AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya: ಮಧ್ಯರಾತ್ರಿ ನದಿಗೆ ಬಿದ್ದ ಬಸ್​; ಚಾಲಕ ಸೇರಿ 6 ಮಂದಿ ದುರ್ಮರಣ, 16 ಪ್ರಯಾಣಿಕರ ರಕ್ಷಣೆ

ಬಸ್​ ನದಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಗೆ ಧಾವಿಸಿ, ಪ್ರಯಾಣಿಕರಿಗೆ ಸಹಾಯ ಮಾಡಿದೆ. ಆದರೂ ಆರು ಮಂದಿ ಮೃತಪಟ್ಟಿದ್ದಾರೆ.

Meghalaya: ಮಧ್ಯರಾತ್ರಿ ನದಿಗೆ ಬಿದ್ದ ಬಸ್​; ಚಾಲಕ ಸೇರಿ 6 ಮಂದಿ ದುರ್ಮರಣ, 16 ಪ್ರಯಾಣಿಕರ ರಕ್ಷಣೆ
ಮೇಘಾಲಯದಲ್ಲಿ ನದಿಗೆ ಬಿದ್ದ ಬಸ್​
TV9 Web
| Edited By: |

Updated on: Sep 30, 2021 | 9:56 AM

Share

ಮೇಘಾಲಯದ ಶಿಲ್ಲಾಂಗ್​​ನಲ್ಲಿ ಬಸ್​​ವೊಂದು ನದಿಗೆ ಬಿದ್ದು ಆರು ಮಂದಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ಬಸ್ ನಿನ್ನೆ ರಾತ್ರಿ​ ತುರಾದಿಂದ ಶಿಲ್ಲಾಂಗ್​​ಗೆ ಹೋಗುತ್ತಿತ್ತು..ಇದರಲ್ಲಿ ಸುಮಾರು 21 ಮಂದಿ ಪ್ರಯಾಣಿಕರು ಇದ್ದರು. ಮಧ್ಯರಾತ್ತಿ 12 ಗಂಟೆಹೊತ್ತಿಗೆ ನೊಂಗ್​ಚ್ರಾಮ್​ ಬಳಿ ರಿಂಗ್ಡಿ ನದಿಗೆ ಬಿದ್ದಿದೆ. ಬಸ್​ ನದಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ರಕ್ಷಣಾ ತಂಡ ಅಲ್ಲಿಗೆ ಧಾವಿಸಿ, ಪ್ರಯಾಣಿಕರಿಗೆ ಸಹಾಯ ಮಾಡಿದೆ. ಆದರೆ ಸುಮಾರು 6 ಮಂದಿ ಜೀವ ಕಳೆದುಕೊಂಡಿದ್ದಾರೆ. ಎಂದು ವರದಿಯಾಗಿದೆ.  

ಇದುವರೆಗೆ 16 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಅವರನ್ನೆಲ್ಲ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಈ ಬಸ್​​ನಲ್ಲಿ ಚಾಲಕ ಸೇರಿ ಒಟ್ಟು 22 ಮಂದಿ ಇದ್ದರು. ಬಸ್ ಚಾಲಕ ಮೃತಪಟ್ಟಿದ್ದಾಗಿ ಸ್ಥಳೀಯ ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಆರು ಮೃತದೇಹಗಳಲ್ಲಿ ನಾಲ್ಕನ್ನು ನದಿಯಿಂದ ಹೊರತೆಗೆಯಲಾಗಿದ್ದು, ಇನ್ನೆರಡು ಶವಗಳು ಬಸ್​​ನಲ್ಲಿಯೇ ಸಿಲುಕಿಕೊಂಡಿವೆ. ಅದನ್ನು ಹೊರತೆಗೆಯುವುದು ಸವಾಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಜಮ್ಮು ಪ್ರವಾಸ ಇಂದಿನಿಂದ; ವಿಶೇಷ ಸ್ಥಾನಮಾನ ರದ್ದು ಬಳಿಕ ಮೊದಲ ಬಾರಿಗೆ ಭೇಟಿ

ಹದಿನಾರು ಯಂತ್ರಗಳ ಬಳಸಿ ಸ್ವಚ್ಛತಾ ಅಭಿಯಾನ ಶುರು, ಮತ್ತಷ್ಟು ಕಣ್ಮನ ತಣಿಸಲಿದೆ ಆಕರ್ಷಕ ದಾಲ್ ಸರೋವರ! ನೀವೂ ನೋಡಿ

Follow Us
Web contact
Web contact

TV9 Kannada

Read More