AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ 2 ಬೋಟ್​​ಗಳ ಡಿಕ್ಕಿ: 6 ಜನರನ್ನು ಬಂಧಿಸಿದ ಪೊಲೀಸರು, ಹಲವರ ವಿಚಾರಣೆ

ಎರಡೂ ಬೋಟ್​ಗಳ ಮಾಲೀಕರಿಗೂ ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗಬೇಕಾಗುತ್ತದೆ. ನಾವು ಕ್ರಿಮಿನಲ್ ಕೇಸ್​​ ದಾಖಲಿಸಿಯೇ ತನಿಖೆ ಶುರು ಮಾಡಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಸ್ಸಾಂ 2 ಬೋಟ್​​ಗಳ ಡಿಕ್ಕಿ: 6 ಜನರನ್ನು ಬಂಧಿಸಿದ ಪೊಲೀಸರು, ಹಲವರ ವಿಚಾರಣೆ
ಅಸ್ಸಾಂ ಬೋಟ್​ ದುರಂತ
TV9 Web
| Updated By: Lakshmi Hegde|

Updated on: Sep 12, 2021 | 4:13 PM

Share

ಅಸ್ಸಾಂನ ಬ್ರಹ್ಮಪುತ್ರಾ ನದಿಯಲ್ಲಿ((Brahmaputra River) ಸೆಪ್ಟೆಂಬರ್​ 8ರಂದು ನಡೆದ ಎರಡು ಬೋಟ್​​ಗಳ ಡಿಕ್ಕಿಗೆ ಸಂಬಂಧಪಟ್ಟಂತೆ ಪೊಲೀಸರು ಇದೀಗ 6 ಮಂದಿಯನ್ನು ಬಂಧಿಸಿದ್ದಾರೆ. ಹಾಗೇ, ವಿಚಾರಣೆಗಾಗಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅಸ್ಸಾಂನ ಜೋರ್ಹತ್​ ಜಿಲ್ಲೆಯ ನೇಮತಿಘಾಟ್​ ಎಂಬಲ್ಲಿ ಎರಡು ಬೋಟ್​ಗಳು ಡಿಕ್ಕಿಯಾಗಿದ್ದವು. ಎರಡೂ ಬೋಟ್​​ಗಳಿಂದ ಸುಮಾರು 90 ಮಂದಿ ಪ್ರಯಾಣಿಕರಿದ್ದರು. ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದರು.  ಹಾಗೇ, ಘಟನೆ ಸಂಬಂಧ ಕ್ರಿಮಿನಲ್​ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು. 

ಇದೀಗ  ತನಿಖೆಯ ಬೆಳವಣಿಗೆಗಳ ಬಗ್ಗೆ ಇಂಡಿಯಾ ಟುಡೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಜೋರ್ಹತ್​​ ಜಿಲ್ಲಾ ಎಸ್​ಪಿ ಅಂಕುರ್​ ಜೈನ್​, ಜೋರ್ಹತ್​ ಪೊಲೀಸರು ಈಗಾಗಲೇ ಆರು ಮಂದಿಯನ್ನು ಬಂಧಿಸಿದ್ದಾರೆ. ಮಜುಲಿ ಜಿಲ್ಲೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.  ಹಾಗೇ, ತಾವು ಕ್ರಿಮಿನಲ್​ ಕೇಸ್​ ದಾಖಲಿಸಿಕೊಂಡೇ ತನಿಖೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಇನ್ನು ಬಂಧಿತ ಆರೂ ಮಂದಿ ಒಳನಾಡು ಜಲಸಾರಿಗೆ ವಿಭಾಗದ ಸಿಬ್ಬಂದಿಯೇ ಆಗಿದ್ದಾರೆ. ಅಂದು ನಡೆದ ಬೋಟ್​ ಆ್ಯಕ್ಸಿಡೆಂಟ್​​ನಲ್ಲಿ ಮೃತಪಟ್ಟವರ ಸಂಖ್ಯೆ ಕಡಿಮೆಯಾದರೂ ಇದು ದೊಡ್ಡ ದುರಂತವೇ ಹೌದು ಎಂದು ಅಂಕುರ್ ಜೈನ್​ ಹೇಳಿದ್ದಾರೆ.

ಇನ್ನು ಘಟನೆ ಸಂಬಂಧ ಹಲವರ ಹೇಳಿಕೆಗಳು ನಮಗೆ ಅಗತ್ಯವಿದೆ. ಎರಡೂ ಬೋಟ್​ಗಳ ಮಾಲೀಕರಿಗೂ ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗಬೇಕಾಗುತ್ತದೆ.  ಜೋಗನ್ ದಾಸ್, ಧನ್​ಬರ್​ ದಾಸ್, ಬಿಜು ಕುಮಾರ್ ದಾಸ್, ಜಯಂತ ದತ್ತ, ಬಿನೋದ್ ಬರುವಾ ಮತ್ತು ಬಾಬುಲ್ ನಿಯೋಗ್ ಬಂಧಿತರು ಎಂದು ಅಂಕುರ್ ಜೈನ್ ಮಾಹಿತಿ ನೀಡಿದ್ದಾರೆ.

ಅಂದು ಜೋರ್ಹತ್​ನ ನೇಮತಿ ಘಾಟ್​ನಲ್ಲಿ ಸಂಜೆ 4.30ರ ವೇಳೆಗೆ ಈ ದುರಂತ ಸಂಭವಿಸಿತ್ತು. ಎದುರು ಬದುರಾಗಿ ಚಲಿಸುತ್ತಿದ್ದ ಎರಡು ಬೋಟ್​ಗಳು ಡಿಕ್ಕಿ ಹೊಡೆದಿದ್ದವು.  ಗುವಾಹಟಿಯಿಂದ 350 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದೆ. ಒಂದು ಬೋಟ್ ಬ್ರಹ್ಮಪುತ್ರನದಿಯ ದ್ವೀಪವಾದ ಮಜುಲಿ ಕಡೆಯಿಂದ ನೇಮತಿ ಘಾಟ್​ಗೆ ಬರುತ್ತಿತ್ತು. ಇನ್ನೊಂದು ಬೋಟ್ ನೇಮತಿ ಘಾಟ್​ನಿಂದ ವಾಪಾಸ್ ತೆರಳುತ್ತಿತ್ತು. ಹೀಗಾಗಿ ಘಟನೆ ಬಗ್ಗೆ ಜೋರ್ಹತ್ ಮತ್ತು ಮಜುಲಿ ಎರಡೂ ಜಿಲ್ಲೆಗಳ ಪೊಲೀಸರೂ ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಬೋಟ್​​ಗಳ ಡಿಕ್ಕಿ; ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ

ಚಿಕ್ಕಬಳ್ಳಾಪುರ: ಬೀದಿ ನಾಯಿಗೆ ಅದ್ದೂರಿ ಹುಟ್ಟುಹಬ್ಬ ಆಚರಣೆ; ಕೇಕ್ ಕತ್ತರಿಸಿ ಸನ್ಮಾನ ಮಾಡಿದ ಸ್ಥಳೀಯರು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ