಮರೆಯಾದ. ಆಮೇಲೆ ತನ್ನ ಪತ್ನಿ ಮತ್ತು ಪುತ್ರಿಯರನ್ನೂ ತೊರೆದಿದ್ದಾನೆ.

ಇತ್ತೀಚೆಗೆ ಗುರುಗ್ರಾಮ್‌ನಲ್ಲಿ ಮಹಿಳೆಯೊಬ್ಬರು ಪ್ರಕರಣವನ್ನು ದಾಖಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅದರಲ್ಲಿ ಅವರು ಮ್ಯಾರೇಜ್ ಆ್ಯಪ್ ಮೂಲಕ ಆರೋಪಿಯನ್ನು ಭೇಟಿಯಾಗಿದ್ದು, ತಾವಿಬ್ಬರೂ ಶಾಸ್ತ್ರೋಕ್ತವಾಗಿ ವಿವಾಹ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಆದರೆ ಮದುವೆಯಾದ ಮೂರು ದಿನಗಳ ನಂತರ ಆರೋಪಿಯು ಮಹಿಳೆಯ ಚಿನ್ನಾಭರಣ ಸೇರಿದಂತೆ 20 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿದ್ದ.

Also Read: ಸುಸಂಸ್ಕೃತ, ದೇಶಭಕ್ತ ಶಿಶುಗಳ ಜನನಕ್ಕಾಗಿ ಗರ್ಭ ಸಂಸ್ಕಾರ ಅಭಿಯಾನ, ಗರ್ಭಿಣಿಯರಿಗೆ ಭಗವದ್ಗೀತೆ, ರಾಮಾಯಣ ಪಾಠ

ಈ ನಡುವೆ ಆರೋಪಿಯು ಬೆಂಗಳೂರಿಗೆ ತೆರಳಿ ‘ಸ್ಮಾರ್ಟ್ ಹೈರ್ ಸೊಲ್ಯೂಷನ್’ ಎಂಬ ಹೆಸರಿನ ಉದ್ಯೋಗ ನಿಯೋಜನೆ ಏಜೆನ್ಸಿ ತೆರೆದಿರುವುದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ. ಆರೋಪಿಯು ಕೆಲಸ ಕೊಡಿಸುವುದಾಗಿ ಪುರುಷ ಮತ್ತು ಮಹಿಳೆಯರಿಗೆ ವಂಚಿಸುತ್ತಿದ್ದ. ಆದರೆ ಈ ವಂಚನೆಯ ಕೃತ್ಯ ಹೆಚ್ಚು ದಿನ ನಡೆಯದೇ ಇದ್ದಾಗ ಶಾದಿ ಆ್ಯಪ್ ಮೂಲಕ ವಿಚ್ಛೇದಿತ, ವಿಧವೆ ಮತ್ತು ವಿವಾಹಿತ ಮಹಿಳೆಯರೊಂದಿಗೆ ಡೇಟಿಂಗ್ ಆರಂಭಿಸಿದ್ದ. ಅವನು ಮಧ್ಯವಯಸ್ಕ ಮಹಿಳೆಯರೊಂದಿಗೆ ಸಂಬಂಧ ಬೆಳೆಸಿ, ವಂಚಿಸಲು ಪ್ರಾರಂಭಿಸಿದ್ದ.

ಆರೋಪಿಯು ಕಳೆದ 20 ವರ್ಷಗಳಲ್ಲಿ 50 ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿದ್ದಾನೆ ಮತ್ತು ಅವರನ್ನೆಲ್ಲ ವಂಚಿಸಿದ್ದಾನೆ. ಸಧ್ಯಕ್ಕೆ ಆರೋಪಿಯನ್ನು ಒಡಿಶಾದ ಮಾದಕ ವ್ಯಸನ ಕೇಂದ್ರದಲ್ಲಿ ಬಂಧಿಸಲಾಗಿದೆ. ಅವನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Breaking Kannada News Live: ಧಾರವಾಡ ರಸ್ತೆ ಅಪಘಾತದಲ್ಲಿ ಮೂವರ ಸಾವು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:50 am, Sun, 11 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್