AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ. ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ […]

ನೈವೇಲಿ ಥರ್ಮಲ್‌ ಘಟಕದಲ್ಲಿ ಬಾಯ್ಲರ್​ ಸ್ಫೋಟ, 6 ಮಂದಿ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 01, 2020 | 3:21 PM

Share

ಚೆನ್ನೈ: ಕೊರೊನಾ ಸಂಕಷ್ಟದ ನಡುವೆ ಕೈಗಾರಿಕಾ ಅವಗಡಗಳು ಹೆಚ್ಚಾಗಿ ವರದಿಯಾಗುತ್ತಿವೆ. ವಿಶಾಖಪಟ್ಟಣಂ ಮಹಾದುರಂತ ಸೇರಿದಂತೆ ಮೂರ್ನಾಲ್ಕು ಪ್ರಕರಣಗಳು ವರದಿಯಾಗಿವೆ. ಇದರಿಂದ ಅಮಾಯಕ ಜೀವಗಳು ಬಲಿಯಾಗಿವೆ. ಮೂಕ ಪ್ರಾಣಿಗಳು ಸಹ ಜೀವ ತೆತ್ತಿವೆ. ಕೊರೊನಾ ಸಮಯದಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಲಾಕ್​ಡೌನ್ ಮುಗಿದ ಬಳಿಕ ದಿಢೀರನೆ ಕೆಲಸ ಶುರು ಮಾಡಿದಾಗ ಸರಿಯಾದ ಮೈಂಟೆನೆನ್ಸ್ ಇಲ್ಲದೆ ಕೈಗಾರಿಕೆಗಳಲ್ಲಿ ಇಂತಹ ಅಚಾತುರ್ಯಗಳು ಸಂಭವಿಸುತ್ತಿವೆ.

ಇದೇ ರೀತಿ ತಮಿಳುನಾಡಿನಲ್ಲಿ ನೈವೇಲಿ ಥರ್ಮಲ್‌ ಪ್ಲಾಂಟ್‌ನ ಘಟಕ 5 ಬಾಯ್ಲರ್​ನಲ್ಲಿ ಸ್ಫೋಟಗೊಂಡು 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಹಾಗೂ ಸ್ಫೋಟದಿಂದ 17 ಜನರಿಗೆ ಗಾಯಗಳಾಗಿವೆ. ಇದೇ ಪ್ಲಾಂಟ್‌ನಲ್ಲಿ ಮೇ 7 ರಂದು ಸಹ ಸ್ಫೋಟ ಸಂಭವಿಸಿತ್ತು. ಇದು ಎರಡನೇ ಬಾರಿಗೆ ಸ್ಫೋಟಗೊಳ್ಳುತ್ತಿರುವುದು.

ಇಂದು ಬೆಳಿಗ್ಗೆ ಕಾರ್ಮಿಕರು ಕೆಲಸವನ್ನು ಪುನರಾರಂಭ ಮಾಡುವಾಗ ಈ ಅವಗಢ ಸಂಭವಿಸಿದೆ. ಮೃತರು ಗುತ್ತಿಗೆ ಕಾರ್ಮಿಕರು ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಎನ್‌ಎಲ್‌ಸಿ ಲಿಗ್ನೈಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 7 ರ ಘಟನೆಯಂತೆಯೇ ಅತಿಯಾದ ಉಷ್ಣತೆ ಮತ್ತು ಅಧಿಕ ಒತ್ತಡವು ಸ್ಫೋಟಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ