AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯುವ ನೀರಿನೊಂದಿಗೆ ಕಲುಷಿತ ನೀರು ಮಿಶ್ರಣ; 6 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

ಕುಡಿಯುವ ನೀರಿನ ಪೈಪ್​ ಒಡೆದು ಹೋಗಿ, ಅದು ಒಳಚರಂಡಿ ನೀರಿನೊಂದಿಗೆ ಬೆರೆತು ಹೋಗಿದ್ದು, ಸ್ಥಳ ಪರೀಕ್ಷೆ ಸಮಯದಲ್ಲಿ ಗೊತ್ತಾಗಿದೆ. ಇದೇ ನೀರು ಕುಡಿದ ಜನರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಕುಡಿಯುವ ನೀರಿನೊಂದಿಗೆ ಕಲುಷಿತ ನೀರು ಮಿಶ್ರಣ; 6 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 03, 2021 | 8:57 AM

Share

ಕಲುಷಿತ ನೀರು ಸೇವನೆ ಮಾಡಿ 6 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಆಸ್ಪತ್ರೆ ಸೇರಿದ ಘಟನೆ ಗುಜರಾತ್​ನ ಸೂರತ್​​ನಲ್ಲಿರುವ ಕಾಠೋರ್​ ಗ್ರಾಮದಲ್ಲಿ ನಡೆದಿದೆ. ಮೇ 30 ಮತ್ತು 31 ಎರಡು ದಿನಗಳಲ್ಲಿ ಈ ಘಟನೆ ನಡೆದಿದೆ. ಇನ್ನೇನು ಒಂದೆರಡು ದಿನಗಳಲ್ಲಿ ಸೂರತ್​ ಮಹಾನಗರ ಪಾಲಿಕೆ ಸಿಬ್ಬಂದಿ ಇಲ್ಲಿಗೆ (ಕಾಠೋರ್ ಗ್ರಾಮದ ವಿವೇಕನಗರ ಕಾಲನಿ) ಆಗಮಿಸಿ, ಕ್ಲೋರಿನ್​​ ಔಷಧ ವಿತರಿಸಲಿದ್ದರು.

ಕಲುಷಿತ ನೀರು ಕುಡಿದ ಬಳಿಕ ಹಳ್ಳಿಗರು ವಾಂತಿ ಮತ್ತು ಭೇದಿಯಿಂದ ನರಳುತ್ತಿದ್ದಾರೆ. ಅದರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಉಳಿದ 50 ಮಂದಿಗೆ ಸಮೀಪದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬೆನ್ನಲ್ಲೇ ಸ್ಥಳೀಯ ನಾಯಕ ದರ್ಶನ್​ ನಾಯಕ್​​ ಸೂರತ್​ ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳ್ಳಿಗಳ ಜನರಿಗೆ ಅಗತ್ಯವಾಗಿ ಬೇಕಾಗಿರುವ ಮೂಲಸೌಕರ್ಯದ ವ್ಯವಸ್ಥೆಯನ್ನೂ ಮಾಡುವುದಿಲ್ಲ ಎಂದು ಆರೋಪಿಸಿದ್ದಾರೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಕುಡಿಯುವ ನೀರಿನ ಪೈಪ್​ ಒಡೆದು ಹೋಗಿ, ಅದು ಒಳಚರಂಡಿ ನೀರಿನೊಂದಿಗೆ ಬೆರೆತು ಹೋಗಿದ್ದು, ಸ್ಥಳ ಪರೀಕ್ಷೆ ಸಮಯದಲ್ಲಿ ಗೊತ್ತಾಗಿದೆ. ಇದೇ ನೀರು ಕುಡಿದ ಜನರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇನ್ನು ಸೂರತ್​ ಮೇಯರ್​ ಹೇಮಾಲಿ ವೋಘವಾಲಾ ಘಟನೆಯ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದು, ಮೃತರ ಕುಟುಂಬಗಳಿಗೆ 1 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಗ್ರಾಮದ ನೀರಿನ ವ್ಯವಸ್ಥೆ ಸರಿಯಾಗುವವರೆಗೂ ಟ್ಯಾಂಕರ್ ಮೂಲಕ ಶುದ್ಧ ನೀರು ಪೂರೈಕೆ ಮಾಡಲಾಗುವುದು. ಹಾಗೇ, ಹಳ್ಳಿಗಳಲ್ಲಿ ನೀರಿನ ಪರೀಕ್ಷೆ ಮಾಡಿಸಲು ವಾಹನವನ್ನು ಕಳಿಸಲಾಗುವುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: World Bicycle Day 2021: ಇಂದು ವಿಶ್ವ ಸೈಕಲ್ ದಿನ, ತೂಕ ಇಳಿಕೆ ಸದೃಢ ಆರೋಗ್ಯಕ್ಕೆ ಸಾಥ್​ ಕೊಟ್ಟ ಸಂಗಾತಿಯನ್ನು ನೆನೆಯುವ ದಿನ

Published On - 8:56 am, Thu, 3 June 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ