Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕೊವಿಡ್​ನಿಂದ 577 ಮಕ್ಕಳು ಅನಾಥರಾಗಿದ್ದಾರೆ: ಸಚಿವೆ ಸ್ಮೃತಿ ಇರಾನಿ

ಏಪ್ರಿಲ್​ 1ರಿಂದ ಇಲ್ಲಿಯವರೆಗೆ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.

ದೇಶದಲ್ಲಿ ಕೊವಿಡ್​ನಿಂದ 577 ಮಕ್ಕಳು ಅನಾಥರಾಗಿದ್ದಾರೆ: ಸಚಿವೆ ಸ್ಮೃತಿ ಇರಾನಿ
ಸಚಿವೆ ಸ್ಮೃತಿ ಇರಾನಿ
Follow us
shruti hegde
|

Updated on:May 26, 2021 | 10:58 AM

ದೆಹಲಿ: ಕೊವಿಡ್​ ಸೋಂಕಿನಿಂದ ಅದೆಷ್ಟೋ ಪೋಷಕರು ಬಲಿಯಾಗಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ದೇಶದಲ್ಲಿ ಸರಿಸುಮಾರು ಏಪ್ರಿಲ್​ 1ರಿಂದ ಇಲ್ಲಿಯವರೆಗೆ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಸಮೀಕ್ಷೆಯ ಬಳಿಕ ವರದಿ ಉಲ್ಲೇಖಿಸಿ ಮಾತನಾಡಿದರು.

ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. 2021 ಏಪ್ರಿಲ್​ 1ರಿಂದ ನಿನ್ನೆ( ಮಂಗಳವಾರ) ಮಧ್ಯಾಹ್ನ 2 ಗಂಟೆಯವರೆಗೆ ಪೋಷಕರನ್ನು ಕಳೆದುಕೊಂಡ 577 ಮಕ್ಕಳನ್ನು ವರದಿ ಮಾಡಲಾಗಿದೆ. ಅವರ ಪೋಷಕರು ಕೊವಿಡ್​ಗೆ ಬಲಿಯಾಗಿದ್ದಾರೆ ಎಂದು ಸಚಿವೆ ಸ್ಮೃತಿ ಇರಾನಿ ಟ್ವೀಟ್​ ಮೂಲಕ ತಿಳಿಸಿದರು.

ಈ ಮಕ್ಕಳನ್ನು ಎಂದಿಗೂ ಕೈಬಿಡಲಾಗಿಲ್ಲ. ಜಿಲ್ಲೆಯ ಅಧಿಕಾರಿಗಳು ಅವರ ರಕ್ಷಣೆ ಮಾಡುತ್ತಿದ್ದಾರೆ. ಮಕ್ಕಳಿಗೆ ಕೌನ್ಸಲಿಂಗ್​ ಅಗತ್ಯವಿದ್ದರೆ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ನೀಡಲು ತಂಡ ಸಿದ್ಧವಾಗಿದೆ. ಈ ಮಕ್ಕಳ ಕಲ್ಯಾಣಕ್ಕಾಗಿ ಹಣದ ಕೊರತೆ ಆಗುವುದಿಲ್ಲ ಎಂದು ಅವರು ಹೇಳಿದರು.

ಕೇಂದ್ರವು, ರಾಜ್ಯ ಮತ್ತು ಜಿಲ್ಲೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಈ ಮೂಲಕ ಮಕ್ಕಳನ್ನು ರಕ್ಷಿಸುತ್ತಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಸಭೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅನಾಥ ಮಕ್ಕಳ ಪಾಲನೆ- ಪೋಷಣೆಗೆ ಪ್ರತಿ ಜಿಲ್ಲೆಗೆ 10 ಲಕ್ಷ ರೂಪಾಯಿ ತೆಗೆದಿರಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳ ಕುರಿತಾಗಿ ಸಂಬಂಧಿಸಿದ ಕಾರ್ಯಕರ್ತರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ(ಡಬ್ಲ್ಯುಸಿಡಿ) ಸಚಿವಾಲಯವು ಸಂಪರ್ಕಿಸಿದಾಗ, ಯಾವುದೇ ವಿವರಣೆಯನ್ನು ನೀಡಿಲ್ಲ ಎಂಬುದು ನೋವಿನ ಸಂಗತಿ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

Tamil Nadu Election 2021: ಭರ್ಜರಿ ಡ್ಯಾನ್ಸ್​ ಮಾಡಿ, ಸ್ಕೂಟರ್​ ರೈಡ್ ಮಾಡಿ ಚುನಾವಣಾ ಪ್ರಚಾರ ನಡೆಸಿದ ಸಚಿವೆ ಸ್ಮೃತಿ ಇರಾನಿ

Published On - 10:53 am, Wed, 26 May 21

ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ