AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿದುರಂತ; 6 ಮಂದಿ ಸಾವು, 12ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ರೆಡ್ಡಿ ಘೋಷಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಭೀಕರ ಅಗ್ನಿದುರಂತ; 6 ಮಂದಿ ಸಾವು, 12ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
ಆಂಧ್ರಪ್ರದೇಶದಲ್ಲಿ ಬೆಂಕಿ ದುರಂತ
TV9 Web
| Edited By: |

Updated on:Apr 14, 2022 | 8:51 AM

Share

ಆಂಧ್ರಪ್ರದೇಶದ ಎಲುರು ಜಿಲ್ಲೆಯಲ್ಲಿ ನಿನ್ನೆ ಮಧ್ಯರಾತ್ರಿ  ಭೀಕರ ಅಗ್ನಿದುರಂತ ನಡೆದಿದ್ದು ಅದರಲ್ಲಿ ಆರು ಮಂದಿ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಮಸುನೂರು ಮಂಡಲ್​​ನ ಅಕ್ಕಿರೆಡ್ಡಿ ಗುಡೆಮ್​​ನಲ್ಲಿರುವ ಪೋರಸ್​ ರಾಸಾಯಾನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾಗಿ ಬೆಂಕಿ ದುರಂತ ಉಂಟಾಗಿದ್ದಾಗಿ ವರದಿಯಾಗಿದೆ. ಇದರಲ್ಲಿ ಐದು ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದು, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.

ಇದೊಂದು ಔಷಧಿ ಉತ್ಪಾದನಾ ಘಟಕವಾಗಿದೆ. ಗ್ಯಾಸ್ ಲೀಕ್​ ಆಗುತ್ತಿದ್ದಂತೆ ರಿಯಾಕ್ಟರ್ ಸ್ಫೋಟಗೊಂಡಿದ್ದೇ ದೊಡ್ಡ ಪ್ರಮಾಣದ ಅಗ್ನಿ ದುರಂತಕ್ಕೆ ಕಾರಣವಾಗಿದೆ. ಮೃತಪಟ್ಟ 6 ಮಂದಿಯಲ್ಲಿ ನಾಲ್ಕು ಮಂದಿ ಬಿಹಾರದವರು. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೀಗೆ ಗಾಯಗೊಂಡವರಲ್ಲಿ ಬಹುತೇಕರ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಮೃತರ ಸಂಖ್ಯೆ ಏರಿಕೆಯಾಗಬಹುದು ಎಂದು ಹೇಳಲಾಗಿದೆ.

ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ರೆಡ್ಡಿ ಘೋಷಿಸಿದ್ದಾರೆ. ಆದರೆ ಘಟನೆ ನಡೆದ ಬೆನ್ನಲ್ಲೇ ಸ್ಥಳೀಯರ ಆಕ್ರೋಶ ಹೆಚ್ಚಾಗಿದೆ. ಇಲ್ಲಿ ಫ್ಯಾಕ್ಟರಿ ಇರೋದು ಬೇಡವೇ ಬೇಡ. 10 ಜನರ ಉದ್ಯೋಗಕ್ಕಾಗಿ ನಮ್ಮ ಇಡೀ ಊರು ಸರ್ವನಾಶ ಆಗುತ್ತದೆ. ಇಲ್ಲಿನ ನೀರು ಈಗಾಗಲೇ ಕಲುಶಿತಗೊಂಡಿದೆ. ಪ್ರಾಣಿಗಳು, ಜನರು ಸಾಯುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: KGF Chapter 2 Twitter Review: ಮಧ್ಯರಾತ್ರಿ ನೋಡಿದವರಿಗೆ ‘ಕೆಜಿಎಫ್​ 2’ ಇಷ್ಟ ಆಯ್ತಾ? ಇಲ್ಲಿದೆ ಟ್ವಿಟರ್​ ವಿಮರ್ಶೆ

Published On - 8:41 am, Thu, 14 April 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್