AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್​ ಪತನದಲ್ಲಿ ಮೃತಪಟ್ಟವರಲ್ಲಿ ಇನ್ನೂ 6 ಮಂದಿಯ ಮೃತದೇಹದ ಗುರುತು ಪತ್ತೆ; ಹುಟ್ಟೂರಿಗೆ ಕಳಿಸಲು ಸಿದ್ಧತೆ

ಸದ್ಯ 10 ಸೇನಾ ನಾಯಕರ ಮೃತದೇಹ ದೆಹಲಿಯ ಕಂಟೋನ್ಮೆಂಟ್​ನ ಆಸ್ಪತ್ರೆಯ ಶವಾಗಾರದಲ್ಲಿ ಇದೆ. ಅದರಲ್ಲಿ ಇದೀಗ 6 ಸೇನಾನಾಯಕರ ಗುರುತು ಪತ್ತೆಯಾಗಿದ್ದು, ಹೆಸರುಗಳು ಹೀಗಿವೆ..

ಹೆಲಿಕಾಪ್ಟರ್​ ಪತನದಲ್ಲಿ ಮೃತಪಟ್ಟವರಲ್ಲಿ ಇನ್ನೂ 6 ಮಂದಿಯ ಮೃತದೇಹದ ಗುರುತು ಪತ್ತೆ; ಹುಟ್ಟೂರಿಗೆ ಕಳಿಸಲು ಸಿದ್ಧತೆ
ಹೆಲಿಕಾಪ್ಟರ್​ ಪತನದ ದೃಶ್ಯ
TV9 Web
| Edited By: |

Updated on: Dec 11, 2021 | 8:23 AM

Share

ಚೆನ್ನೈ:ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನದಲ್ಲಿ ಮೃತರಾದವರ ಗುರುತು ಪತ್ತೆ ಹಚ್ಚುವ ಕಾರ್ಯ ಇನ್ನೂ ನಡೆಯುತ್ತಿದ್ದು, ಸದ್ಯ ಆರು ಮಂದಿಯ ಗುರುತು ಪತ್ತೆಯಾಗಿದೆ.  ಹೆಲಿಕಾಪ್ಟರ್​​ ಬೆಂಕಿ ಹೊತ್ತು ಉರಿದ ಹಿನ್ನೆಲೆಯಲ್ಲಿ ಮೃತದೇಹಗಳೆಲ್ಲ ಸಂಪೂರ್ಣವಾಗಿ ಸುಟ್ಟು ಹೋಗಿವೆ. ಹೀಗಾಗಿ ಯಾವ ಮೃತದೇಹ ಯಾರದ್ದು ಎಂದು ಗೊತ್ತಾಗುತ್ತಿಲ್ಲ. ಕುಟುಂಬಗಳಿಗೆ ಪಾರ್ಥಿವ ಶರೀರ ಹಸ್ತಾಂತರಕ್ಕೂ ಮೊದಲು ಅದರ ಗುರುತು ಪತ್ತೆ ಹಚ್ಚಬೇಕಾಗಿದೆ. ಇದೀಗ ಗುರುತು ಪತ್ತೆಯಾದ ಮೃತದೇಹಗಳನ್ನು ಅಂತ್ಯಕ್ರಿಯೆಗಾಗಿ ಕಳಿಸಲಾಗಿದೆ. 

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನದಲ್ಲಿ ಸಿಡಿಎಸ್ ಬಿಪಿನ್​ ರಾವತ್​ ಸೇರಿ 13 ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ. ಸದ್ಯ ಬಿಪಿನ್​ ರಾವತ್​​, ಅವರ ಪತ್ನಿ ಮಧುಲಿಕಾ ರಾವತ್​ ಮತ್ತು ರಾವತ್​ ರಕ್ಷಣಾ ಸಲಹೆಗಾರರಾಗಿದ್ದ ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​ ಅವರ ಅಂತ್ಯಕ್ರಿಯೆ ನಿನ್ನೆ ದೆಹಲಿಯ ಬ್ರಾರ್​ ಸ್ಕ್ವೇರ್​ ಚಿತಾಗಾರದಲ್ಲಿ, ಸಕಲ ಮಿಲಿಟರಿ ಗೌರವಗಳೊಂದಿಗೆ ನೆರವೇರಿದೆ.

ಸದ್ಯ 10 ಸೇನಾ ನಾಯಕರ ಮೃತದೇಹ ದೆಹಲಿಯ ಕಂಟೋನ್ಮೆಂಟ್​ನ ಆಸ್ಪತ್ರೆಯ ಶವಾಗಾರದಲ್ಲಿ ಇದೆ. ಅದರಲ್ಲಿ ಇದೀಗ ಪತ್ತೆಯಾಗಿದ್ದು, ವಿಂಗ್ ಕಮಾಂಡರ್​ ಚೌಹಾಣ್​, ಜ್ಯೂನಿಯರ್​ ವಾರಂಟ್ ಆಫೀಸರ್​ ಪ್ರದೀಪ್​, ಸ್ಕ್ವಾಡ್ರನ್​ ಲೀಡರ್​ ಕುಲದೀಪ್​, ಜ್ಯೂನಿಯರ್​ ವಾರಂಟ್​ ಆಫೀಸರ್​ ದಾಸ್​, ಲ್ಯಾನ್ಸ್ ನಾಯಕ್​ ಬಿ.ಸಾಯಿ ತೇಜಾ ಮತ್ತು ಲ್ಯಾನ್ಸ್​ ನಾಯಕ್​ ವಿವೇಕ್​ ಕುಮಾರ್​ ಅವರದ್ದು. ಅದರಲ್ಲಿ ಚೌಹಾಣ್​​ ಮೃತದೇಹ ಬೆಳಗ್ಗೆ 9.45ಕ್ಕೆ ಆಗ್ರಾ ತಲುಪಲಿದೆ. ಪ್ರದೀಪ್​​ ಅವರ ಪಾರ್ಥಿವ ಶರೀರ ಬೆಳಗ್ಗೆ 11 ಗಂಟೆ ಹೊತ್ತಿಗೆ ಸುಲುರ್​​, ಕುಲದೀಪ್​ ಮೃತದೇಹ ಬೆಳಗ್ಗೆ 11.45ಕ್ಕೆ ಪಿಲಾನಿ, ದಾಸ್​ ಮೃತಶರೀರ ಮಧ್ಯಾಹ್ನ 1ಗಂಟೆಗೆ ಭುವನೇಶ್ವರಕ್ಕೆ, ಬಿ.ಸಾಯಿ ತೇಜ ಮೃತದೇಹ ಮಧ್ಯಾಹ್ನ 12.30ಕ್ಕೆ ಬೆಂಗಳೂರು ಮತ್ತು ವಿವೇಕ್​ ಕುಮಾರ್​ ಅವರ ಪಾರ್ಥಿವ ಶರೀರ ಬೆಳಗ್ಗೆ 11.30ಕ್ಕೆ ಗಗ್ಗಲ್​​ಗೆ ತಲುಪಲಿದೆ. ಇವರೆಲ್ಲರ ಮೃತದೇಹಗಳನ್ನೂ ಆಯಾ ಸ್ಥಳಗಳಿಗೆ ವಾಯುಮಾರ್ಗದ ಮೂಲಕ ಸ್ಥಳಾಂತರ ಮಾಡಲಾಗುವುದು ಎಂದು ಸೇನಾ ಮೂಲಗಳು ಹೇಳಿವೆ. ಹಾಗೇ, ಅವರ ಹುಟ್ಟೂರಲ್ಲಿ ಸಕಲ ಸೇನಾ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.

ಇದನ್ನೂ ಓದಿ: Bipin Rawat Funeral ಸಿಡಿಎಸ್‌ ಬಿಪಿನ್ ರಾವತ್​​ಗೆ ಅಂತಿಮ ನಮನ, ಬ್ರಾರ್ ಸ್ಕ್ವೇರ್​​ನಲ್ಲಿ ಸಕಲ ಮಿಲಿಟರಿ ಗೌರವಗಳೊಂದಿಗೆ ನಡೆಯಲಿದೆ ಅಂತ್ಯಕ್ರಿಯೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!