AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿಯುವ ನೀರಿನೊಂದಿಗೆ ಕಲುಷಿತ ನೀರು ಮಿಶ್ರಣ; 6 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

ಕುಡಿಯುವ ನೀರಿನ ಪೈಪ್​ ಒಡೆದು ಹೋಗಿ, ಅದು ಒಳಚರಂಡಿ ನೀರಿನೊಂದಿಗೆ ಬೆರೆತು ಹೋಗಿದ್ದು, ಸ್ಥಳ ಪರೀಕ್ಷೆ ಸಮಯದಲ್ಲಿ ಗೊತ್ತಾಗಿದೆ. ಇದೇ ನೀರು ಕುಡಿದ ಜನರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಕುಡಿಯುವ ನೀರಿನೊಂದಿಗೆ ಕಲುಷಿತ ನೀರು ಮಿಶ್ರಣ; 6 ಮಂದಿ ಸಾವು, 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jun 03, 2021 | 8:57 AM

ಕಲುಷಿತ ನೀರು ಸೇವನೆ ಮಾಡಿ 6 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಆಸ್ಪತ್ರೆ ಸೇರಿದ ಘಟನೆ ಗುಜರಾತ್​ನ ಸೂರತ್​​ನಲ್ಲಿರುವ ಕಾಠೋರ್​ ಗ್ರಾಮದಲ್ಲಿ ನಡೆದಿದೆ. ಮೇ 30 ಮತ್ತು 31 ಎರಡು ದಿನಗಳಲ್ಲಿ ಈ ಘಟನೆ ನಡೆದಿದೆ. ಇನ್ನೇನು ಒಂದೆರಡು ದಿನಗಳಲ್ಲಿ ಸೂರತ್​ ಮಹಾನಗರ ಪಾಲಿಕೆ ಸಿಬ್ಬಂದಿ ಇಲ್ಲಿಗೆ (ಕಾಠೋರ್ ಗ್ರಾಮದ ವಿವೇಕನಗರ ಕಾಲನಿ) ಆಗಮಿಸಿ, ಕ್ಲೋರಿನ್​​ ಔಷಧ ವಿತರಿಸಲಿದ್ದರು.

ಕಲುಷಿತ ನೀರು ಕುಡಿದ ಬಳಿಕ ಹಳ್ಳಿಗರು ವಾಂತಿ ಮತ್ತು ಭೇದಿಯಿಂದ ನರಳುತ್ತಿದ್ದಾರೆ. ಅದರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಉಳಿದ 50 ಮಂದಿಗೆ ಸಮೀಪದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬೆನ್ನಲ್ಲೇ ಸ್ಥಳೀಯ ನಾಯಕ ದರ್ಶನ್​ ನಾಯಕ್​​ ಸೂರತ್​ ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳ್ಳಿಗಳ ಜನರಿಗೆ ಅಗತ್ಯವಾಗಿ ಬೇಕಾಗಿರುವ ಮೂಲಸೌಕರ್ಯದ ವ್ಯವಸ್ಥೆಯನ್ನೂ ಮಾಡುವುದಿಲ್ಲ ಎಂದು ಆರೋಪಿಸಿದ್ದಾರೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಕುಡಿಯುವ ನೀರಿನ ಪೈಪ್​ ಒಡೆದು ಹೋಗಿ, ಅದು ಒಳಚರಂಡಿ ನೀರಿನೊಂದಿಗೆ ಬೆರೆತು ಹೋಗಿದ್ದು, ಸ್ಥಳ ಪರೀಕ್ಷೆ ಸಮಯದಲ್ಲಿ ಗೊತ್ತಾಗಿದೆ. ಇದೇ ನೀರು ಕುಡಿದ ಜನರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇನ್ನು ಸೂರತ್​ ಮೇಯರ್​ ಹೇಮಾಲಿ ವೋಘವಾಲಾ ಘಟನೆಯ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದು, ಮೃತರ ಕುಟುಂಬಗಳಿಗೆ 1 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಗ್ರಾಮದ ನೀರಿನ ವ್ಯವಸ್ಥೆ ಸರಿಯಾಗುವವರೆಗೂ ಟ್ಯಾಂಕರ್ ಮೂಲಕ ಶುದ್ಧ ನೀರು ಪೂರೈಕೆ ಮಾಡಲಾಗುವುದು. ಹಾಗೇ, ಹಳ್ಳಿಗಳಲ್ಲಿ ನೀರಿನ ಪರೀಕ್ಷೆ ಮಾಡಿಸಲು ವಾಹನವನ್ನು ಕಳಿಸಲಾಗುವುದು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: World Bicycle Day 2021: ಇಂದು ವಿಶ್ವ ಸೈಕಲ್ ದಿನ, ತೂಕ ಇಳಿಕೆ ಸದೃಢ ಆರೋಗ್ಯಕ್ಕೆ ಸಾಥ್​ ಕೊಟ್ಟ ಸಂಗಾತಿಯನ್ನು ನೆನೆಯುವ ದಿನ

Published On - 8:56 am, Thu, 3 June 21

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ