AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕೊವಿಡ್​ನಿಂದ 577 ಮಕ್ಕಳು ಅನಾಥರಾಗಿದ್ದಾರೆ: ಸಚಿವೆ ಸ್ಮೃತಿ ಇರಾನಿ

ಏಪ್ರಿಲ್​ 1ರಿಂದ ಇಲ್ಲಿಯವರೆಗೆ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.

ದೇಶದಲ್ಲಿ ಕೊವಿಡ್​ನಿಂದ 577 ಮಕ್ಕಳು ಅನಾಥರಾಗಿದ್ದಾರೆ: ಸಚಿವೆ ಸ್ಮೃತಿ ಇರಾನಿ
ಸಚಿವೆ ಸ್ಮೃತಿ ಇರಾನಿ
shruti hegde
|

Updated on:May 26, 2021 | 10:58 AM

Share

ದೆಹಲಿ: ಕೊವಿಡ್​ ಸೋಂಕಿನಿಂದ ಅದೆಷ್ಟೋ ಪೋಷಕರು ಬಲಿಯಾಗಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ದೇಶದಲ್ಲಿ ಸರಿಸುಮಾರು ಏಪ್ರಿಲ್​ 1ರಿಂದ ಇಲ್ಲಿಯವರೆಗೆ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಸಮೀಕ್ಷೆಯ ಬಳಿಕ ವರದಿ ಉಲ್ಲೇಖಿಸಿ ಮಾತನಾಡಿದರು.

ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. 2021 ಏಪ್ರಿಲ್​ 1ರಿಂದ ನಿನ್ನೆ( ಮಂಗಳವಾರ) ಮಧ್ಯಾಹ್ನ 2 ಗಂಟೆಯವರೆಗೆ ಪೋಷಕರನ್ನು ಕಳೆದುಕೊಂಡ 577 ಮಕ್ಕಳನ್ನು ವರದಿ ಮಾಡಲಾಗಿದೆ. ಅವರ ಪೋಷಕರು ಕೊವಿಡ್​ಗೆ ಬಲಿಯಾಗಿದ್ದಾರೆ ಎಂದು ಸಚಿವೆ ಸ್ಮೃತಿ ಇರಾನಿ ಟ್ವೀಟ್​ ಮೂಲಕ ತಿಳಿಸಿದರು.

ಈ ಮಕ್ಕಳನ್ನು ಎಂದಿಗೂ ಕೈಬಿಡಲಾಗಿಲ್ಲ. ಜಿಲ್ಲೆಯ ಅಧಿಕಾರಿಗಳು ಅವರ ರಕ್ಷಣೆ ಮಾಡುತ್ತಿದ್ದಾರೆ. ಮಕ್ಕಳಿಗೆ ಕೌನ್ಸಲಿಂಗ್​ ಅಗತ್ಯವಿದ್ದರೆ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ನೀಡಲು ತಂಡ ಸಿದ್ಧವಾಗಿದೆ. ಈ ಮಕ್ಕಳ ಕಲ್ಯಾಣಕ್ಕಾಗಿ ಹಣದ ಕೊರತೆ ಆಗುವುದಿಲ್ಲ ಎಂದು ಅವರು ಹೇಳಿದರು.

ಕೇಂದ್ರವು, ರಾಜ್ಯ ಮತ್ತು ಜಿಲ್ಲೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಈ ಮೂಲಕ ಮಕ್ಕಳನ್ನು ರಕ್ಷಿಸುತ್ತಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಸಭೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅನಾಥ ಮಕ್ಕಳ ಪಾಲನೆ- ಪೋಷಣೆಗೆ ಪ್ರತಿ ಜಿಲ್ಲೆಗೆ 10 ಲಕ್ಷ ರೂಪಾಯಿ ತೆಗೆದಿರಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳ ಕುರಿತಾಗಿ ಸಂಬಂಧಿಸಿದ ಕಾರ್ಯಕರ್ತರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ(ಡಬ್ಲ್ಯುಸಿಡಿ) ಸಚಿವಾಲಯವು ಸಂಪರ್ಕಿಸಿದಾಗ, ಯಾವುದೇ ವಿವರಣೆಯನ್ನು ನೀಡಿಲ್ಲ ಎಂಬುದು ನೋವಿನ ಸಂಗತಿ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 

Tamil Nadu Election 2021: ಭರ್ಜರಿ ಡ್ಯಾನ್ಸ್​ ಮಾಡಿ, ಸ್ಕೂಟರ್​ ರೈಡ್ ಮಾಡಿ ಚುನಾವಣಾ ಪ್ರಚಾರ ನಡೆಸಿದ ಸಚಿವೆ ಸ್ಮೃತಿ ಇರಾನಿ

Published On - 10:53 am, Wed, 26 May 21

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ