AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ. ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ […]

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jul 01, 2020 | 3:21 PM

Share

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ.

ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಹಾಗೂ ಸ್ಫೋಟದಿಂದ 17 ಜನರಿಗೆ ಗಾಯಗಳಾಗಿವೆ. ಇದೇ ಪ್ಲಾಂಟ್‌ನಲ್ಲಿ ಮೇ 7 ರಂದು ಸಹ ಸ್ಫೋಟ ಸಂಭವಿಸಿತ್ತು. ಇದು ಎರಡನೇ ಬಾರಿಗೆ ಸ್ಫೋಟಗೊಳ್ಳುತ್ತಿರುವುದು.

ಇಂದು ಬೆಳಿಗ್ಗೆ ಕಾರ್ಮಿಕರು ಕೆಲಸವನ್ನು ಪುನರಾರಂಭ ಮಾಡುವಾಗ ಈ ಅವಗಢ ಸಂಭವಿಸಿದೆ. ಮೃತರು ಗುತ್ತಿಗೆ ಕಾರ್ಮಿಕರು ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಎನ್‌ಎಲ್‌ಸಿ ಲಿಗ್ನೈಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 7 ರ ಘಟನೆಯಂತೆಯೇ ಅತಿಯಾದ ಉಷ್ಣತೆ ಮತ್ತು ಅಧಿಕ ಒತ್ತಡವು ಸ್ಫೋಟಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್