AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ಹೆಸರಿನಲ್ಲಿ 50 ಯುವತಿಯರಿಗೆ ಯಾಮಾರಿಸಿದ ಖತರ್ನಾಕ್​ ಆಸಾಮಿ! ಬೆಂಗಳೂರಿಗೂ ಇದೆ ಲಿಂಕ್​

ಇತ್ತೀಚೆಗೆ ಗುರುಗ್ರಾಮ್‌ನಲ್ಲಿ ಮಹಿಳೆಯೊಬ್ಬರು ಪ್ರಕರಣವನ್ನು ದಾಖಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಮದುವೆಯಾದ ಮೂರು ದಿನಗಳ ನಂತರ ಆರೋಪಿಯು ಮಹಿಳೆಯ ಚಿನ್ನಾಭರಣ ಸೇರಿದಂತೆ 20 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿದ್ದ.

ಮದುವೆಯ ಹೆಸರಿನಲ್ಲಿ 50 ಯುವತಿಯರಿಗೆ ಯಾಮಾರಿಸಿದ ಖತರ್ನಾಕ್​ ಆಸಾಮಿ! ಬೆಂಗಳೂರಿಗೂ ಇದೆ ಲಿಂಕ್​
50 ಯುವತಿಯರಿಗೆ ಯಾಮಾರಿಸಿದ ಖತರ್ನಾಕ್​ ಆಸಾಮಿ
ಸಾಧು ಶ್ರೀನಾಥ್​
|

Updated on:Jun 11, 2023 | 12:35 PM

Share

ಗುರುಗ್ರಾಮ: 20 ವರ್ಷಗಳ ಅವಧಿಯಲ್ಲಿ ವಿವಿಧ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳ (Matrimonial App) ಮೂಲಕ 50 ಮಹಿಳೆಯರನ್ನು ಮದುವೆಯಾಗಿ ನಂಬಿಸಿ, ಲಕ್ಷ ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗುರುಗ್ರಾಮ ಪೊಲೀಸರು ತಿಳಿಸಿದ್ದಾರೆ. ಜೆಮ್‌ಶೆಡ್‌ಪುರ ಮೂಲದ (native of Jamshedpur) ತಪೇಶ್‌ನನ್ನು ಗುರುಗ್ರಾಮ್ ಪೊಲೀಸರು (Gurugram police) ಗುರುವಾರ ಒಡಿಶಾದಲ್ಲಿ (Odisha) ಬಂಧಿಸಿದ್ದಾರೆ. ಆರೋಪಿಗೆ 1992ರಲ್ಲಿ ಕೋಲ್ಕತ್ತಾದಲ್ಲಿ ಮೊದಲ ಮದುವೆಯಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆರೋಪಿಯು 2000 ಇಸ್ವಿಯಲ್ಲಿ ಕಣ್ಮರೆಯಾದ. ಆಮೇಲೆ ತನ್ನ ಪತ್ನಿ ಮತ್ತು ಪುತ್ರಿಯರನ್ನೂ ತೊರೆದಿದ್ದಾನೆ.

ಇತ್ತೀಚೆಗೆ ಗುರುಗ್ರಾಮ್‌ನಲ್ಲಿ ಮಹಿಳೆಯೊಬ್ಬರು ಪ್ರಕರಣವನ್ನು ದಾಖಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅದರಲ್ಲಿ ಅವರು ಮ್ಯಾರೇಜ್ ಆ್ಯಪ್ ಮೂಲಕ ಆರೋಪಿಯನ್ನು ಭೇಟಿಯಾಗಿದ್ದು, ತಾವಿಬ್ಬರೂ ಶಾಸ್ತ್ರೋಕ್ತವಾಗಿ ವಿವಾಹ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಆದರೆ ಮದುವೆಯಾದ ಮೂರು ದಿನಗಳ ನಂತರ ಆರೋಪಿಯು ಮಹಿಳೆಯ ಚಿನ್ನಾಭರಣ ಸೇರಿದಂತೆ 20 ಲಕ್ಷ ರೂಪಾಯಿ ವಂಚಿಸಿ ಪರಾರಿಯಾಗಿದ್ದ.

Also Read: ಸುಸಂಸ್ಕೃತ, ದೇಶಭಕ್ತ ಶಿಶುಗಳ ಜನನಕ್ಕಾಗಿ ಗರ್ಭ ಸಂಸ್ಕಾರ ಅಭಿಯಾನ, ಗರ್ಭಿಣಿಯರಿಗೆ ಭಗವದ್ಗೀತೆ, ರಾಮಾಯಣ ಪಾಠ

ಈ ನಡುವೆ ಆರೋಪಿಯು ಬೆಂಗಳೂರಿಗೆ ತೆರಳಿ ‘ಸ್ಮಾರ್ಟ್ ಹೈರ್ ಸೊಲ್ಯೂಷನ್’ ಎಂಬ ಹೆಸರಿನ ಉದ್ಯೋಗ ನಿಯೋಜನೆ ಏಜೆನ್ಸಿ ತೆರೆದಿರುವುದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ. ಆರೋಪಿಯು ಕೆಲಸ ಕೊಡಿಸುವುದಾಗಿ ಪುರುಷ ಮತ್ತು ಮಹಿಳೆಯರಿಗೆ ವಂಚಿಸುತ್ತಿದ್ದ. ಆದರೆ ಈ ವಂಚನೆಯ ಕೃತ್ಯ ಹೆಚ್ಚು ದಿನ ನಡೆಯದೇ ಇದ್ದಾಗ ಶಾದಿ ಆ್ಯಪ್ ಮೂಲಕ ವಿಚ್ಛೇದಿತ, ವಿಧವೆ ಮತ್ತು ವಿವಾಹಿತ ಮಹಿಳೆಯರೊಂದಿಗೆ ಡೇಟಿಂಗ್ ಆರಂಭಿಸಿದ್ದ. ಅವನು ಮಧ್ಯವಯಸ್ಕ ಮಹಿಳೆಯರೊಂದಿಗೆ ಸಂಬಂಧ ಬೆಳೆಸಿ, ವಂಚಿಸಲು ಪ್ರಾರಂಭಿಸಿದ್ದ.

ಆರೋಪಿಯು ಕಳೆದ 20 ವರ್ಷಗಳಲ್ಲಿ 50 ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿದ್ದಾನೆ ಮತ್ತು ಅವರನ್ನೆಲ್ಲ ವಂಚಿಸಿದ್ದಾನೆ. ಸಧ್ಯಕ್ಕೆ ಆರೋಪಿಯನ್ನು ಒಡಿಶಾದ ಮಾದಕ ವ್ಯಸನ ಕೇಂದ್ರದಲ್ಲಿ ಬಂಧಿಸಲಾಗಿದೆ. ಅವನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Breaking Kannada News Live: ಧಾರವಾಡ ರಸ್ತೆ ಅಪಘಾತದಲ್ಲಿ ಮೂವರ ಸಾವು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:50 am, Sun, 11 June 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ