AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಟ್ರ್ಯಾಕ್ಟರ್​ ಚಕ್ರಕ್ಕೆ ಸಿಲುಕಿ 6 ತಿಂಗಳ ಮಗು ಸಾವು; ಸಿಸಿಟಿವಿಯಲ್ಲಿ ಸೆರೆಯಾಯ್ತು ದುರಂತ ಘಟನೆ

ಬೈಕ್ ಸವಾರನ ನಿಯಂತ್ರಣ ತಪ್ಪಿದ ಬಳಿಕ ಬೈಕ್​ನಲ್ಲಿದ್ದ ಗಂಡ- ಹೆಂಡತಿ ಹಾಗೂ ಮಗು ರಸ್ತೆಗೆ ಬಿದ್ದಿದ್ದಾರೆ. ವೇಗವಾಗಿ ಬಂದ ಟ್ರ್ಯಾಕ್ಟರ್‌ನ ಚಕ್ರಕ್ಕೆ ಸಿಲುಕಿ 6 ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ

Accident: ಟ್ರ್ಯಾಕ್ಟರ್​ ಚಕ್ರಕ್ಕೆ ಸಿಲುಕಿ 6 ತಿಂಗಳ ಮಗು ಸಾವು; ಸಿಸಿಟಿವಿಯಲ್ಲಿ ಸೆರೆಯಾಯ್ತು ದುರಂತ ಘಟನೆ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Sep 23, 2022 | 1:58 PM

Share

ಮುಂಬೈ: ಮಹಾರಾಷ್ಟ್ರದ (Maharashtra) ರಾಜ್‌ಗುರುನಗರ ಪ್ರದೇಶದ ಪುಣೆ-ನಾಸಿಕ್ ಹೆದ್ದಾರಿಯಲ್ಲಿ ಇಂದು ವೇಗವಾಗಿ ಬಂದ ಟ್ರ್ಯಾಕ್ಟರ್‌ಗೆ ಸಿಕ್ಕಿ 6 ತಿಂಗಳ ಮಗುವೊಂದು ಸಾವನ್ನಪ್ಪಿರುವ ಆಘಾತಕಾರಿ ಘಟನೆ (Shocking News) ನಡೆದಿದೆ. ಮಗುವನ್ನು ಎತ್ತಿಕೊಂಡು ಬೈಕ್​ನಲ್ಲಿ ಹೋಗುತ್ತಿದ್ದ ಗಂಡ- ಹೆಂಡತಿ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದಾಗ ಟ್ರಾಕ್ಟರ್​ನ ವೇಗದಿಂದ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದಾರೆ. ಆಗ ತಾಯಿಯ ಕೈಯಲ್ಲಿದ್ದ 6 ತಿಂಗಳ ಮಗು ರಸ್ತೆಯ ಮೇಲೆ ಬಿದ್ದು ಸಾವನ್ನಪ್ಪಿದೆ. ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳಲ್ಲಿ (CCTV Footage) ಈ ದೃಶ್ಯ ಸೆರೆಯಾಗಿದೆ.

ಬೈಕ್ ಕೆಳಗೆ ಬಿದ್ದಾಗ ಟ್ರಾಕ್ಟರ್​ನ ಹಿಂಬದಿಯ ಚಕ್ರಕ್ಕೆ ಸಿಲುಕಿ ಮಗು ಸ್ಥಳದಲ್ಲೇ ಮೃತಪಟ್ಟಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್​ ಆಗಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿದ ಬಳಿಕ ಬೈಕ್​ನಲ್ಲಿದ್ದ ಗಂಡ- ಹೆಂಡತಿ ಹಾಗೂ ಮಗು ರಸ್ತೆಗೆ ಬಿದ್ದಿದ್ದಾರೆ. ವೇಗವಾಗಿ ಬಂದ ಟ್ರ್ಯಾಕ್ಟರ್‌ನ ಚಕ್ರಕ್ಕೆ ಸಿಲುಕಿ 6 ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Chamarajanagar News: ಪತ್ನಿಯ ವಿರೋಧ ಲೆಕ್ಕಿಸದೇ 25 ದಿನಗಳ ಮಗುವನ್ನು 50 ಸಾವಿರಕ್ಕೆ ಮಾರಿದ ಅಪ್ಪ

ಅಪಘಾತ ಸಂಭವಿಸುವ ಮೊದಲು ಮಗು ಮಹಿಳೆಯ ತೊಡೆಯ ಮೇಲೆ ಕುಳಿತುಕೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಕ್ಕಪಕ್ಕ ವಾಹನಗಳನ್ನು ಪಾರ್ಕಿಂಗ್ ಮಾಡಿದ್ದರಿಂದ ಮತ್ತು ಇಕ್ಕಟ್ಟಾದ ರಸ್ತೆಯಿಂದಾಗಿ ಬೈಕ್ ಸ್ಕಿಡ್ ಆಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು