Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿದುರಂತ; 6 ಮಂದಿ ಸಾವು, 12ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ರೆಡ್ಡಿ ಘೋಷಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿದುರಂತ; 6 ಮಂದಿ ಸಾವು, 12ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
ಆಂಧ್ರಪ್ರದೇಶದಲ್ಲಿ ಬೆಂಕಿ ದುರಂತ
Follow us
TV9 Web
| Updated By: Lakshmi Hegde

Updated on:Apr 14, 2022 | 8:51 AM

ಆಂಧ್ರಪ್ರದೇಶದ ಎಲುರು ಜಿಲ್ಲೆಯಲ್ಲಿ ನಿನ್ನೆ ಮಧ್ಯರಾತ್ರಿ  ಭೀಕರ ಅಗ್ನಿದುರಂತ ನಡೆದಿದ್ದು ಅದರಲ್ಲಿ ಆರು ಮಂದಿ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಮಸುನೂರು ಮಂಡಲ್​​ನ ಅಕ್ಕಿರೆಡ್ಡಿ ಗುಡೆಮ್​​ನಲ್ಲಿರುವ ಪೋರಸ್​ ರಾಸಾಯಾನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾಗಿ ಬೆಂಕಿ ದುರಂತ ಉಂಟಾಗಿದ್ದಾಗಿ ವರದಿಯಾಗಿದೆ. ಇದರಲ್ಲಿ ಐದು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದು, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.

ಇದೊಂದು ಔಷಧಿ ಉತ್ಪಾದನಾ ಘಟಕವಾಗಿದೆ. ಗ್ಯಾಸ್ ಲೀಕ್​ ಆಗುತ್ತಿದ್ದಂತೆ ರಿಯಾಕ್ಟರ್ ಸ್ಫೋಟಗೊಂಡಿದ್ದೇ ದೊಡ್ಡ ಪ್ರಮಾಣದ ಅಗ್ನಿ ದುರಂತಕ್ಕೆ ಕಾರಣವಾಗಿದೆ. ಮೃತಪಟ್ಟ 6 ಮಂದಿಯಲ್ಲಿ ನಾಲ್ಕು ಮಂದಿ ಬಿಹಾರದವರು. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೀಗೆ ಗಾಯಗೊಂಡವರಲ್ಲಿ ಬಹುತೇಕರ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಮೃತರ ಸಂಖ್ಯೆ ಏರಿಕೆಯಾಗಬಹುದು ಎಂದು ಹೇಳಲಾಗಿದೆ.

ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ರೆಡ್ಡಿ ಘೋಷಿಸಿದ್ದಾರೆ. ಆದರೆ ಘಟನೆ ನಡೆದ ಬೆನ್ನಲ್ಲೇ ಸ್ಥಳೀಯರ ಆಕ್ರೋಶ ಹೆಚ್ಚಾಗಿದೆ. ಇಲ್ಲಿ ಫ್ಯಾಕ್ಟರಿ ಇರೋದು ಬೇಡವೇ ಬೇಡ. 10 ಜನರ ಉದ್ಯೋಗಕ್ಕಾಗಿ ನಮ್ಮ ಇಡೀ ಊರು ಸರ್ವನಾಶ ಆಗುತ್ತದೆ. ಇಲ್ಲಿನ ನೀರು ಈಗಾಗಲೇ ಕಲುಶಿತಗೊಂಡಿದೆ. ಪ್ರಾಣಿಗಳು, ಜನರು ಸಾಯುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: KGF Chapter 2 Twitter Review: ಮಧ್ಯರಾತ್ರಿ ನೋಡಿದವರಿಗೆ ‘ಕೆಜಿಎಫ್​ 2’ ಇಷ್ಟ ಆಯ್ತಾ? ಇಲ್ಲಿದೆ ಟ್ವಿಟರ್​ ವಿಮರ್ಶೆ

Published On - 8:41 am, Thu, 14 April 22

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ