AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆ ಸಿಕ್ಕ ಲಾಕೆಟ್ ನುಂಗಿದ 6 ತಿಂಗಳ ಮಗು.. ಆಮೇಲೆ ಅದನ್ನು ಹೊರತೆಗೆದಿದ್ದು ಹೇಗೆ ಗೊತ್ತಾ!?

ವೈದ್ಯರು ಮಗುವನ್ನು ಸ್ಕ್ಯಾನ್ ಮಾಡಿದ್ದು, ಹೊಟ್ಟೆಯಲ್ಲಿ ಲಾಕೆಟ್ ಪತ್ತೆಯಾಗಿದೆ. ಆದರೆ ಮಗುವಿನ ಹೊಟ್ಟೆಯಿಂದ ಲಾಕೆಟ್ ತೆಗೆಯುವುದು ಹೇಗೆ ಎಂಬುದು ಹರಸಾಹಸವಾಗಿತ್ತು. ಹೇಳೀಕೇಳೀ ಅದು ಎಳೆಯ ಮಗು. ಅದು ಶಸ್ತ್ರಚಿಕಿತ್ಸೆಗೆ ಅನುವು ಮಾಡಿಕೊಡುತ್ತದಾ ಎಂದೂ ವೈದ್ಯರು ಅನುಮಾನ/ ಆತಂಕ ವ್ಯಕ್ತಪಡಿಸಿದ್ದಾರೆ.

ಕೈಗೆ ಸಿಕ್ಕ ಲಾಕೆಟ್ ನುಂಗಿದ 6 ತಿಂಗಳ ಮಗು.. ಆಮೇಲೆ ಅದನ್ನು ಹೊರತೆಗೆದಿದ್ದು ಹೇಗೆ ಗೊತ್ತಾ!?
ಕೈಗೆ ಸಿಕ್ಕ ಲಾಕೆಟ್ ನುಂಗಿದ 6 ತಿಂಗಳ ಮಗು.. ಆಮೇಲೆ ಅದನ್ನು ಹೊರತೆಗೆದಿದ್ದು ಹೇಗೆ ಗೊತ್ತಾ!?
ಸಾಧು ಶ್ರೀನಾಥ್​
|

Updated on: Jan 09, 2024 | 2:00 PM

Share

ಸಾಮಾನ್ಯವಾಗಿ ಹೆಚ್ಚಿನ ಮಕ್ಕಳು ಕೈಗೆ ಸಿಕ್ಕಿದ್ದನ್ನೆಲ್ಲ ಬಾಯಿಗೆ ಹಾಕಿಕೊಂಡು ನುಂಗುತ್ತಾರೆ. ನುಂಗಿದ್ದನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಯ ಅಗತ್ಯವಿರುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಆರು ತಿಂಗಳ ಬಾಲಕಿಯೊಬ್ಬಳು ಲಾಕೆಟ್ ನುಂಗಿದ್ದಾಳೆ.. ಆದರೆ ಶಸ್ತ್ರಚಿಕಿತ್ಸೆ ಮಾಡದೆ ಮಗುವನ್ನು ಸುರಕ್ಷಿತವಾಗಿಸಿ, ಲಾಕೆಟ್ ಹೊರತೆಗೆದಿದ್ದಾರೆ. ವಿವರಗಳಿಗೆ ಹೋದರೆ..

ನಲ್ಗೊಂಡ ಜಿಲ್ಲೆ ನಕ್ರೇಕಲ್ ಮಂಡಲದ ತಾಟಿಕಲ್ ಗ್ರಾಮದ ಮೊಗಿಲಿ ಈಯಮ್ಮ ಮತ್ತು ಭಾಸ್ಕರ್ ದಂಪತಿಗೆ ಚಾರ್ವಿಕಾ ಎಂಬ ಆರು ತಿಂಗಳ ಹೆಣ್ಣು ಮಗುವಿದೆ. ಮಗುವನ್ನು ಕೆಳಗೆ ಮಲಗಿಸಿದ್ದಾಗ, ಅವಳು ಕೈಗೆ ಸಿಕ್ಕ ಲಾಕೆಟ್‌ನೊಂದಿಗೆ ಆಟವಾಡಿದ್ದಾಳೆ. ಆದರೆ ಸ್ವಲ್ಪ ಸಮಯದಲ್ಲಿ ತಾಯಿ ಅಡುಗೆ ಮನೆಗೆ ಹೋದಾಗ ಚಾರ್ವಿಕಾ ಅಳುವುದನ್ನು ಕೇಳಿಸಿದೆ. ಮಗು ಯಾಕೆ ಅಳುತ್ತಿದ್ದಾಳೆ ಎಂದು ತಾಯಿ ಪರಿಶೀಲಿಸಿದಾಗ ಮಗುವಿನ ಕೈಯಲ್ಲಿ ಇರಬೇಕಾದ ಲಾಕೆಟ್ ಕಂಡುಬಂದಿಲ್ಲ. ಅದರಿಂದ ಮಗು ಲಾಕೆಟ್ ನುಂಗಿರಬಹುದೆಂದು ಶಂಕಿಸಿ ತಕ್ಷಣವೇ ನಲ್ಗೊಂಡ ಆರ್.ಕೆ. ಆಸ್ಪತ್ರೆಗೆ ಕರೆತಂದಿದ್ದಾರೆ.

ಗ್ಯಾಸ್ಟ್ರೋಲಾಜಿಸ್ಟ್ ಡಾ. ಕೀರ್ತಿ ರೆಡ್ಡಿ ಮಗುವನ್ನು ಸ್ಕ್ಯಾನ್ ಮಾಡಿದ್ದು, ಆಕೆಯ ಹೊಟ್ಟೆಯಲ್ಲಿ ಲಾಕೆಟ್ ಪತ್ತೆಯಾಗಿದೆ. ಆದರೆ ಮಗುವಿನ ಹೊಟ್ಟೆಯಿಂದ ಲಾಕೆಟ್ ತೆಗೆಯುವುದು ಹೇಗೆ ಎಂಬುದು ಹರಸಾಹಸವಾಗಿತ್ತು. ಶಸ್ತ್ರಚಿಕಿತ್ಸೆ ಮೂಲಕ ಹೊಟ್ಟೆಯಿಂದ ಲಾಕೆಟ್ ತೆಗೆಯಲು ಯೋಚಿಸಲಾಗಿತ್ತು. ಹೇಳೀಕೇಳೀ ಅದು ಎಳೆಯ ಮಗು. ಅದು ಶಸ್ತ್ರಚಿಕಿತ್ಸೆಗೆ ಅನುವು ಮಾಡಿಕೊಡುತ್ತಾದಾ ಎಂದು ವೈದ್ಯರು ಅನುಮಾನ/ ಆತಂಕ ವ್ಯಕ್ತಪಡಿಸಿದ್ದಾರೆ.

Also Read: ಮನೆಯಲ್ಲಿ ಹೇಳದೆ ಕೇಳದೆ ತಮಿಳುನಾಡಿನ 3 ಶಾಲಾ ಬಾಲಕಿಯರು ಕೊರಿಯಾಗೆ ಹೊರಟು ನಿಂತರು! ಯಾಕೆ? ಆ ಮೇಲೆ ಏನಾಯಿತು?

ಡಾ. ಕೀರ್ತಿ ರೆಡ್ಡಿ ಅವರು ಯಾವುದೇ ಶಸ್ತ್ರಚಿಕಿತ್ಸೆ ನಡೆಸದೆ ಎಂಡೋಸ್ಕೋಪ್ ಮೂಲಕ ಮಗುವಿನ ಹೊಟ್ಟೆಯಿಂದ ಲಾಕೆಟ್ ಅನ್ನು ಜಾಣ್ಮೆಯಿಂದ ಹೊರತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಇಲ್ಲದೆ ಎಂಡೋಸ್ಕೋಪಿ ಮೂಲಕ ಆರು ತಿಂಗಳ ಮಗುವಿನ ಹೊಟ್ಟೆಯಿಂದ ಲಾಕೆಟ್ ತೆಗೆಯುವುದು ಅಪರೂಪ ಎನ್ನುತ್ತಾರೆ ಡಾ. ಕೀರ್ತಿ ರೆಡ್ಡಿ. ಮಗು ಈಗ ಆರೋಗ್ಯವಾಗಿದೆ ಎಂದು ಹೇಳಿದ್ದಾರೆ. ಹೊಟ್ಟೆಯಲ್ಲಿದ್ದ ಲಾಕೆಟ್ ತೆಗೆದು ತಮ್ಮ ಮಗುವನ್ನು ಪ್ರಾಣಾಪಾಯದಿಂದ ಪಾರು ಮಾಡಿದ ವೈದ್ಯರಿಗೆ ಮಗುವಿನ ಪೋಷಕರು ಕೃತಜ್ಞತೆ ಸಲ್ಲಿಸಿದ್ದಾರೆ. ಜೊತೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ… ಮನೆಯಲ್ಲಿ ಮಗು ಇರುವಾಗ ಸದಾ ಮೈಯೆಲ್ಲಾ ಕಣ್ಣಾಗಿಸಿಕೊಂಡು ಜೋಪಾನ ಮಾಡುವ ಗುರುತರ ಜವಾಬ್ದಾರಿ ಪಾಲಕರದ್ದಾಗಿರುತ್ತದೆ ಎಂದು ಕಿವಿಮಾತು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್