AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಗೋರೆಗಾಂವ್​ನ ಕಟ್ಟಡದಲ್ಲಿ ಅಗ್ನಿ ಅವಘಡ, 6 ಮಂದಿ ಸಾವು, 40 ಜನರಿಗೆ ಗಾಯ

ಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ.

ಮುಂಬೈ: ಗೋರೆಗಾಂವ್​ನ ಕಟ್ಟಡದಲ್ಲಿ ಅಗ್ನಿ ಅವಘಡ, 6 ಮಂದಿ ಸಾವು, 40 ಜನರಿಗೆ ಗಾಯ
ಮುಂಬೈ ಕಟ್ಟಡ ಬೆಂಕಿImage Credit source: India Today
ನಯನಾ ರಾಜೀವ್
|

Updated on:Oct 06, 2023 | 8:20 AM

Share

ಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ.

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದು, ಕಟ್ಟಡದಲ್ಲಿ ಅಗ್ನಿಶಾಮಕ ಕಾರ್ಯಾಚರಣೆ ನಡೆಯುವುದನ್ನು ಕಾಣಬಹುದು. ವಿವರಗಳ ಪ್ರಕಾರ, ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ ಕೂಡಲೇ

ಅಗ್ನಿಶಾಮಕ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು ನಡೆಯುತ್ತಿವೆ.

ಮೃತಪಟ್ಟ ಆರು ಮಂದಿಯಲ್ಲಿ ಓರ್ವ ಪುರುಷ, ಮೂವರು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದ್ದಾರೆ. ನೆಲಮಹಡಿಯಲ್ಲಿನ ಅಂಗಡಿಗಳು, ಸ್ಕ್ರ್ಯಾಪ್ ಸಾಮಗ್ರಿಗಳು ಮತ್ತು ಸುತ್ತಮುತ್ತಲಿನ ಹಲವಾರು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಮತ್ತಷ್ಟು ಓದಿ: ಇರಾಕ್​ನಲ್ಲಿ ಭಾರಿ ಅಗ್ನಿ ದುರಂತ, 100 ಮಂದಿ ಸಾವು, 150ಕ್ಕೂ ಅಧಿಕ ಜನರಿಗೆ ಗಾಯ

ಇಬ್ಬರ ಸ್ಥಿತಿ ಗಂಭೀರವಾಗಿದೆ – 25 ಮಂದಿಯನ್ನು ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ವೈದ್ಯಕೀಯ ಕಾಲೇಜು (ಎಚ್‌ಬಿಟಿ) ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮುಂಬೈ ಅಗ್ನಿಶಾಮಕ ದಳ (MFB) ಎಂಟು ಅಗ್ನಿಶಾಮಕ ಇಂಜಿನ್‌ಗಳು, ಐದು ಜಂಬೋ ಟ್ಯಾಂಕರ್‌ಗಳು, ನೀರಿನ ಟ್ಯಾಂಕ್, ಟರ್ನ್‌ಟೇಬಲ್ ಲ್ಯಾಡರ್ (TTL) ಸ್ಥಳಕ್ಕೆ ಆಗಮಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:12 am, Fri, 6 October 23

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ