AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ. ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ […]

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 01, 2020 | 3:21 PM

Share

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ.

ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಹಾಗೂ ಸ್ಫೋಟದಿಂದ 17 ಜನರಿಗೆ ಗಾಯಗಳಾಗಿವೆ. ಇದೇ ಪ್ಲಾಂಟ್‌ನಲ್ಲಿ ಮೇ 7 ರಂದು ಸಹ ಸ್ಫೋಟ ಸಂಭವಿಸಿತ್ತು. ಇದು ಎರಡನೇ ಬಾರಿಗೆ ಸ್ಫೋಟಗೊಳ್ಳುತ್ತಿರುವುದು.

ಇಂದು ಬೆಳಿಗ್ಗೆ ಕಾರ್ಮಿಕರು ಕೆಲಸವನ್ನು ಪುನರಾರಂಭ ಮಾಡುವಾಗ ಈ ಅವಗಢ ಸಂಭವಿಸಿದೆ. ಮೃತರು ಗುತ್ತಿಗೆ ಕಾರ್ಮಿಕರು ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಎನ್‌ಎಲ್‌ಸಿ ಲಿಗ್ನೈಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 7 ರ ಘಟನೆಯಂತೆಯೇ ಅತಿಯಾದ ಉಷ್ಣತೆ ಮತ್ತು ಅಧಿಕ ಒತ್ತಡವು ಸ್ಫೋಟಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್